nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026
    Facebook Twitter Instagram
    ಟ್ರೆಂಡಿಂಗ್
    • ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು
    • ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!
    • ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ
    • ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ
    • ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ
    • ದುಶ್ಚಟ ಬಿಟ್ಟು ಕ್ರೀಡೆಯಲ್ಲಿ ತೊಡಗಲು ಕರೆ: ಶಾಸಕ ಕೆ.ಎನ್.ರಾಜಣ್ಣ
    • ಹೇಮಾವತಿ ಲಿಂಕ್ ಕೆನಾಲ್‌ ಗೆ ನಾನು ವಿರೋಧಿ: ಶಾಸಕ ಎಸ್.ಆರ್. ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮತದಾನ ಬಹಿಷ್ಕರಿಸಬೇಡಿ: ಮತದಾನದ ಜಾಗೃತಿ ಮೂಡಿಸಿದ ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ
    ರಾಜ್ಯ ಸುದ್ದಿ March 30, 2024

    ಮತದಾನ ಬಹಿಷ್ಕರಿಸಬೇಡಿ: ಮತದಾನದ ಜಾಗೃತಿ ಮೂಡಿಸಿದ ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ

    By adminMarch 30, 2024No Comments2 Mins Read
    thuruvekere

    ತುರುವೇಕೆರೆ: “ಮತದಾನ ಬಹಿಷ್ಕರಿಸಿ ಲೋಕಸಭಾ ಚುನಾವಣೆ ಸಂಬಂಧ ಮತದಾನದ ಹಕ್ಕನ್ನು ಚಲಾಯಿಸದೆ ಇರಬೇಡಿ. ನಿಮ್ಮ ಹಕ್ಕನ್ನು ನೀವು ಚಲಾಯಿಸದಿದ್ದರೆ ಒಂದು ಅಧ್ಬುತವಾದ ಶಕ್ತಿಯನ್ನುಕಳೆದುಕೊಳ್ಳುತ್ತೀರಿ. ನಿಮ್ಮ ಹೋರಾಟ ಏನೇ ಇದ್ದರೂ ನಾವು ಅದಕ್ಕೆ ಸ್ಫಂದಿಸುತ್ತೇವೆ” ಎಂದು ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ಮನವಿ ಮಾಡಿದರು.


    Provided by
    Provided by

    ಕೋಬಾಲ್ಡ್ ಹಾಗೂ ನಿಕ್ಕಲ್ ಗಣಿಗಾರಿಕೆಗೆ ಕೇಂದ್ರ ಸರ್ಕಾರ ಮುಂದಾಗಿರುವುದನ್ನು ಖಂಡಿಸಿ, ಸ್ಥಳೀಯ ರೈತರು ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಿದ್ದ ಹಿನ್ನಲೆಯಲ್ಲಿ, ತಿಪಟೂರು ಉಪವಿಭಾಗಾಧಿಕಾರಿಗಳು ಕೋಡಿಹಳ್ಳಿ ಕುಣಿಕೇನಹಳ್ಳಿ ಗ್ರಾಮಗಳಲ್ಲಿ ಮತದಾನ ಜಾಗೃತಿ ಸಭೆ ನಡೆಸಿದರು. ಚುನಾವಣಾಧಿಕಾರಿ ಜಿ.ಎನ್. ಮಂಜುನಾಥ್, ತಹಸೀಲ್ದಾರ್ ವೈ.ಎಂ. ರೇಣುಕುಮಾರ್, ಕುಣಿಗಲ್ ಡಿ.ವೈ.ಎಸ್ ಪಿ ಓಂ ಪ್ರಕಾಶ್  ಸರ್ಕಲ್ ಇನ್ಸ್ಪೆಕ್ಟರ್ ಲೋಹಿತ್ ಕುಮಾರ್  ಹಾಗೂ ರೆವಿನ್ಯೂ ಇಲಾಖಾಧಿಕಾರಿಗಳು ಮಂಗಳವಾರ ದುಂಡ ಗ್ರಾಮಕ್ಕೆ ಆಗಮಿಸಿದ ಸಂಧರ್ಭದಲ್ಲಿ, ಗ್ರಾಮಸ್ಥರು ಒಕ್ಕೊರಲಿನಿಂದ “ಗಣಿಗಾರಿಕೆ ಬಗ್ಗೆ ನಿಖರ ಮಾಹಿತಿ ನೀಡುವವರೆಗೂ ನಾವ್ಯಾರೂ ಮತ ಹಾಕುವುದಿಲ್ಲ” ಎಂಬ ವಿಚಾರವಾಗಿ ಇಂದು, ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ಕೋಡಿಹಳ್ಳಿ ಹಾಗೂ ಕುಣಿಕೇನ ಹಳ್ಳಿಯಲ್ಲಿ ಸುತ್ತಮುತ್ತಲ ಗ್ರಾಮಸ್ಥರನ್ನು ಸೇರಿಸಿ ಮತದಾನದ ಬಗ್ಗೆ ಜಾಗೃತಿ ಸಭೆ ನಡೆಸಿ ರೈತರ ಅಹವಾಲುಗಳನ್ನು ಆಲಿಸಿದರು.

    ಸ್ಥಳೀಯ ರೈತಮುಖಂಡರು ಮಾತನಾಡಿ, “ಈ ಭಾಗದಲ್ಲಿ ಕೋಬಾಲ್ಡ್ ಮತ್ತು ನಿಕ್ಕಲ್ ಗಣಿಯನ್ನು ಸರ್ಕಾರ ಈಗಾಗಲೇ ಪ್ರಾರಂಬಿಸಲು ಹೊರಟಿದ್ದು, ಇಲ್ಲಿ ಗಣಿಗಾರಿಕೆಯನ್ನು ಮಾಡಿದಲ್ಲಿ ಕೃಷಿಯನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದು ಕೃಷಿಕರನ್ನಾಗಿಯೇ ನಮ್ಮನ್ನು ಉಳಿಸಿ. ನಮ್ಮ ಜಮೀನನ್ನು ಕಬಳಿಸಿ ಗಣಿಗಾರಿಕೆ ಸ್ಥಾಪಿಸಲು ಸರ್ಕಾರ ಮುಂದಾಗಿರುವುದನ್ನು ವಿರೋದಿಸುತ್ತೇವೆ. ಪರಿಸರ ನಾಶವಾಗಿ ಹಲವಾರು ಮಾರಣಾಂತಿಕ  ಖಾಯಿಲೆಗಳು ಬರಲಿದೆ. ಹಾಗೊಂದು ವೇಳೆ ಸರ್ಕಾರ ಗಣಿಗಾರಿಕೆಗೆ ಮುಂದಾದಲ್ಲಿ ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡುವುದಾಗಿ” ಒಕ್ಕೊರಲಿನಿಂದ ತಿಳಿಸಿದರು.

    ಸಭೆಯನ್ನುದ್ದೇಶಿಸಿ ಮಾತನಾಡಿದ ಉಪವಿಭಾಗಾಧಿಕಾರಿಗಳು, “ಲೋಕಸಭಾ ಚುನಾವಣೆ ಸಂಬಂದ ಮತದಾನದ ಹಕ್ಕನ್ನು ಚಲಾಯಿಸದೆ ಇರಬೇಡಿ. ನಿಮ್ಮ ಹಕ್ಕನ್ನು ನೀವು ಚಲಾಯಿಸದಿದ್ದರೆ ಒಂದು ಅಧ್ಬುತವಾದ ಶಕ್ತಿಯನ್ನುಕಳೆದುಕೊಳ್ಳುತ್ತೀರಿ. ನಿಮ್ಮ ಹೋರಾಟ ಏನೇ ಇದ್ದರೂ ನಾವು ಅದಕ್ಕೆ ಸ್ಫಂದಿಸುತ್ತೇವೆ. ಸರ್ಕಾರ ನೀಡಿರುವ ಮಾರ್ಗದರ್ಶನದಲ್ಲಿ ನಾವು ಕೆಲಸ ಮಾಡುತ್ತಿದ್ದು, ಸರ್ಕಾರಿ ನೌಕರರು ಸರ್ಕಾರ ಮತ್ತು ಜನರ ಮಧ್ಯೆ ಸಂಪರ್ಕ ಕಲ್ಪಿಸುವ ಸೇತುವೆಯಾಗಿರುತ್ತೇವೆ. ನೀವುಗಳು ಕಾನೂನನ್ನು ಕೈಗೆತ್ತಿಕೊಳ್ಳದೆ, ಮುಂಬರುವ ಚುನಾವಣೆಯ ಮತದಾನ ದಿನ ಮತದಾನ ಮಾಡಿ. ಇಲ್ಲವಾದಲ್ಲಿ ನಮ್ಮ ಬಲವಂತವೇನಿಲ್ಲ. ಮತದಾನ ಮಾಡುವುದು ಬಿಡುವುದು ನಿಮಗೆ ಬಿಟ್ಟ ವಿಚಾರ” ಎಂದು ಗ್ರಾಮಸ್ಥರಿಗೆ ಮತದಾನದ ಬಗ್ಗೆ ಮನದಟ್ಟು ಮಾಡಿದರು.

    ಆದರೂ ಗ್ರಾಮಸ್ಥರು, “ಇಲ್ಲಿ ಗಣಿಗಾರಿಕೆ ಮಾಡಲು ನಾವುಗಳು ಒಪ್ಪುವುದಿಲ್ಲ. ಗಣಿಗಾರಿಕೆ ಕೈಬಿಟ್ಟರೆ ಮಾತ್ರ ಮತದಾನ ಮಾಡುವುದಾಗಿ” ತಮ್ಮ ನಿಲುವನ್ನು ಅಧಿಕಾರಿಗಳಿಗೆ ತಿಳಿಸಿದರು.

    ತಹಸೀಲ್ದಾರ್ ವೈ.ಎಂ. ರೇಣುಕುಮಾರ್, ಎ.ಆರ್.ಓ. ಮಂಜುನಾಥ್, ಡಿವೈಎಸ್ಪಿ ಓಂಪ್ರಕಾಶ್, ಸಿಪಿಐ ಲೋಹಿತ್, ಎಸೈ ಚಂದ್ರಕಾಂತ್ ಮತದಾನದ ಮಹತ್ವವನ್ನು ಗ್ರಾಮಸ್ಥರಿಗೆ ತಿಳಿಸಿಕೊಟ್ಟರು. ಈ ಸಂಧರ್ಭ‍ದಲ್ಲಿ ಕೋಡಿಹಳ್ಳಿ,ದುಂಡ, ಕುಣಿಕೇನಹಳ್ಳಿ, ಬಾಣಸಂದ್ರ ಬಲಮಾದಿಹಳ್ಳಿ ಸೇರಿದಂತೆ ಸುತ್ತಮುತ್ತ ಗ್ರಾಮದ ಮುಖಂಡರುಗಳಾದ ಗ್ರಾ.ಪಂ.ಸದಸ್ಯರಾದ ದುಂಡಶಿವಕುಮಾರ್, ನವೀನ್, ಮಾಜಿ ಸದಸ್ಯ ಪ್ರಕಾಶ್, ತಾ.ಪಂ.ಮಾಜಿ ಸದಸ್ಯೆಲಕ್ಷ್ಮೀದೇವಮ್ಮ, ಡೈರಿ ಅಧ್ಯಕ್ಷ ಸುರೇಶ್, ಪರಮೇಶ್, ಈಶ್ವರಯ್ಯ, ಮಲ್ಲಿಕಾರ್ಜುನ್, ನಾಗಮ್ಮ, ಜ್ಯೋತಿ, ಕಿಟ್ಟಿ,ಶಶಿಧರ್, ಪರಮೇಶ್, ಮಂಜುನಾಥ್, ಬಸವಣ್ಣ, ಗುರುಲಿಂಗಯ್ಯ, ಯೋಗೀಶ್, ಎ.ಪಿ.ಎಂ.ಸಿ ಸದಸ್ಯ  ನರಸಿಂಹರಾಜು, ಕೃಷ್ಣಸ್ವಾಮಿ, ಚಂದ್ರಣ್ಣ, ಕುಮಾರ್, ಶೇಖರಣ್ಣ, ಆನಂದ್, ಬಸವರಾಜು, ಮಲ್ಲಿಕ್ , ಕಲಾವತಿ, ಸಾವಿತ್ರಮ್ಮ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.

    ವರದಿ: ಸುರೇಶ್ ಬಾಬು ಎಂ ತುರುವೇಕೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026

    ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದಲ್ಲಿ ಭಾರಿ ಸಂಚಲನ ಉಂಟಾಗಿದ್ದು, ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯ ನಂತರ…

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ

    May 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.