ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ – ಮೋದಿ ಸರ್ಕಾರ ಭರ್ಜರಿ ಉಡುಗೊರೆಯೊಂದನ್ನು ನೀಡಿದೆ. ತುಟ್ಟಿ ಭತ್ಯೆ ಜತೆಯಲ್ಲೇ ತುಟ್ಟಿ ಭತ್ಯೆ ಪರಿಹಾರದ ಹೆಚ್ಚುವರಿ ಕಂತನ್ನು ನೀಡಲು ಗುರುವಾರ ಕೇಂದ್ರ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ.
ಈ ಮೂಲಕ 49.18 ಲಕ್ಷ ಉದ್ಯೋಗಿಗಳು ಮತ್ತು 67.95 ಲಕ್ಷ ಪಿಂಚಣಿದಾರರಿಗೆ ಲಾಭವಾಗಲಿದೆ. ಶೇಕಡ 4 ಪ್ರಮಾಣದ ಬೊಕ್ಕಸಕ್ಕೆ ವಾರ್ಷಿಕ 12,868.72 ಕೋಟಿ ರೂಪಾಯಿ ಹೊರೆಯಾಗಲಿದೆ. 7ನೇ ವೇತನ ಆಯೋಗದ ಶಿಫಾರಸುಗಳ ಆಧಾರದ ಅಂಗೀಕೃತ ಸೂತ್ರದಂತೆ ಈ ಹೆಚ್ಚಳ ಮಾಡಲಾಗಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆ ಗ್ರಾಹಕರಿಗೆ ನೀಡಲಾಗುವ 300 ರೂಪಾಯಿ ಸಬ್ಸಿಡಿ ಮುಂದುವರಿಸಲೂ ಕೂಡ ಸಭೆ ಸಮ್ಮತಿಸಿದೆ.
ಸಬ್ಸಿಡಿಯನ್ನು ಉಜ್ವಲ ಯೋಜನೆಯ 10.27 ಕೋಟಿ ಫಲಾನುಭವಿಗಳ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುತ್ತದೆ. ಇದಕ್ಕಾಗಿ 2024-25ನೇ ಹಣಕಾಸು ವರ್ಷದಲ್ಲಿ ಒಟ್ಟು 12,000 ಕೋಟಿ ರೂ. ವೆಚ್ಚವಾಗಲಿದೆ. 14.2 ಕೆಜಿ ಸಿಲಿಂಡರ್ ಗೆ ವರ್ಷಕ್ಕೆ 12 ರೀಫಿಲ್ ರೆಗೆ ಸಬ್ಸಿಡಿ ಕೊಡಲಾಗುತ್ತದೆ. 2016ರ ಮೇ ತಿಂಗಳಲ್ಲಿ ಉಜ್ವಲ ಯೋಜನೆ ಜಾರಿಗೆ ಬಂದಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


