ಕೊರಟಗೆರೆ: ಪಟ್ಟಣದ ರಾಜೀವ್ ಭವನ ಅವರಣದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಲೋಕಸಭಾ ಚುನಾವಣೆ ಪ್ರಚಾರ ಚಾಲನೆ ಕಾರ್ಯಕ್ರಮವನ್ನು ಸಚಿವರುಗಳಾದ ಡಾ.ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ ಉದ್ಘಾಟಿಸಿದರು.
ಕೊರಟಗೆರೆ ರಾಜ್ಯದ ಜನರು ಶೇ. 18 ರಷ್ಟು ಜಿಎಸ್ಟಿ ಮುಖಾಂತರ 4.5 ಲಕ್ಷ ಕೋಟಿ ತೆರಿಗೆ ಹಣವನ್ನು ಕೇಂದ್ರಕ್ಕೆ ಕಟ್ಟಿದರೆ ಅದರಲ್ಲಿ ಕೇಂದ್ರ ಸರ್ಕಾರ ನಮಗೆ ನೀಡುವುದು ಕೇವಲ 50 ಸಾವಿರ ಕೋಟಿ ಮಾತ್ರವಾಗಿದ್ದು ಉಳಿದ ಹಣವನ್ನು ಇತರ ರಾಜ್ಯಗಳಿಗೆ ಹಂಚಿಕೆ ಮಾಡುತ್ತಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು.
ಅವರು ಕೊರಟಗೆರೆ ಪಟ್ಟಣದ ರಾಜೀವ ಭವನ ಆವರಣದಲ್ಲಿ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಲೋಕಸಭಾ ಚುನಾವಣಾ ಪ್ರಚಾರ ಸಭೆಗೆ ಚಾಲನೆ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕೇಂದ್ರ ಸರ್ಕಾರವು ರಾಜ್ಯಕ್ಕೆ ಮೊದಲಿನಿಂದಲೂ ಅನ್ಯಾಯ ಮಾಡುತ್ತಿದ್ದು ರಾಜ್ಯದಲ್ಲಿ ಬರವು ಬೀಕರ ಪರಿಸ್ಥಿತಿ ಎದುರಿಸುತ್ತಿದ್ದು 236 ತಾಲೂಕು ಗಳ ಪೈಕಿ 226 ತಾಲೂಕುಗಳು ಬರ ಪೀಡಿತ ತಾಲೂಕುಗಳಾಗಿದ್ದು ಕೇಂದ್ರವು ಎಸ್.ಡಿ.ಆರ್.ಫೆ ನಿಂದ ಒಂದು ರೂ ಸಹ ರಾಜ್ಯಕ್ಕೆ ನೀಡಿಲ್ಲ ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ಸರ್ಕಾರವು 5 ಗ್ಯಾರಂಟಿಗಳ ಜೋತೆಯಲ್ಲಿ ರೈತರ ಬ್ಯಾಂಕ್ ಖಾತೆಗಳಿಗೆ 52 ಸಾವಿರ ರೂಗಳನ್ನು ಹಾಕಿದ್ದೇವೆ, ಇಂದು ಜಿಲ್ಲಾ ಜೆಡಿಎಸ್ ಕಾರ್ಯಾದ್ಯಕ್ಷ ಮಹಾಲಿಂಗಪ್ಪ ಮತ್ತು ಮಾಜಿ ಜಿ.ಪಂ.ಅಧ್ಯಕ್ಷೆ ಪ್ರೇಮಾ ರವರುಗಳು ಜೆಡಿಎಸ್ ಪಕ್ಷ ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಬಂದಿರುವು ಕ್ಷೇತ್ರಕ್ಕೆ ಮತ್ತಷ್ಟು ಬಲ ಬಂದಿದೆ, ಹಿಂದುಳಿದ ವರ್ಗಗಳ ನಾಯಕರಾಗಿದ್ದ ಮಹಾಲಿಂಗಪ್ಪ ಜೆಡಿಎಸ್ ಪಕ್ಷವು ಕೋಮುವಾದಿಗಳ ಜೋತೆ ಕೈ ಜೋಡಿಸಿದಕ್ಕಾಗಿ ಬೇಸರಗೊಂಡು ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದಾರೆ, 2023ರ ತುಮಕೂರು ಲೋಕಚಭಾ ಕ್ಷೇತ್ರದ ಅಭ್ಯರ್ಥಿಯಾದ ಎಸ್.ಪಿ.ಮುದ್ದಹನುಮೇಗೌಡರು 2014 ರಿಂದ 2019 ರವರೆಗೆ ತುಮಕೂರು ಲೋಕಸಭಾ ಸಂಸದರಾಗಿ ಉತ್ತಮ ಕೆಲಸ ಮಾಡಿದ್ದಾರೆ, ತುಮಕೂರು ಲೋಕಸಭೆಯನ್ನು ತಮ್ಮ ವಾಕ್ ಸಮರ ಮತ್ತು ರೈತರ ಹಾಗೂ ಬಡವರ ಬಗ್ಗೆ ಸಂಸತ್ ನಲ್ಲಿ ಮಾತನಾಡಿ ಇಡೀ ದೇಶಕ್ಕೆ ತೋರಿಸಿದ್ದಾರೆ, ವಿರೋದ ಪಕ್ಷದಲ್ಲಿದ್ದರೂ ಕೇಂದ್ರ ಸರ್ಕಾರವನ್ನು ಯುಎನ್ ಲ್ಲಿ ಪ್ರತಿನಿಧಿಸಿದ್ದಾರೆ, ಕೆಲವು ಕಾರಣಾಂತದಿಂದ ಪಕ್ಷ ತೋರೆದರೂ ಮತ್ತೆ ಗೋಡಿಗೆ ಬಂದು ಅಭ್ಯರ್ಥಿಯಾಗಿದ್ದು ಅವರನ್ನು ಗೆಲ್ಲಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಸಚಿವ ಕೆ.ಎನ್ ರಾಜಣ್ಣ ಮಾತನಾಡಿ ಜೆಡಿಎಸ್ ಪಕ್ಷ ಒಂದು ಮುಳುಗುವ ಹಡಗಿನ ಪಕ್ಷವಾಗಿದೆ, ಅದು ಈಗ ಕೋಮುವಾಗಿಗಳ ಜೊತೆ ಕೈಜೋಡಿಸಿದೆ ಬಿಜೆಪಿ ಪಕ್ಷವು ಸುಳ್ಳು ಹಿಂದುತ್ವದಲ್ಲಿ ಯುವಕರ ದಾರಿ ತಪ್ಪಿಸಿದರೆ ಜೆಡಿಎಸ್ ಪಕ್ಷವು ಅನುಕೂಲಕ್ಕೆ ತಕ್ಕಂತೆರ ತನ್ನ ನೀತಿಗಳನ್ನು ಬದಲಾಯಿಸಿಕೊಳ್ಳುತ್ತದೆ, ದೇವೇಗೌಡರು ಮಹಾನ್ ಸುಳ್ಳಿನ ವ್ಯಕ್ತಿಯಾಗಿದ್ದು ಮುಂದಿನ ಜನ್ಮದಲ್ಲಿ ಮುಸ್ಲಿಂ ನಾಗಿ ಹುಟ್ಟುವೇ, ಮೋದಿ ಪ್ರಧಾನಿ ಯಾದರ ದೇಶವನ್ನೇ ಬಿಟ್ಟು ಹೊರಟುಹೊಗುವೇ ಎಂದು ಜನರಿಗೆ ಸುಳ್ಳು ಹೇಳುತ್ತಾ ಈಗ ಕೋಮುವಾದಿಗಳ ಜೋತೆ ಕೈಜೋಡಿಸಿ ದೇಶಕ್ಕೆ ಟೋಪಿ ಹಾಕುವ ಮಹಾನ್ ಸುಳ್ಳುಗಾರ ಮೋದಿಜೋತೆ ಕೈಜೋಡಿಸಿದ್ದಾರೆ, ಕಾಂಗ್ರೆಸ್ ಪಕ್ಷವು ಬಡವರ ಪಕ್ಷವಾಗಿದ್ದು ಶೋಷಿತ ವರ್ಗದವರ ಪರ ನಿಲ್ಲುವ ಪಕ್ಷವಾಗಿದೆ, ಈ ಬಾರಿ ಜನರು ಕಾಂಗ್ರೆಸ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದು ತುಮಕೂರಿನಲ್ಲಿ ಮುದ್ದಹನುಮೇಗೌಡರ ಗೆಲುವು ಖಚಿತ ಎಂದರು.
ಮಾಜಿ ಸಂಸದ ಮುದ್ದಹನುಮೇಗೌಡ ಮಾತನಾಡಿ ಪಕ್ಷಾಂತರ ಮಾಡಿ ಮರಳಿ ಪಕ್ಷಕ್ಕೆ ಬಂದಿರುವುದು ಬೇಸರ ತಂದಿದೆ, ನನ್ನ ಮೇಲೆ ತುಮಕೂರು ಜಿಲ್ಲೆಯ ಜನತೆ ಮತ್ತು ವೇದಿಕೆಯ ಮೇಲಿರುವ ನಾಯಕರುಗಳು ಭರವಸೆ ಇಟ್ಟಿದ್ದಾರೆ ಕಳೆದ ಬಾರಿಯ ಲೋಸಭಾ ಸದಸ್ಯನಾಗಿದ್ದ ಕಾಲದಲ್ಲಿ ಶೇ.96 ರಷ್ಟು ಸಂಸತ್ ಕಲಾಪದಲ್ಲಿ ಕಳೆದಿದ್ದೇನೆ 700 ಪ್ರಶ್ನೆಯನ್ನು ಹಾಕಿದ್ದೇನೆ, 100 ಗಂಭೀರ ವಿಚಾರಗಳನ್ನು ಚರ್ಚಿಸಿದ್ದೇನೆ, ರೈತರ, ಬಡವರ, ಶೋಷಿತರ ಪರವಾಗಿ ಹೋರಾಡಿದ್ದೇವೆ ಮುಂದೆಯೂ ಅದೇ ರೀತಿ ಮಾಡುತ್ತೇನೆ ಎಂದರು.
ಸಮಾರಂಭದಲ್ಲಿ ತುಮಕೂರು ಜಿಲ್ಲೆಯ ಜೆಡಿಎಸ್ ಪಕ್ಷದ ಕಾಯಾಧ್ಯಕ್ಷ ಮಹಾಲಿಂಗಪ್ಪ, ಜಿ.ಪಂ.ಮಾಜಿ ಅಧ್ಯಕ್ಷ ಪೇಮಾ ಸೇರಿದಂತೆ ಕ್ಷೇತ್ರದ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಹಲವು ಮುಖಂಡರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು.
ಕಾರ್ಯಕ್ರಮದಲ್ಲಿ ಶಾಸಕರುಗಳಾದ ಶ್ರಿನಿವಾಸ್, ವೆಂಕಟೇಶ್, ವಿಧಾನ ಪರಿಷತ್ ಸದಸ್ಯ ರಾಜೇಂದ್ರ, ಮಾಜಿ ಶಾಸಕರುಗಳಾದ ಕಿರಣ್ಕುಮಾರ್, ಗಂಗಹನುಮಯ್ಯ, ರಫೀಕ್ ಅಹಮದ್, ಜಿಲ್ಲಾ ಕಾಂಗ್ರೆಸ್ ಆದ್ಯಕ್ಷ ಚಂದ್ರಶೇಖರ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕೊಡ್ಲಹಳ್ಳಿ ಅಶ್ವತ್ಥನಾರಾಯಣ್, ಅರಕೆರೆ ಶಂಕರ್, ಮುಖಂಡರುಗಳಾದ ವೇಣುಗೋಪಾಲ್, ಸಂತೋಷ್ ಜಯಚಂದ್ರ, ಇಕ್ಬಾಲ್ ಅಹಮದ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


