ಕೊರಟಗೆರೆ: ಇಂದಿರಾಗಾಂಧಿಯ ಸ್ವಂತ ಜಿಲ್ಲೆ ಶಿವಮೊಗ್ಗನಾ. ಸೋನಿಯಾ ಗಾಂಧಿಯ ತವರೂರು ಬಳ್ಳಾರಿನಾ.ರಾಹುಲ್ ಗಾಂಧಿಯ ಊರು ಯಾವುದು ಹೇಳಿ. ಸಿಎಂ ಸ್ಟೀಪನ್ ಗುಲ್ಬರ್ಗಾದವ್ರಾ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲಿಂದ ಸ್ಪರ್ಧೆ ಮಾಡಿ ಗೆದ್ದಿದ್ದಾರೇ ಅನ್ನೋದು ಎಲ್ಲರಿಗೂ ತಿಳಿಸಿದೆ ಅಲ್ವಾ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಟಾಂಗ್ ನೀಡಿದರು.
ಕೊರಟಗೆರೆ ಪಟ್ಟಣದ ಪಂಚಾಜನ್ಯ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯ ನಂತರ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದರು.
ನಾನು 50ವರ್ಷದಿಂದ ತುಮಕೂರು ಜಿಲ್ಲೆಯಲ್ಲೇ ಇದ್ದವನು. ಯಾರೋ ಏನೋ ಆರೋಪ ಮಾಡ್ತಾರೇ ಅಂತಾ ನಾನು ಸ್ಪಷ್ಟನೇ ನೀಡೋದಿಲ್ಲ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮೈತ್ರಿಯಲ್ಲಿ ಯಾವುದೇ ಬಿನ್ನಾಭಿಪ್ರಾಯ ಇಲ್ಲ ಅದು ಕೇವಲ ವಿರೋಧ ಪಕ್ಷದವರ ಆರೋಪವಷ್ಟೆ. ಕರ್ನಾಟಕದ 28ಕ್ಷೇತ್ರದಲ್ಲಿಯು ಬಿಜೆಪಿ ಪಕ್ಷದ ಅಭ್ಯರ್ಥಿಯೇ ಗೆಲುವು ಸಾಧಿಸುತ್ತಾರೆ. ದೆಹಲಿ ಸಿಎಂ ಆದ್ರು ಅಷ್ಟೆ ಸಾಮಾನ್ಯ ಮನುಷ್ಯ ಆದ್ರು ಅಷ್ಟೇ ಕಾನೂನು ಎಲ್ಲರಿಗೂ ಒಂದೇ ಎಂದು ಹೇಳಿದರು.
ಬಿಜೆಪಿ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರಮೋದಿ ಎಂಬುದು ಇಡೀ ದೇಶಕ್ಕೆ ಗೋತ್ತಿದೆ. ಆದರೇ ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರು ಎಂಬುದೇ ಅವರ ಪಕ್ಷದವ್ರಿಗೆ ತಿಳಿದಿಲ್ಲ. ನರೇಂದ್ರಮೋದಿ ವಿಶ್ವನಾಯಕ ಆಗಲು ಇನ್ನೂ ಕೇವಲ ಮೂರೇ ಹೆಜ್ಜೆ ಬಾಕಿಯಿದೆ ಅಷ್ಟೇ. ಭಾರತ ದೇಶವು ಅಭಿವೃದ್ದಿಯತ್ತಾ ದಾಪುಗಾಲು ಇಟ್ಟಿರುವುದು ಇಡೀ ವಿಶ್ವಕ್ಕೆ ತಿಳಿದಿರುವ ವಿಷಯ. ಮತ್ತೋಮ್ಮೆ ನರೇಂದ್ರಮೋದಿ ಗೆಲುವಿಗೆ ನಿಮ್ಮೇಲ್ಲರ ಸಹಕಾರ ಅತಿಮುಖ್ಯ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ, ಜಿಲ್ಲಾ ಯುವಮೋರ್ಚ ಅಧ್ಯಕ್ಷ ಶಿವಕುಮಾರ್, ಬಿಜೆಪಿ ಮುಖಂಡ ಅನಿಲ್ ಕುಮಾರ್, ಕೊರಟಗೆರೆ ಮಂಡಲ ಅಧ್ಯಕ್ಷ ದರ್ಶನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂರ್ತಿ, ಪಪಂ ಸದಸ್ಯ ಪ್ರದೀಪಕುಮಾರ್, ಮುಖಂಡರಾದ ಚೇತನ್, ಮಂಜುನಾಥ್, ರಘು, ಮಹೇಶ್, ಗೋವಿಂದರೆಡ್ಡಿ, ದಾಡಿವೆಂಕಟೇಶ್, ಮಹೇಶ್, ಕಾಫಿಅಪ್ಪಿ ಸೇರಿದಂತೆ ಇತರರು ಇದ್ದರು.
ಕೊರಟಗೆರೆ ಪಟ್ಟಣದ ಪಂಚಾಜನ್ಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಸೇರಿದಂತೆ ಮುಖಂಡರು.
ಮೂರು ತಿಂಗಳಲ್ಲೇ ರೈಲ್ವೆ ಮತ್ತೇ ಟೇಕ್ ಆಪ್:
ತುಮಕೂರು ಜಿಲ್ಲೆಯಿಂದ ರಾಯದುರ್ಗಕ್ಕೆ ಕೊರಟಗೆರೆ ಮಾರ್ಗವಾಗಿ ಸಂಚರಿಸುವ ರೈಲ್ವೆ ಕಾಮಗಾರಿ ಸ್ಥಗೀತ ಆಗಿರುವ ಮಾಹಿತಿ ತಿಳಿದಿದೆ. ಕೊರಟಗೆರೆ ಕ್ಷೇತ್ರದ ತುಂಬಾಡಿ ಮತ್ತು ಬೆಳಧರ ಸಮೀಪದ ರಾಜ್ಯಹೆದ್ದಾರಿಗೆ ಟೋಲ್ ದಿಗ್ಭಂಧನ ಹಾಕಲಾಗಿದೆ. ಕೊರಟಗೆರೆ ಕ್ಷೇತ್ರಕ್ಕೆ ಅವಶ್ಯಕತೆ ಎತ್ತಿನಹೊಳೆ ಮತ್ತು ಹೇಮಾವತಿ ನೀರಿನ ಕಾಮಗಾರಿಯ ಜೊತೆಯಲ್ಲಿ ರೈಲ್ವೆ ಕಾಮಗಾರಿಗೆ ನಾನು ಗೆದ್ದ ಮೂರೇ ತಿಂಗಳಲ್ಲಿ ಮತ್ತೇ ಪ್ರಾರಂಭ ಮಾಡ್ತೀನಿ ಎಂದು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಭರವಸೆ ನೀಡಿದರು.
ಪರಮೇಶಣ್ಣನ ಜೊತೆಗೂಡಿ ಅಭಿವೃದ್ದಿ:
ಕೊರಟಗೆರೆ ಮತ್ತು ಮಧುಗಿರಿ ಕ್ಷೇತ್ರದಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಿವೆ. ಒಳ್ಳೆಯ ಕೆಲಸ ಮಾಡುವ ನಾಯಕರನ್ನು ಯಾರು ಕೀಳಾಗಿ ಕಾಣಬಾದ್ರು. ನಾನು ಅಧಿಕಾರದಲ್ಲಿ ಇದ್ದಾಗ ಪರಮೇಶಣ್ಣ ಕೇಳಿದಷ್ಟು ಮನೆ ಮತ್ತು ಅನುಧಾನ ನೀಡಿದ್ದೇನೆ. ಕೊರಟಗೆರೆ ಕ್ಷೇತ್ರದಲ್ಲಿ ನೀರಾವರಿ ಯೋಜನೆ, ರಾಜ್ಯ ಹೆದ್ದಾರಿ ಮತ್ತು ರೈಲ್ವೆ ಯೋಜನೆ ಕಾಮಗಾರಿಯ ಚಾಲನೆಗೆ ಗೃಹಸಚಿವ ಪರಮೇಶಣ್ಣನ ಜೊತೆಗೂಡಿ ಅಭಿವೃದ್ದಿ ಮಾಡ್ತಿನಿ ಎಂದು ಮಾಜಿ ಸಚಿವ ವಿ.ಸೋಮಣ್ಣ ಗೃಹಸಚಿವರ ಪರವಾಗಿ ಗುಣಗಾನ ಮಾಡಿದರು.
ಶ್ರೀಮಠಕ್ಕೆ ವಿ.ಸೋಮಣ್ಣ ಭೇಟಿ ಚರ್ಚೆ:
ಎಲೆರಾಂಪುರದ ಶ್ರೀಕುಂಚಿಟಿಗ ಮಹಾಸಂಸ್ಥಾನ ಶ್ರೀಮಠಕ್ಕೆ ತುಮಕೂರು ಲೋಕಾಸಭಾ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಬೇಟಿ ನೀಡಿ, ಡಾ.ಹನುಮಂತನಾಥ ಸ್ವಾಮೀಜಿಯ ಆರ್ಶಿವಾದ ಪಡೆದ ನಂತರ ಕೊರಟಗೆರೆ ಕ್ಷೇತ್ರದ ಅಭಿವೃದ್ದಿಯ ಬಗ್ಗೆ 1ಗಂಟೆಗೂ ಅಧಿಕ ಸಮಯ ಸುದಿರ್ಘವಾಗಿ ಚರ್ಚೆ ನಡೆಸಿದರು.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


