ತುಮಕೂರು: ಪಿಡಬ್ಲ್ಯೂ ಡಿ ಕಚೇರಿಯಲ್ಲಿ ಟೆಂಡರ್ ಕರಾರು ಮಾಡಿಕೊಡದ ಇಂಜಿನಿಯರ್ ಧೋರಣೆ ವಿರುದ್ಧ ವಿರುದ್ಧ ಧರಣಿ ಕುಳಿತಿದ್ದ ಕಾಂಗ್ರೆಸ್ ಮುಖಂಡ ರಾಯಸಂದ್ರ ರವಿಕುಮಾರ್ ಮೇಲೆಯೇ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಬೆಂಬಲಿಗರು ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪ ವ್ಯಕ್ತವಾಗಿದೆ.
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷನಾಗಿರೋ ರಾಯಸಂದ್ರ ರವಿಕುಮಾರ್, ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಬೆಂಬಲಿಗನೂ ಆಗಿರೋ ರವಿಕುಮಾರ್, 2018ರ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾಗಿದ್ದರು.
ನಿನ್ನೆ ತುಮಕೂರು ನಗರದ ಪಿಡಬ್ಲೂಡಿ ಕಚೇರಿ ಆವರಣದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ರಾತ್ರಿ ಸುಮಾರು 10.30ರ ವೇಳೆ ಏಕಾಏಕಿ ಆವರಣದೊಳಗೆ ನುಗ್ಗಿದ ಶಾಸಕ ಎಸ್.ಆರ್. ಶ್ರೀನಿವಾಸ್ ಮತ್ತು ಸಹಚರರು ಹಲ್ಲೆ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ.
ಅವಾಚ್ಯ ಶಬ್ಧಗಳಿಂದ ನಿಂದಿಸಿ, ರಾಯಸಂದ್ರ ರವಿಕುಮಾರ್ ಗೆ ಹಿಗ್ಗಾಮುಗ್ಗಾ ಥಳಿಸಲಾಗಿದೆ. ತಾಕತ್ ಇದ್ದರೆ ನನ್ನ ಕ್ಷೇತ್ರದಲ್ಲಿ ಕೆಲಸ ಮಾಡಿಸು, ಸುಟ್ಟು ಹಾಕಿಬಿಡುತ್ತೇನೆ ಎಂದು ಜೀವಬೆದರಿಕೆ ಹಾಕಿರೋದಾಗಿ ಆರೋಪ ಮಾಡಲಾಗಿದೆ.
ರಾಯಸಂದ್ರ ರವಿಕುಮಾರ್ ಅನ್ನು ಕಾರಿನಲ್ಲಿ ಕೂರಿಸಿಕೊಂಡು ಕಿಡ್ನಾಪ್ ಮಾಡೋದಕ್ಕೂ ಯತ್ನಿಸಲಾಗಿದೆ. ಈ ವೇಳೆ ತಪ್ಪಿಸಿಕೊಂಡು ಓಡಿಹೋಗಿ ತಿಲಕ್ ಪಾರ್ಕ್ ಪೊಲೀಸ್ ಠಾಣೆಗೆ ಹೋಗಿ ರವಿಕುಮಾರ್ ರಕ್ಷಣೆ ಪಡೆದುಕೊಂಡಿದ್ದಾರೆ.
ಗಲಾಟೆ ಬಿಡಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೇಯೂ ಹಲ್ಲೆ ಮಾಡಲಾಗಿದೆ, ಸ್ಥಳದಲ್ಲಿದ್ದ ಖುರ್ಚಿಗಳನ್ನೆಲ್ಲ ಪುಡಿ ಪುಡಿ ಮಾಡಿ ಅಟ್ಟಹಾಸ ಮೇರೆಯಲಾಗಿದೆ.
ಘಟನೆ ಬಗ್ಗೆ ವಿಡಿಯೋ ಮಾಡಲು ಹೋದವರ ಮೊಬೈಲ್ ಕಸಿದುಕೊಂಡ ಎಸ್ ಆರ್ ಶ್ರೀನಿವಾಸ್ ಸಹಚರರು.
ಪ್ರಕರಣ ಸಂಬಂಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಹಲ್ಲೆಗೊಳಗಾದ ರಾಯಸಂದ್ರ ರವಿಕುಮಾರ್ ಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


