ಪಾವಗಡ: ನನ್ನ ಮೇಲೆ ಸುಖಾ ಸುಮ್ಮನೆ ಮಾಡಿರುವ ಸುಳ್ಳು ಆರೋಪ ಮಾಡಲಾಗಿದೆ ಎಂದು ಪಾವಗಡ ರೈತ ಸಂಘದ ಅಧ್ಯಕ್ಷ ಪೂಜಾರಪ್ಪ ಅಸಹನೆ ಹೊರಹಾಕಿದರು.
ಪಾವಗಡ ಪಟ್ಟಣದಲ್ಲಿ ಮಾದ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಇತ್ತೀಚಿಗೆ ರೈತ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಶಂಕರಪ್ಪ ಅವರು ನನ್ನ ಮೇಲೆ ಇಲ್ಲ ಸಲ್ಲದ ಸುಳ್ಳು ಆರೋಪ ಮಾಡಿದ್ದಾರೆ. ವಸೂಲಿ ದಂಧೆಗಿಳಿದಿದ್ದೀನಿ ಇಲಾಖಾಧಿಕಾರಿಗಳಿಗೆ ಹಣ ಬೇಡಿಕೆಯಿಟ್ಟು ಬದುಕುತ್ತಿದ್ದೀನಿ ಎಂಬ ಹೇಳಿಕೆ ನೀಡಿದ್ದಾರೆ. ಇದು ತುಂಬಾ ಬೇಸರ ತಂದಿದೆ ಎಂದರು.
ಇಂತಹ ಸತ್ಯವಲ್ಲದ ವಿಚಾರಗಳನ್ನು ಪ್ರಚಾರ ಮಾಡಿ ನನ್ನ ತೇಜೋವಧೆ ಮಾಡುತ್ತಿರುವುದು ಕೆಟ್ಟ ಸಂಸ್ಕೃತಿ. ಇದು ಇಂದಿಗೆ ಕೊನೆಯಾಗಬೇಕು ಇಲ್ಲವಾದರೆ ನಾನು ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಅವರು ಎಚ್ಚರಿಸಿದರು.
ಸಾಮಾಜಿಕವಾಗಿ ರೈತ ಜನಪರವಾಗಿ ಹೋರಾಟ ಮಾಡುತ್ತ ಬಂದವನು ನಾನು. ಅಂತಹ ಮಾಹಿತಿಯಿದ್ದರೆ ನೇರವಾಗಿ ಬಹಿರಂಗಪಡಿಸಲಿ, ಮೊದಲು ರೈತ ಸಂಘದ ನೀತಿ ನಿಯಮ ಸಿದ್ದಾಂತ ಅರಿತು ನಡಿ ಎಂದು ಗುಡುಗಿದರು. ಈ ಸಂದರ್ಭದಲ್ಲಿ ರೈತ ಸಂಘದ ಪದಾಧಿಕಾರಿಗಳಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296