ಪಾವಗಡ: ವದನಕಲ್ಲು ಗ್ರಾಮದಲ್ಲಿ ಪಾವಗಡ ಮತ್ತು ಚಳ್ಳಕೆರೆ ರಸ್ತೆಯಲ್ಲಿರುವ ನೆಲೆಸಿರುವಂತಹ ಇತಿಹಾಸ ಪ್ರಸಿದ್ಧ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ಮಂಗಳವಾರ ಸಾಯಂಕಾಲ 4:30 ಗಂಟೆಗೆ ದೇವಸ್ಥಾನದ ಎದುರು ಹೂವಿನಿಂದ ಅಲಂಕರಿಸಿದ ರಥದಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಾ ಕಾರ್ಯಗಳನ್ನು ನೆರವೇರಿಸಲಾಯಿತು
ನಂತರ ರಥವನ್ನು ಎಳೆಯಲಾಯಿತು. ಭಕ್ತರು ರಥದ ಮೇಲೆ ಬಾಳೆ ಹಣ್ಣು, ಮಡಕ್ಕಿ ಎಸೆದು ತಮ್ಮ ಹರಕೆ ತೀರಿಸಿಕೊಂಡರು. ದೇವಾಲಯದಿಂದ ಸ್ವಲ್ಪ ದೂರದವರೆಗೂ ರಥವನ್ನು ಎಳೆಯಲಾಯಿತು.
ಆಂಧ್ರಪ್ರದೇಶ ಸೇರಿದಂತೆ ತಾಲೂಕಿನ ವಿವಿಧ ಹಳ್ಳಿಗಳಿಂದ ಭಕ್ತರು ಆಗಮಿಸಿ ತಮ್ಮ ಹರಕೆ ತೀರಿಸಿಕೊಂಡರು. ದೇವಸ್ಥಾನಕ್ಕೆ ಬಂದಿರುವಂತ ಭಕ್ತಾದಿಗಳಿಗೆ ಅನ್ನದಾನ ವ್ಯವಸ್ಥೆ ಮಾಡಲಾಗಿತ್ತು. ಜೊತೆಗೆ ಮಜ್ಜಿಗೆ ಪಾನಕ, ಹೆಸರುಬೇಳೆ, ಪ್ರಸಾದ ವಿತರಣೆ ಮಾಡಲಾಯಿತು.
ಇದೇ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ನಾಗೇಂದ್ರಪ್ಪ ಅವರು ತಿಪ್ಪೇರುದ್ರ ಸ್ವಾಮಿಗೆ ಸುಮಾರುಮುಕ್ಕಾಲು ಕೆ.ಜಿ. ಬೆಳ್ಳಿ ಕಿರೀಟವನ್ನು ಅರ್ಪಿಸಿದರು.
ಇದೇ ವೇಳೆ ಚುನಾವಣಾ ಸ್ವೀಪ್ ಸಮಿತಿ, ತಾಲೂಕು ಪಂಚಾಯಿತಿ, ತಾಲೂಕು ಆಡಳಿತದ ವತಿಯಿಂದ ಮತದಾರರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿವಿಧ ಕಲಾತಂಡಗಳು ಬೀದಿ ನಾಟಕದ ಮೂಲಕ ಸಾರ್ವಜನಿಕರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಲಾಯಿತು.
ಚಳ್ಳಕೆರೆ ಪಾವಗಡ ಮುಖ್ಯರಸ್ತೆಯಲ್ಲಿ ರಥೋತ್ಸವ ನಡೆಯುತ್ತಿರುವುದರಿಂದ ಪೋಲಿಸ್ ಇಲಾಖೆ ಸೂಕ್ತ ಭದ್ರತೆ, ಸುಗಮ ಸಂಚಾರ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಪಿ ಡಿ ಓ ಕಂದಾಯ ನಿರೀಕ್ಷಕರು, ಬ್ರಹ್ಮೇಂದ್ರ ಚಾರಿ ಕೆ, ರವಿ ಶಾಸ್ತ್ರಿ, ಗೋಪಾಲ್ ರೆಡ್ಡಿ, ತಿಪ್ಪೇಸ್ವಾಮಿ ಟಿ. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296