ಬೆಂಗಳೂರು: ಬಿಜೆಪಿ-ಜೆಡಿಎಸ್ ನವರು ಹಾಲು-ಜೇನಿನ ರೀತಿ ಕೆಲಸ ಮಾಡುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು.
ಮೈತ್ರಿ ನಾಯಕರ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಅಸಮಾಧಾನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿ ಯಾವುದೇ ಕಾರಣಕ್ಕೂ ಮುರಿಯೋದಿಲ್ಲ.
ಒಂದು ಸೀಟಿನ ವಿಚಾರದಲ್ಲಿ ಗೊಂದಲ ಇದ್ದು, ಇನ್ನೆರಡು ದಿನಗಳಲ್ಲಿ ಎಲ್ಲವೂ ಸರಿ ಆಗುತ್ತದೆ. ಬಿಜೆಪಿ-ಜೆಡಿಎಸ್ನವರು ಹಾಲು-ಜೇನಿನ ರೀತಿ ಕೆಲಸ ಮಾಡುತ್ತೇವೆ. ಸಣ್ಣಪುಟ್ಟ ಗೊಂದಲಗಳನ್ನು ನಿವಾರಣೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು.
3 ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇವೆ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ, ನಮ್ಮ ಹೈಕಮಾಂಡ್ ನಾಯಕರು ಕುಮಾರಸ್ವಾಮಿ ಜೊತೆ ಮಾತಾಡ್ತಾರೆ. ಎಷ್ಟು ಸೀಟು ಜೆಡಿಎಸ್ಗೆ ಹೈಕಮಾಂಡ್ ನಾಯಕರು ತೀರ್ಮಾನ ಮಾಡ್ತಾರೆ. ಇಂದೇ ಬಹುತೇಕ ಅಂತಿಮ ಆಗುತ್ತದೆ. ಬಿಜೆಪಿ-ಜೆಡಿಎಸ್ ಸ್ಥಳೀಯವಾಗಿ ಹೊಂದಾಣಿಕೆ ಆಗಿದೆ. ಸೀಟು ಹಂಚಿಕೆ ಆದ ಮೇಲೆ ಎಲ್ಲಾ ಕಡೆ ಬಿಜೆಪಿ-ಜೆಡಿಎಸ್ ನಾಯಕರು ಒಟ್ಟಾಗಿ ಓಡಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಜೆಡಿಎಸ್ 3 ಸೀಟು ಕೇಳಿದ್ದರು, ಈಗ ಎರಡು ಸೀಟ್ ಹಂಚಿಕೆ ಆಗಿದೆ. ಇನ್ನೊಂದು ಸೀಟು ಬಗ್ಗೆ ಚರ್ಚೆ ಆಗುತ್ತಿದೆ. ಶಿವಮೊಗ್ಗ ಸಭೆಯಲ್ಲಿ ಮಂಜುನಾಥ್ ಭಾಗಿಯಾಗಿದ್ದರು. ಗೆಲ್ಲುವ ದೃಷ್ಟಿಯಿಂದ ಮಂಜುನಾಥ್ ಅವರ ಬಗ್ಗೆ ಸ್ಟಾಟರ್ಜಿ ಮಾಡಿದ್ದೇವೆ. ದೆಹಲಿಗೆ ಹೋಗುತ್ತಿದ್ದೇನೆ. ಕೇಂದ್ರದ ನಾಯಕರಿಗೆ ಇಲ್ಲಿ ನಡೆದ ಮಾಹಿತಿ ಕೊಡುತ್ತೇನೆ. ಜನ ಸಾಮಾನ್ಯರು ಮಂಜುನಾಥ್ ಅವರನ್ನು ಜೆಡಿಎಸ್ ಲೆಕ್ಕದಲ್ಲಿ ಮಾತಾಡ್ತಿದ್ದಾರೆ. ನಮ್ಮ ಗುರಿ ಕಾಂಗ್ರೆಸ್ ಸೋಲು ಮಾತ್ರ ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


