nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ

    September 15, 2025

    ಸಂತಪೂರ ಮರಿಯ ಕೃಪಾ ದವಾಖಾನೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

    September 15, 2025

    ಸತ್ವಯುತ ಆಹಾರ ಸೇವನೆ, ನಿಯಮಿತ ವ್ಯಾಯಾಮದಿಂದ ಉತ್ತಮ ಆರೋಗ್ಯ: ಹಾದನೂರು ಪ್ರಕಾಶ್ 

    September 15, 2025
    Facebook Twitter Instagram
    ಟ್ರೆಂಡಿಂಗ್
    • ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ
    • ಸಂತಪೂರ ಮರಿಯ ಕೃಪಾ ದವಾಖಾನೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ
    • ಸತ್ವಯುತ ಆಹಾರ ಸೇವನೆ, ನಿಯಮಿತ ವ್ಯಾಯಾಮದಿಂದ ಉತ್ತಮ ಆರೋಗ್ಯ: ಹಾದನೂರು ಪ್ರಕಾಶ್ 
    • ಅಧಿಕಾರಿಗಳನ್ನು ಬೋನಿನಲ್ಲಿ ಕೂಡಿ ಹಾಕಿದ ಪ್ರಕರಣ: 15 ಮಂದಿ ಅಧಿಕಾರಿಗಳ ವಿರುದ್ಧವೂ ದೂರು!
    • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರ್ಥಿಕ ವ್ಯವಹಾರ ಮಾದರಿ ಮತ್ತು ಪಾರದರ್ಶಕ: ನಿರಂಜನ್
    • ಔರಾದ್ | ನಮ್ಮತುಮಕೂರು ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಶೀಘ್ರವೇ ರಸ್ತೆ ನಿರ್ಮಾಣದ ಭರವಸೆ
    • ಹೃದಯಾಘಾತದಿಂದ ಭಾರತದಲ್ಲಿ ಸುಮಾರು 30 ಲಕ್ಷ ಜನ ಸಾವಿಗೀಡಾಗುತ್ತಿದ್ದಾರೆ: ಸಂಸದ ಸಿ.ಎನ್​.ಮಂಜುನಾಥ್
    • ಮುಸ್ಲಿಮ್ ಮಹಿಳೆಗೆ ಸೀಮಂತ ಮಾಡಿದ ಹಿಂದೂ ಮಹಿಳೆಯರು: ಹೀಗೊಂದು ಸೌಹಾರ್ದ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾವು ಪ್ರಕೃತಿಯನ್ನು ರಕ್ಷಿಸಿದರೆ, ಪ್ರಕೃತಿ ನಮ್ಮನ್ನು ರಕ್ಷಿಸುತ್ತದೆ | ಸಚಿವ ಮಾಧುಸ್ವಾಮಿ
    ಗುಬ್ಬಿ December 11, 2021

    ನಾವು ಪ್ರಕೃತಿಯನ್ನು ರಕ್ಷಿಸಿದರೆ, ಪ್ರಕೃತಿ ನಮ್ಮನ್ನು ರಕ್ಷಿಸುತ್ತದೆ | ಸಚಿವ ಮಾಧುಸ್ವಾಮಿ

    By adminDecember 11, 2021No Comments2 Mins Read
    madhuswamy

    ಗುಬ್ಬಿ: ನೆಲ ಮತ್ತು ಜಲವನ್ನು ನಾವು ಸಂರಕ್ಷಣೆ ಮಾಡಿದರೆ,  ನಮ್ಮನ್ನು ಈ ಪ್ರಕೃತಿ ಸಂರಕ್ಷಣೆ ಮಾಡುತ್ತದೆ.  ನೀರನ್ನು ಮಿತವಾಗಿ ಬಳಸಿ ಅಂತರ್ಜಲವನ್ನು ಕಾಪಾಡುವ ಪ್ರಯತ್ನ ಮಾಡಬೇಕಾದ ಅನಿವಾರ್ಯತೆ ನಮ್ಮ ಮುಂದಿದೆ.  ನೀರನ್ನು ಕೃತಕವಾಗಿ ತಯಾರಿಸಲು ಆಗುವುದಿಲ್ಲ ಎಂದು ಸಚಿವ ಮಾಧುಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.

    ತಾಲ್ಲೂಕಿನ ಸಿ.ಎಸ್.ಪುರ ಕೆರೆ ಹೇಮೆಯಿಂದ ತುಂಬಿ ಹರಿದ ಹಿನ್ನಲೆ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿ ನಂತರ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿರಿಯ ಮುತ್ಸದ್ಧಿ ದೇವೇಗೌಡರ ನಿರೀಕ್ಷೆಯಂತೆ ನೀರು ಈ ಜಿಲ್ಲೆಗೆ ಸಿಗಲಿಲ್ಲ. ಇದಕ್ಕೆ ತಕ್ಕ ಉತ್ತರ ಜನರು ನೀಡಿದ್ದರು. ಆದರೆ ನೀರು ಹರಿಸುವ ಜವಾಬ್ದಾರಿ ನನ್ನ ಹೆಗಲಿಗೆ ಬಿತ್ತು. ಈ ನಿಟ್ಟಿನಲ್ಲಿ ಜವಾಬ್ದಾರಿ ಅರಿತು ಜಿಲ್ಲೆಗೆ ನೀರು ಹರಿಸುವ ಕೆಲಸ ನಿಯಾಮಾನುಸಾರ ನಡೆಸಿ ಮೂರು ಜಿಲ್ಲೆಗೆ ನ್ಯಾಯ ಒದಗಿಸಿದೆ. ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.


    Provided by
    Provided by
    Provided by

    ಹಾಸನದಿಂದ ತುಮಕೂರಿನತ್ತ ಹೇಮೆ ಹರಿಯುವ ವೇಳೆ ಸಾಕಷ್ಟು ಭಾಗದಲ್ಲಿ ನೀರು ವ್ಯರ್ಥವಾಗುವುದು. ಈ ನಿಟ್ಟಿನಲ್ಲಿ ಪೋಲಾಗುವ 38 ಕಡೆ ಗೇಟ್ ನಿರ್ಮಿಸಿ ನೀರು ಉಳಿಸುವ ಕೆಲಸ ಮಾಡಲಾಗುವುದು. ಅಮೂಲ್ಯ ವಸ್ತುಗಳಲ್ಲಿ ನೀರು ಪ್ರಮುಖ ಎನಿಸಿದೆ. ಇದರ ಬಳಕೆಯನ್ನು ಅರಿತು ಮಾಡಬೇಕಿದೆ. ನದಿ ನೀರು ಹರಿಸಿಕೊಳ್ಳುವ ಭರದಲ್ಲಿ ಸಾಕಷ್ಟು ವ್ಯರ್ಥವಾಗುವ ಬಗ್ಗೆ ಗಂಭೀರ ಚಿಂತನೆ ಮಾಡಿ, ಅಧಿಕಾರಿಗಳಿಗೆ ಸೂಚನೆ ನೀಡಿ ನಾಲೆಯಿಂದ ಪೋಲಾಗುವುದನ್ನು ತಡೆ ಹಿಡಿಯಬೇಕಿದೆ ಎಂದರು.

    ನೆಲ ಮತ್ತು ಜಲ ಜನರಲ್ಲಿ ಬಾಂಧವ್ಯ ಬೆಸೆಯುತ್ತದೆ. ಹಳೇ ಮೈಸೂರು ಭಾಗದಲ್ಲಿ ನೀರಿನ ಮಹತ್ವ ಅರಿತು ಹೇಮೆ ಹರಿಸುವ ಯೋಜನೆ ಕಾರ್ಯರೂಪಕ್ಕೆ ಬಂತು. ತೀರ ಸಂಕಷ್ಟದಲ್ಲಿದ್ದ ತುಮಕೂರು ಜಿಲ್ಲೆಗೆ ಹೇಮಾವತಿ ಜೀವ ಜಲವಾಯಿತು. ಈ ನೀರು 7 ಲಕ್ಷ ಹೆಕ್ಟೇರ್ ಭೂಮಿ ಉಳಿಸುವ ಯೋಜನೆಯಾಗಿ ನಂತರದಲ್ಲಿ 5 ಲಕ್ಷಕ್ಕೆ ಸೀಮಿತವಾಯಿತು. ಈಗ 3.80 ಲಕ್ಷ ಹೆಕ್ಟೇರ್ ಗೆ ಮಾತ್ರ ಬಳಕೆಗೆ ಮುಡಿಪಾಗಿದೆ. ಈ ನಿಟ್ಟಿನಲ್ಲಿ ಕುಡಿಯುವ ನೀರಿಗೆ ನೀರು ಉಳಿಸಿ ಮಿಕ್ಕ ನೀರು ಕೃಷಿಗೆ ಕೊಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಜತೆಗೆ ದೀರ್ಘಾವಧಿ ಬೆಳೆಗೆ ಕಡಿವಾಣ ಹಾಕಿ ಎರಡರಿಂದ ಮೂರು ತಿಂಗಳ ಬೆಳೆ ಬೆಳೆದುಕೊಳ್ಳಲು ರೈತರಲ್ಲಿ ಮನವಿ ಮಾಡಿದರು.

    ಈ ಜತೆಗೆ ಬೋರ್ ವೆಲ್ ಗೆ ಸುರಿದ ಹಣ ಉಳಿಸಿಕೊಳ್ಳಲು ರೈತರಿಗೆ ನೀರು ಮತ್ತು ವಿದ್ಯುತ್ ನೀಡಿದರೆ ಸಾಕು. ತಮ್ಮ ಸ್ವಾಭಿಮಾನ ಬದುಕು ಕಟ್ಟಿ ಕೊಳ್ಳುತ್ತಾರೆ. ಈ ಕೆಲಸ ಮಾಡಿದ ಶಾಸಕ ಜಯರಾಮ್ ಅವರನ್ನು ಮತ್ತೊಮ್ಮೆ ಗೆಲ್ಲಿಸುವ ಮೂಲಕ ಮತ್ತಷ್ಟು ಅಭಿವೃದ್ಧಿ ಕೆಲಸ ಮಾಡಿಕೊಳ್ಳಲು ಕರೆ ನೀಡಿದರು.

    ಮಾಜಿ ಸಚಿವ ಎಸ್.ಶಿವಣ್ಣ ಮಾತನಾಡಿ, ಜಿಲ್ಲೆಗೆ ಭಗೀರಥ ರೀತಿ ಬಂದ ಮಾಧುಸ್ವಾಮಿ ಅವರು ಕೈಗೆತ್ತಿಕೊಂಡ ಯೋಜನೆಗಳು ಮುಂದಿನ ದಿನಗಳಲ್ಲಿ ಜಿಲ್ಲೆಗೆ ನೀರಿನ ಹಾಹಾಕಾರ ತಪ್ಪುತ್ತದೆ. ಭದ್ರ ಮತ್ತು ಕೃಷ್ಣ ಮೇಲ್ದಂಡೆ ಯೋಜನೆಗಳು ಜಿಲ್ಲೆಯಲ್ಲಿ ಸಾಕಾರಗೊಳ್ಳಲಿದೆ. ರಾಜಕಾರಣಕ್ಕೆ ದುರ್ಬಳಕೆಯಾಗಿದ್ದ ಹೇಮೆ ನೀರು ಸದ್ಬಳಕೆಯ ಬಗ್ಗೆ ಜನರಿಗೆ ತಿಳಿಸಿದ ಸಚಿವರ ಕಾನೂನು ಬದ್ಧ ಕೆಲಸ ಜನ ಮನ್ನಣೆ ಗಳಿಸಿದೆ ಎಂದರು.

    ತುರುವೇಕೆರೆ ಶಾಸಕ ಮಸಾಲಾ ಜಯರಾಮ್ ಮಾತನಾಡಿ, ರಾಜಕೀಯ ಪುನರ್ಜನ್ಮ ನೀಡುವ ಕೆಲಸ ನೀರು ಹರಿಸುವುದಾಗಿದೆ. ಈ ಕೆಲಸಕ್ಕೆ ಸಚಿವ.ಮಾಧುಸ್ವಾಮಿ ಅವರ ಆಶೀರ್ವಾದ ಕಾರಣ. ನೂರರಷ್ಟು ಕೆರೆಕಟ್ಟೆಗಳು ಹೇಮೆಯಿಂದ ತುಂಬಿದೆ. ಮುಂದಿನ ದಿನದಲ್ಲಿ ನೀರು ಸರಾಗವಾಗಿ ಹರಿಯಲು ನಾಲೆ ಅಗಲೀಕರಣ ಯೋಜನೆಗೆ 1050 ಕೋಟಿ ರೂ ಮಂಜೂರಿಗೆ ಸಮ್ಮತಿಸಿದ್ದಾರೆ. ಈ ಹಿಂದೆ ಮಂಜೂರು ಮಾಡಿದ್ದ 650 ಕೋಟಿ ಪೈಪ್ ಲೈನ್ ಯೋಜನೆ ಕೈಬಿಟ್ಟು ನಾಲೆ ಮೂಲಕವೇ ಎಲ್ಲರಿಗೂ ನೀರು ನೀಡುವ ಕೆಲಸ ಮಾಡಿದರು. ಮುಂದೆ 2500 ಕ್ಯೂಸೆಕ್ಸ್ ನೀರು ನಾಲೆಯಲ್ಲಿ ಹರಿದು ಜಿಲ್ಲೆಗೆ ಸಾಕಷ್ಟು ನೀರು ಬರಲಿದೆ ಎಂದರು.

    ಇದೇ ಸಂದರ್ಭದಲ್ಲಿ ಸಚಿವರಿಗೆ ಹಾಗೂ ಶಾಸಕರಿಗೆ ಗ್ರಾಮಸ್ಥರು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಿಬಿಎಂಪಿ ಸದಸ್ಯ ಸಿ.ಕೆ.ರಾಮಮೂರ್ತಿ, ಗ್ರಾ.ಪಂ. ಅಧ್ಯಕ್ಷ ಕೆಂಪರಾಜು, ಉಪಾಧ್ಯಕ್ಷೆ ಮಂಜುಳ ರಘು, ಮುಖಂಡರಾದ ಕೊಂಡಜ್ಜಿ ವಿಶ್ವನಾಥ್, ಸಿದ್ದರಾಮಯ್ಯ, ಭಾನುಪ್ರಕಾಶ್, ಮಹೇಶ್, ಶಿವಲಿಂಗೇಗೌಡ, ಹಿಂಡಿಸ್ಕೆರೆ ಗ್ರಾ.ಪಂ. ಅಧ್ಯಕ್ಷ ಪ್ರಕಾಶ್, ಸದಾಶಿವಕುಮಾರ್ ಇತರರು ಇದ್ದರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಸ್ನೇಹಿತನ ಜೊತೆ ಪತ್ನಿ ಪರಾರಿ : ಸೆಲ್ಫಿ ವಿಡಿಯೋ ಫೇಸ್ ಬುಕ್ ಗೆ ಹರಿಬಿಟ್ಟು ನೇಣಿಗೆ ಶರಣಾದ ಪತಿರಾಯ..!!.

    February 18, 2025

    ಕೆರೆಗೆ ಬಿದ್ದು ತಾಯಿ– ಮಗಳ ದಾರುಣ ಸಾವು

    January 10, 2025

    ಹಕ್ಕು ಪತ್ರ ವಿತರಣೆಯಲ್ಲಿ ಲೋಪ: ದಲಿತ ಕುಟುಂಬಗಳಿಂದ ಆಹೋರಾತ್ರಿ ಧರಣಿ

    December 4, 2024
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ

    September 15, 2025

    ಬೀದರ್: ಜಿಲ್ಲಾ ಮಕ್ಕಳ ಕಲ್ಯಾಣ ಇಲಾಖೆ ಬೀದರ್ ಹಾಗೂ ಬೋಸ್ಕೋ ಬೆಂಗಳೂರು ಮತ್ತು ಡಾನ್ ಬಾಸ್ಕೋ ಬೀದರ್ ಇವರ ಸಂಯುಕ್ತ…

    ಸಂತಪೂರ ಮರಿಯ ಕೃಪಾ ದವಾಖಾನೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

    September 15, 2025

    ಸತ್ವಯುತ ಆಹಾರ ಸೇವನೆ, ನಿಯಮಿತ ವ್ಯಾಯಾಮದಿಂದ ಉತ್ತಮ ಆರೋಗ್ಯ: ಹಾದನೂರು ಪ್ರಕಾಶ್ 

    September 15, 2025

    ಅಧಿಕಾರಿಗಳನ್ನು ಬೋನಿನಲ್ಲಿ ಕೂಡಿ ಹಾಕಿದ ಪ್ರಕರಣ: 15 ಮಂದಿ ಅಧಿಕಾರಿಗಳ ವಿರುದ್ಧವೂ ದೂರು!

    September 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.