ಕೊರಟಗೆರೆ: ತಾಲೂಕಿನ ಹೊಳವನಹಳ್ಳಿ ಹೋಬಳಿಯ ತೊಗರಿಗಟ್ಟ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದುದ್ದು, ಬೆಂಕಿ ನಂದಿಸಲು ಅರಣ್ಯ ಪ್ರದೇಶದಲ್ಲಿ ಭೂಮಿ ಮತ್ತು ವಸತಿ ವಂಚಿತರ ಕುಟುಂಬದ ಮಹಿಳೆಯರು ಹರಸಾಹಸ ಪಡುತ್ತಿದ್ದಾರೆ.
ಮೊದಲು ಜನವಸತಿ ಪ್ರದೇಶದಲ್ಲಿ ಬೆಂಕಿ ನಂದಿಸುವ ಕಾರ್ಯ ಮಾಡಬೇಕಿದ್ದ ಅಗ್ನಿಶಾಮಕದಳದ ಸಿಬ್ಬಂದಿ ಇಲ್ಲಿನ ಖಾಸಗಿ ಕೋಳಿ ಫಾರಂ ಮುಂದೆ ಬೆಂಕಿ ನಂದಿಸಲು ಮುಂದಾಗಿದ್ದಾರೆ ಎಂದು ಇಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕರು ಜನವಸತಿ ಪ್ರದೇಶದಲ್ಲಿ ಬೆಂಕಿ ನಂದಿಸಿ ಎಂದು ಮನವಿ ಮಾಡಿದರೆ, ವಾಹನದಲ್ಲಿ ನೀರು ಖಾಲಿಯಾಗಿದೆ ಎಂದು ಸಬೂಬು ನೀಡಿ ಅಗ್ನಿಶಾಮಕದಳದ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನುವ ಆಕ್ರೋಶ ಕೇಳಿ ಬಂದಿದೆ.
ಅಗ್ನಿಶಾಮಕದಳದ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಅರಣ್ಯ ಸುಟ್ಟು ಭಸ್ಮವಾಗಿದೆ. ಬೆಂಕಿ ಹೊತ್ತಿ ಉರಿಯುತ್ತಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದೇ ನಿರ್ಲಕ್ಷ್ಯವಹಿಸಿದ್ದಾರೆ ಎನ್ನುವ ಆಕ್ರೋಶ ಕೇಳಿ ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296