nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ

    September 18, 2025

    ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ

    September 18, 2025

    ಕಮಲನಗರ, ತೋರಣ ಗ್ರಾಮದ ಸಂಪರ್ಕ ರಸ್ತೆ ದುರಸ್ತಿಗೆ ಹರಿದೇವ ಸಂಗನಾಳ ಆಗ್ರಹ

    September 18, 2025
    Facebook Twitter Instagram
    ಟ್ರೆಂಡಿಂಗ್
    • ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ
    • ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ
    • ಕಮಲನಗರ, ತೋರಣ ಗ್ರಾಮದ ಸಂಪರ್ಕ ರಸ್ತೆ ದುರಸ್ತಿಗೆ ಹರಿದೇವ ಸಂಗನಾಳ ಆಗ್ರಹ
    • ಬೀದರ್ ನಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ
    • ವಿಶ್ವಕರ್ಮ ಸಮಾಜವು ಸಂಘಟಿತರಾದಾಗ ಯೋಜನೆಗಳ ಸದ್ಬಳಕೆಗೆ ಸಹಕಾರಿ: ತಹಶೀಲ್ದಾರ್ ಮೋಹನಕುಮಾರಿ ಸಲಹೆ
    • ಎಂ.ಎನ್.ಭೀಮರಾಜ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ
    • ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ
    • ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜೀನಾಮೆ ನೀಡಲು ಮುಂದಾದ ರಾಜ್ಯದ 5 ಕಾಂಗ್ರೆಸ್ ಶಾಸಕರು!!
    ರಾಜ್ಯ ಸುದ್ದಿ March 28, 2024

    ರಾಜೀನಾಮೆ ನೀಡಲು ಮುಂದಾದ ರಾಜ್ಯದ 5 ಕಾಂಗ್ರೆಸ್ ಶಾಸಕರು!!

    By adminMarch 28, 2024No Comments2 Mins Read
    congress

    ಲೋಕಸಭಾ ಚುನಾವಣೆಯ ಟಿಕೆಟ್ ವಿಚಾರವಾಗಿ ರಾಜ್ಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಭಾರೀ ಹೈಡ್ರಾಮಗಳು ನಡೆಯುತ್ತಿವೆ. ಅಂತೆಯೇ ಇದೀಗ ಕೋಲಾರ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಸಿಡಿದೆದ್ದಿರುವ ಕೋಲಾರ ಜಿಲ್ಲೆಯ ಐವರು ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ.

    ಹೌದು, ಕೋಲಾರ ಲೋಕಸಭಾ ಕ್ಷೇತ್ರದಿಂದ ಸಚಿವ ಮುನಿಯಪ್ಪ ಅಳಿಯ ಕೆ.ಜಿ. ಚಿಕ್ಕಪೆದ್ದಣ್ಣರನ್ನು ಕಣಕ್ಕಿಳಿಸುವ ವಿಚಾರ ಇದೀಗ ಸ್ಥಳೀಯ ಶಾಸಕರ ಹಾಗೂ ವಿಧಾನ ಪರಿಷತ್ ಸದಸ್ಯರ ಆಕ್ರೋಶಕ್ಕೆ ಕಾರಣವಾಗಿದ್ದು ಎಲ್ಲರೂ ರಾಜಿನಾಮೆ ನೀಡುವ ಬೆದರಿಕೆ ಹಾಕಿದ್ದಾರೆ. ಚುನಾವಣೆ ಹೊತ್ತಲ್ಲೇ ಕೈ ಪಡೆಗೆ ತಮ್ಮ ಶಾಸಕರೇ ದೊಡ್ಡ ಆಘಾತ ಎದುರಾಗಿದೆ.


    Provided by
    Provided by
    Provided by

    ಅಂದಹಾಗೆ,ಕೋಲಾರ ಟಿಕೆಟ್ ವಿಚಾರ ಇದೀಗ ರಾಜ್ಯ ಕಾಂಗ್ರೆಸ್​ ನಲ್ಲಿ ಆಂತರಿಕ ಕಲಹ ತಾರಕಕ್ಕೇರಿದ್ದು ಸಚಿವ ಎಂ ಸಿ ಸುಧಾಕರ್, ಶಾಸಕರಾದ ಕೊತ್ತೂರು ಮಂಜುನಾಥ್, ಕೆ.ವೈ.ನಂಜೇಗೌಡ, ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ನಜೀರ್ ಅಹಮದ್ ತೀವ್ರವಾಗಿ ವಿರೋಧಿಸಿದ್ದಾರೆ. ಇಷ್ಟೇ ಅಲ್ಲದೆ ಇದೀಗ ಕೆಲವರು ಸ್ಪೀಕರ್ ಗೆ ರಾಜಿನಾಮೆ ಪತ್ರವನ್ನೂ ನೀಡಿದ್ದಾರೆ ಎಂಬ ಸುದ್ದಿ ಬಂದಿದೆ.

    ಈ ಬಗ್ಗೆ ನಜೀರ್ ಅಹಮದ್ ಮಾತನಾಡಿ ನಾನು ಸಚಿವನಾಗಿದ್ದಾಗ ಮುನಿಯಪ್ಪ ಬ್ಯಾಗ್​ ಹಿಡಿದುಕೊಂಡು ಬರುತ್ತಿದ್ದ. ಕೆಎಚ್ ಮುನಿಯಪ್ಪ ಒಬ್ಬ ಪುಟಗೋಸಿ. ಮುನಿಯಪ್ಪ ಪುಟಗೋಸಿ ಬ್ಯಾಗ್​ ಹಿಡಿದುಕೊಂಡು ನನ್ ಹಿಂದೆ ಬರುತ್ತಿದ್ದ. ಆಗಲೇ ನಾನು ಸಚಿವನಾಗಿದ್ದೆ ಎಂದ ಅಹ್ಮದ್, ಕ್ಷೇತ್ರದಲ್ಲಿ ಗೆಲ್ಲುವಂತಹ ಅಭ್ಯರ್ಥಿಗೆ ಟಿಕೆಟ್​ ಕೊಡಬೇಕೆಂದು ಆಗ್ರಹಿಸಿದರು.

    ಇನ್ನು ಶಾಸಕರ ಕೋಪವನ್ನು ಶಮನ ಮಾಡಲು ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಿಂದಲೇ ಫೋನಿನ ಮೂಲಕ ಮಾತನಾಡಿದ್ದು ಏನೂ ಪ್ರಯೋಜನ ಆಗಿಲ್ಲ. ಸಚಿವ ಮುನಿಯಪ್ಪ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿ ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ ಎಂದು ಹೇಳಿದ್ದಾರೆ. ಅಲ್ಲದೆ ಕಳೆದ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಸೋಲಿಸಿದವರನ್ನು ಕಾಂಗ್ರೆಸ್‍ಗೆ ಸೇರಿಸಿಕೊಂಡರು, ವಿಧಾನಸಭೆಯಲ್ಲಿ ಟಿಕೆಟ್ ನೀಡಿ ಗೆಲ್ಲಿಸಿಕೊಂಡರು, ಸಚಿವರನ್ನಾಗಿ ಮಾಡಿದರೂ ಆಗಲೂ ನಾನು ವಿರೋಧ ಮಾಡಲಿಲ್ಲ. ಈಗ ಉದ್ದೇಶ ಪೂರ್ವಕವಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಇತ್ತ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಅವರಿಗೆ ಕ್ಷೇತ್ರದ ಭಿನ್ನಮತ ಸ್ಫೋಟ ವಿಷಯ ತಲುಪಿದ್ದು ಸದ್ಯಕ್ಕೆ ಕೋಲಾರ ಕ್ಷೇತ್ರದ ಅಭ್ಯರ್ಥಿ ಹೆಸರನ್ನು ಘೋಷಿಸದೆ ತಡೆಹಿಡಿಯಲು ನಿರ್ಧರಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ

    September 18, 2025

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025

    ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ

    September 17, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ

    September 18, 2025

    ಬೆಂಗಳೂರು: ಯೋಗ ಸೆಂಟರ್ ​ಗೆ ಬರುತ್ತಿದ್ದ ಬಾಲಕಿ, ಯುವತಿಯರು ಸೇರಿದಂತೆ ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಯೋಗ…

    ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ

    September 18, 2025

    ಕಮಲನಗರ, ತೋರಣ ಗ್ರಾಮದ ಸಂಪರ್ಕ ರಸ್ತೆ ದುರಸ್ತಿಗೆ ಹರಿದೇವ ಸಂಗನಾಳ ಆಗ್ರಹ

    September 18, 2025

    ಬೀದರ್ ನಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ

    September 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.