nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್

    July 18, 2026

    ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ

    July 18, 2026

    ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ

    July 18, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್
    • ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ
    • ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ
    • ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!
    • ತಿಪಟೂರು: ಲೋಕೇಶ್ವರ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್ ವಿತರಣೆ
    • ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ
    • ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ
    • ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ನನಗೆ ಮಧ್ಯಾಹ್ನದ ಬಿಸಿಯೂಟ ತುಂಬ ಅಗತ್ಯವಿದೆ” ಎಂದು ಪತ್ರದ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ ವಿದ್ಯಾರ್ಥಿ
    ರಾಜ್ಯ ಸುದ್ದಿ March 16, 2024

    “ನನಗೆ ಮಧ್ಯಾಹ್ನದ ಬಿಸಿಯೂಟ ತುಂಬ ಅಗತ್ಯವಿದೆ” ಎಂದು ಪತ್ರದ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ ವಿದ್ಯಾರ್ಥಿ

    By adminMarch 16, 2024No Comments2 Mins Read
    meal

    ಬಿಸಿಲಿನ ಬೇಗೆಯಿಂದ ಹೆಚ್ಚುತ್ತಿರುವ ತಾಪಮಾನವನ್ನು ಗಮನದಲ್ಲಿಟ್ಟುಕೊಂಡು, ವಿದ್ಯಾರ್ಥಿಗಳಿಗೆ ನೀರು ಆಹಾರದ ಕೊರತೆಯನ್ನು ಮನದಲ್ಲಿಟ್ಟುಕೊಂಡು ತೆಲಂಗಾಣ ರಾಜ್ಯ ಶಿಕ್ಷಣ ಇಲಾಖೆ ಮಾರ್ಚ್ 15ರಿಂದ ಅರ್ಧ ದಿನ ಮಾತ್ರ ಶಾಲೆಯನ್ನು ನಡೆಸಲು ಈ ಹಿಂದೆಯೇ ನಿರ್ಧರಿಸಿತ್ತು. ಅದರಂತೆಯೇ ಈಗ ಶಾಲೆಯನ್ನು ಅರ್ಧ ದಿನ ಮಾಡಲು ಸಿದ್ಧವಾಗಿದೆ. ಆದ್ರೆ, ಈ ಮಧ್ಯೆ ವಿದ್ಯಾರ್ಥಿಯೊಬ್ಬ ಮಾಡಿಕೊಂಡ ಮನವಿ ನೋಡಿದ್ರೆ ಎಂಥವರ ಕಣ್ಣಲ್ಲಿ ನೀರು ತರಿಸುತ್ತದೆ. ಹಾಗಾದರೆ ಆತ ಬರೆದ ಪತ್ರದಲ್ಲಿ ಏನಿದೆ?

    ಹೆಚ್ಚಿನ ಮಕ್ಕಳಿಗೆ ಬಿಸಿಯೂಟ ಎಷ್ಟು ಮುಖ್ಯ ಅನ್ನುವಂಥದ್ದನ್ನು ಈ ವರದಿಯಲ್ಲಿ ನೀವು ನೋಡಬಹುದು. ಈ ದೇಶದಲ್ಲಿ ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿರುವವರ ಸಂಖ್ಯೆ ಹೆಚ್ಚಿದ್ದು, ಅದರಲ್ಲೂ ನೀರಿಲ್ಲದೇ ಒದ್ದಾಡುವವರ ಸಂಖ್ಯೆ ಈಗ ಎಲ್ಲೆಡೆ ಕಾಣಿಸಿಕೊಳ್ತಿದೆ. ಬಿರು ಬಿಸಿಲಿನ ತಾಪಕ್ಕೆ ವಿದ್ಯಾರ್ಥಿಗಳು ತೊಂದರೆಗೆ ಒಳಗಾಗುತ್ತಿದ್ದಾರೆ, ಈ ಹಿನ್ನಲೆಯಲ್ಲಿ ಮಕ್ಕಳಿಗೆ ಕಷ್ಟವೆನಿಸಬಹುದು ಎಂಬ ಮುಂದಾಲೋಚನೆಯಿಂದ ತೆಲಂಗಾಣ ಸರ್ಕಾರ ಈ ಕುರಿತಂತೆ ಅಧಿಕೃತವಾಗಿ ಘೋಷಿಸಿದ್ದು, ಎಲ್ಲಾ ಖಾಸಗಿ ಮತ್ತು ಸರ್ಕಾರಿ ಶಾಲೆಗಳು ಅರ್ಧ ದಿನ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದೆ.

    ಇದೆಲ್ಲದರ ಮಧ್ಯೆ ಶಾಲೆ ಅರ್ಧ ದಿನ ನಡೆದರೆ, ತನಗೆ ಬಿಸಿಯೂಟ ಸಿಗುವುದಿಲ್ಲ ಎಂಬ ಅರಿವಿನಿಂದ ಸಾತ್ವಿಕ್ ಎಂಬ ವಿದ್ಯಾರ್ಥಿ, ದಯವಿಟ್ಟು ಅರ್ಧ ದಿನ ರಜೆ ಮಾಡುವುದು ಬೇಡ, ನನಗೆ ಮಧ್ಯಾಹ್ನದ ಊಟ ತುಂಬ ಅಗತ್ಯವಿದೆ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾನೆ. ಸದ್ಯ ಈ ಪತ್ರ ವೈರಲ್ ಆಗಿದೆ.ಅನೇಕರು ಇದಕ್ಕೆ ಪ್ರತಿಕ್ರಿಯಿಸಿ ಅಯ್ಯೋ ಪಾಪ ಎಂದಿದ್ದಾರೆ.

    ಮಾರ್ಚ್ 15ರಿಂದ ಅರ್ಧ ದಿನದ ಶಾಲೆಗಳನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಬೆಳಗ್ಗೆ 8ರಿಂದ ಮಧ್ಯಾಹ್ನ 12.30ರವರೆಗೆ ಕಾರ್ಯನಿರ್ವಹಿಸಲು ಅರ್ಧ ದಿನದ ಅಧ್ಯಯನದ ವೇಳಾಪಟ್ಟಿಯನ್ನೂ ಕೂಡ ಶಿಕ್ಷಣ ಇಲಾಖೆ ಬಿಡುಗಡೆಗೊಳಿಸಿದೆ. ಎಲ್ಲಾ ವಿದ್ಯಾರ್ಥಿಗಳು ರಜೆ ಸಿಕ್ಕಿತು ಎಂದು ಸಂತಸಪಡುತ್ತಿದ್ದರೇ ಈ ಹುಡುಗ ಮಾತ್ರ ಅತೀವ ಬೇಸರ ಹೊರಹಾಕಿದ್ದು, ತನಗೆ ರಜೆ ಬೇಡ, ಅರ್ಧ ದಿನ ಮಾಡಬೇಡಿ ಎಂದು ಹೇಳಿದ್ದಾನೆ.

    ಮಾರ್ಚ್ 15ರಿಂದ ಅರ್ಧ ದಿನದ ಶಾಲೆಗಳನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಬೆಳಗ್ಗೆ 8ರಿಂದ ಮಧ್ಯಾಹ್ನ 12.30ರವರೆಗೆ ಕಾರ್ಯನಿರ್ವಹಿಸಲು ಅರ್ಧ ದಿನದ ಅಧ್ಯಯನದ ವೇಳಾಪಟ್ಟಿಯನ್ನೂ ಕೂಡ ಶಿಕ್ಷಣ ಇಲಾಖೆ ಬಿಡುಗಡೆಗೊಳಿಸಿದೆ. ಎಲ್ಲಾ ವಿದ್ಯಾರ್ಥಿಗಳು ರಜೆ ಸಿಕ್ಕಿತು ಎಂದು ಸಂತಸಪಡುತ್ತಿದ್ದರೇ ಈ ಹುಡುಗ ಮಾತ್ರ ಅತೀವ ಬೇಸರ ಹೊರಹಾಕಿದ್ದು, ತನಗೆ ರಜೆ ಬೇಡ, ಅರ್ಧ ದಿನ ಮಾಡಬೇಡಿ ಎಂದು ಹೇಳಿದ್ದಾನೆ.

    ಅಸಲಿಗೆ ಆತ ಬರೆದ ಪತ್ರದಲ್ಲಿ ಏನಿದೆ ಎಂಬುದನ್ನು ತಿಳಿಯುವುದಾದರೆ.ತನ್ನ ಪುಸ್ತಕದಲ್ಲಿ ಬೇಸರ ವ್ಯಕ್ತಪಡಿಸಿರುವ ಸಾತ್ವಿಕ್, “ಬೇಸಿಗೆ ರಜೆಯಲ್ಲಿ ಮನೆಗೆ ಹೋದರೆ ಊಟ ಸಿಗಲ್ಲ. ತಾತ ಮತ್ತು ಅಜ್ಜಿ ಪಿಂಚಣಿ ಹಣದಲ್ಲಿ ಜೀವನ ನಡೆಸುತ್ತಿದ್ದಾರೆ. ದಯವಿಟ್ಟು ಬೇಸಿಗೆ ರಜೆ ಕೊಡಬೇಡಿ. ನಾನು ಶಾಲೆಯಲ್ಲೇ ಇರುತ್ತೇನೆ. ನನಗೆ ಶಾಲೆಯಲ್ಲಿ ಸಿಗುವ ಮಧ್ಯಾಹ್ನದ ಬಿಸಿಯೂಟ ಬಹಳ ಮುಖ್ಯ. ಶ್ರಮಪಟ್ಟು ಓದಿ ದೊಡ್ಡ ಮಟ್ಟಕ್ಕೆ ತಲುಪುತ್ತೇನೆ” ಎಂದು ಬರೆದಿರುವ ಎರಡು ಪುಟಗಳ ಪತ್ರ ನಿಜಕ್ಕೂ ಎಂಥವರ ಮನವನ್ನು ಕೂಡ ಕಲಕುವಂತೆ ಮಾಡುತ್ತೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


    Provided by
    Provided by
    admin
    • Website

    Related Posts

    ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ

    July 18, 2026

    ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ

    July 18, 2026

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026

    Comments are closed.

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್

    July 18, 2026

    ಬೆಂಗಳೂರು: ರಾಜ್ಯದ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುಮಕೂರಿನಲ್ಲಿ ನಿರ್ಮಿಸಬೇಕು ಎಂಬುದು ನನ್ನ ಮೊದಲಿನಿಂದಲೂ ಇರುವ ಇಚ್ಛೆಯಾಗಿದೆ ಎಂದು ಉಪಮುಖ್ಯಮಂತ್ರಿ…

    ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ

    July 18, 2026

    ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ

    July 18, 2026

    ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!

    July 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.