ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ಸುಜಾತ ಸರ್ಕಲ್ ನಲ್ಲಿ ಬಾಂಬರ್ ಬಸ್ ಹತ್ತಿ ತುಮಕೂರಿನಲ್ಲಿ ಇಳಿದಿದ್ದಾನೆ.
ತುಮಕೂರಿನಿಂದ ಬಳ್ಳಾರಿಗೆ ಬಸ್ ನಲ್ಲಿ ಬಂದು ನಂತರ ಮಂತ್ರಾಲಯ- ಗೋಕರ್ಣ ಬಸ್ ಹತ್ತಿ ಭಟ್ಕಳಕ್ಕೆ ತೆರಳಿರುವ ಶಂಕೆ ವ್ಯಕ್ತವಾಗಿದೆ ಎಂದು ವರದಿ ತಿಳಿಸಿದೆ. ಈ ವಿಚಾರ ತಿಳಿಯುತ್ತಿದ್ದಂತೆ ರಾಷ್ಟ್ರೀಯ ತನಿಖಾ ದಳ (NIA) ಬಳ್ಳಾರಿ ಮತ್ತು ತುಮಕೂರು ಬಸ್ ನಿಲ್ದಾಣಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದೆ. ತಡರಾತ್ರಿಯಿಂದ ಬೆಳಗಿನ ಜಾವದವರೆಗೂ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಎನ್ ಐಎ ತಂಡ ಮಾಹಿತಿ ಪಡೆದಿದ್ದು ಬಳ್ಳಾರಿ ಮತ್ತು ತುಮಕೂರು ಪೊಲೀಸರು ಸಹಕಾರ ನೀಡಿದ್ದಾರೆ. ಬೆಂಗಳೂರಿಂದ ಎರಡು ಕಾರುಗಳಲ್ಲಿ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ತೆರಳಿ ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನ ಸುಳಿವು ಕೊಟ್ಟವರಿಗೆ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ. ಎನ್ ಐಎ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಿದ್ದು, ಶಂಕಿತನ ಸುಳಿವು ನೀಡಿದವರ ಹೆಸರು ಗೌಪ್ಯವಾಗಿ ಇಡುವುದಾಗಿ ತಿಳಿಸಿದೆ. ಇಲ್ಲಿಯವರೆಗೆ ಆರೋಪಿ ಚಹರೆ ಕಾಣುವ ಫೋಟೋ ಇರಲಿಲ್ಲ. ಎನ್ ಐಎ ಬಿಡುಗಡೆ ಮಾಡಿರುವ ಫೋಟೋದಲ್ಲಿ ಅಲ್ಪ ಸ್ವಲ್ಪ ಮುಖ ಕಾಣಿಸುತ್ತದೆ ಮತ್ತು ಕೈ ಬರಹದ ಚಿತ್ರವನ್ನೂ ಕೂಡ ಬಿಡುಗಡೆ ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


