nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಮರ ಶಿಲ್ಪಿ ಜಕಣಾಚಾರಿ ಕಲಾಕೃತಿಗಳು ಅದ್ಭುತ: ಜಿ.ರವಿ

    January 3, 2026

    ಬೀದರ್: ಸಂತಪೂರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ; 11 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ, ಆಟೋ ವಶ

    January 3, 2026

    ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ

    January 2, 2026
    Facebook Twitter Instagram
    ಟ್ರೆಂಡಿಂಗ್
    • ಅಮರ ಶಿಲ್ಪಿ ಜಕಣಾಚಾರಿ ಕಲಾಕೃತಿಗಳು ಅದ್ಭುತ: ಜಿ.ರವಿ
    • ಬೀದರ್: ಸಂತಪೂರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ; 11 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ, ಆಟೋ ವಶ
    • ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ
    • ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ
    • ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ
    • ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಕಲ್ಪಿಸಿದ ಕಾಂಗ್ರೆಸ್: ಡಾ.ಇಂತಿಯಾಜ್ ಅಹಮದ್ ಅಭಿಮತ
    • ಪದವೀಧರರ ಕ್ಷೇತ್ರ: ಕರಡು ಮತದಾರರ ಪಟ್ಟಿ ಸಿದ್ಧ | ಚಿರತೆ ಬಗ್ಗೆ ಸುಳ್ಳು ಮಾಹಿತಿಗೆ ಕಾನೂನು ಕ್ರಮ
    • ಬುದ್ಧ, ಬಸವ, ಅಂಬೇಡ್ಕರ್ ಜಗತ್ತಿನ ಬೆಳಕು: ಶ್ರೀ ರುದ್ರಮುನಿ ಸ್ವಾಮೀಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೇದಾರಲಿಂಗ ಗುರುಪಟ್ಟಾಧಿಕಾರ ಮಹೋತ್ಸವ ಸಮಾರಂಭದಲ್ಲಿ 50 ಸಾವಿರ ಜನ ಭಾಗಿಯಾಗುವ ನಿರೀಕ್ಷೆ!
    ಜಿಲ್ಲಾ ಸುದ್ದಿ April 9, 2024

    ಕೇದಾರಲಿಂಗ ಗುರುಪಟ್ಟಾಧಿಕಾರ ಮಹೋತ್ಸವ ಸಮಾರಂಭದಲ್ಲಿ 50 ಸಾವಿರ ಜನ ಭಾಗಿಯಾಗುವ ನಿರೀಕ್ಷೆ!

    By adminApril 9, 2024No Comments2 Mins Read
    owradh

    ಔರಾದ್: ತಾಲೂಕಿನ ಹೆಡಗಾಪೂರ ಗ್ರಾಮದ ಶಿವಲಿಂಗೇಶ್ವರ ಸಂಸ್ಥಾನ ಮಠಕ್ಕೆ ಕೇದಾರಲಿಂಗ ದೇವರ ಪಟ್ಟಾಧಿಕಾರ ಕಾರ್ಯಕ್ರಮ ಏ. 15ರಂದು ಸಂಭ್ರಮದಿಂದ ನಡೆಯಲಿದೆ. ಸಮಾರಂಭದಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ ಜನ ಭಾಗವಹಿಸಲಿದ್ದಾರೆ ಎಂದು ಹೆಡಗಾಪೂರ ಶ್ರೀಗಳಾದ ಶಿವಲಿಂಗ ಶಿವಾಚಾರ್ಯರು ಹೇಳಿದರು.

    ಸೋಮವಾರ ತಾಲೂಕಿನ ಹೆಡಗಾಪೂರ ಗ್ರಾಮದ ಶಿವಲಿಂಗೇಶ್ವರ ಸಂಸ್ಥಾನ ಮಠದಲ್ಲಿ ಏ.8 ರಿಂದ 15ರವರೆಗೆ ನಡೆಯಲಿರುವ ಗುರುವಂದನಾ ಮತ್ತು ಗುರುಪಟ್ಟಾಧಿಕಾರ ಮಹೋತ್ಸವ ಭಿತ್ತಿಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ದಿವ್ಯಸಾನಿಧ್ಯ ವಹಿಸಿ ಆರ್ಶೀವಚನ ನೀಡಿದರು.


    Provided by
    Provided by

    1961ರಲ್ಲಿ ನನಗೆ ಲಿಂಗೈಕ್ಯ ಡಾ. ಚನ್ನಬಸವ ಪಟ್ಟದ್ದೇವರು ಕರೆತಂದು ಈ ಮಠಕ್ಕೆ ಪಟ್ಟಾಧಿಕಾರ ಮಾಡಿಸಿದ್ದಾರೆ. ಧರ್ಮದ ಆಚರಣೆ, ಭಕ್ತರಿಗೆ ಒಳ್ಳೆಯ ಮಾರ್ಗ ನೀಡುವ ಕೆಲಸ ಸಂಸ್ಥಾನ ಮಠ ಮಾಡಿಕೊಂಡು ಬಂದಿದೆ. ಈಗ ನನಗೆ ವಯಸ್ಸಾಗಿದೆ. ಆದ್ದರಿಂದ ಕೇದಾರಲಿಂಗ ದೇವರಿಗೆ ಪಟ್ಟಾಧಿಕಾರ ಮಾಡುತ್ತಿದ್ದೇವೆ. ತಂದೆ-ತಾಯಿ ಸಂಬಂಧ ತೊರೆದು, ಸಮಾಜವೇ ಅವರಿಗೆ ತಂದೆ-ತಾಯಿಯ ರೂಪದಲ್ಲಿ ಬೆನ್ನಿಗೆ ನಿಲ್ಲಬೇಕು. ಎಲ್ಲರ ಕರುಣೆ ಅವರೊಂದಿಗಿರಲಿ ಎಂದು ಹೇಳುತ್ತ ಕಣ್ಣೀರು ಹಾಕಿದರು.

    ಮಠದಲ್ಲಿ 50 ಮಕ್ಕಳ ವಸತಿ ಶಾಲೆ ಆರಂಭಿಸಲಾಯಿತು. ಇದಕ್ಕೆ ಗ್ರಾಮಸ್ಥರು ಸಹಾಯ ಮಾಡುತ್ತಿದ್ದರು. ಈಗ ಸಂಸ್ಥೆಯನ್ನು ಸರಕಾರದ ಅಧೀನಕ್ಕೆ ನೀಡಲಾಗಿದೆ. ಹೆಡಗಾಪೂರ ಗ್ರಾಮಸ್ಥರು ಸೇರಿದಂತೆ ಭಕ್ತರು ಮಠದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿದ್ದಾರೆ ಎಂದರು.

    ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ ರಾಜ್ಯ ಸಂಚಾಲಕ ಶ್ರೀಕಾಂತ ಸ್ವಾಮಿ ಮಾತನಾಡಿ, ಹೆಡಗಾಪೂರ ಮಠ ವೀರಶೈವ ಲಿಂಗಾಯತ, ಬಸವ ತತ್ವ ಸಿದ್ಧಾಂತದ ಮೇಲೆ ಕಾರ್ಯ ನಿರ್ವಹಿಸಿದೆ. ಗ್ರಾಮದಲ್ಲಿ ಶಾಂತಿ ನೆಮ್ಮದಿ ಕಾಪಾಡುವಲ್ಲಿ ಶ್ರೀಗಳ ಪಾತ್ರವಿದೆ. ಶಾಲೆ ಸ್ಥಾಪಿಸಿ ಶಿಕ್ಷಣ ನೀಡಿದ್ದಾರೆ. ಇಲ್ಲಿಯ ವಿದ್ಯಾರ್ಥಿಗಳು ದೇಶ ವಿದೇಶದಲ್ಲಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ದೇವರ ಹಿಪ್ಪರಗಿ ಗ್ರಾಮದಲ್ಲಿ ಜನಿಸಿದ ಕೇದಾರಲಿಂಗ ದೇವರು ಅವರನ್ನು ಮಠಕ್ಕೆ ಪಟ್ಟಾಧಿಕಾರ ಮಾಡುತ್ತಿದ್ದು, ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ ಎಂದರು.

    ಈ ವೇಳೆ ಕೇದಾರಲಿಂಗ ದೇವರು, ಚಿಟಗುಪ್ಪ ಶ್ರೀಗಳಾದ ಗುರುಲಿಂಗ ಶಿವಾಚಾರ್ಯರು, ಬಮ್ಮಲಿಂಗ ದೇವರು, ಭೋಜಾಲಿಂಗ ದೇವರು, ಶಿವಬಸವ ದೇವರು, ಪ್ರಮುಖರಾದ ರಾಜಶೇಖರ ಪಾಟೀಲ್, ಶ್ರೀಮಂತ ಪಾಟೀಲ್, ಬಸವರಾಜ ನಿಟ್ಟೂರೆ, ಶಾಮರಾವ ಬೆಳಕುಣೆ, ಅಭಿಷೇಕ್ ಸ್ವಾಮಿ, ಧನರಾಜ ಬೆಳಕುಣೆ, ಬಸವರಾಜ ಕುಣಿಕೇರೆ, ಮಹಾದೇವ ಕುಣಿಕೇರೆ, ಬಸವರಾಜ ಮಾಶಿಮಾಡೆ, ಶಿವಲಿಂಗ, ಸುನಿಲ ಪಾಟೀಲ್ ಸೇರಿದಂತೆ ಅನೇಕರಿದ್ದರು.

    ಕಾರ್ಯಕ್ರಮದ ವಿವರ:
    ಏ.12ರಂದು ಪ್ರವಚನದ ಸಮಾರೋಪ ನಡೆಯಲಿದೆ. ಹೊಸಪೇಟೆ ಕೊಟ್ಟುರು ಸ್ವಾಮಿ ಸಂಸ್ಥಾನ ಮಠದ ಜಗದ್ಗುರು ನಿರಂಜನ ಮಹಾಸ್ವಾಮಿಜಿಗಳು, ಕೊಟ್ಟೂರು ಬಸವಲಿಂಗ ಮಹಾಸ್ವಾಮಿಜಿಗಳು ದಿವ್ಯಸಾನಿಧ್ಯ ವಹಿಸಲಿದ್ದಾರೆ.

    ಅಭಿನವ ಶಿವಲಿಂಗ ಮಹಾಸ್ವಾಮಿಜಿ ನೇತೃತ್ವ ವಹಿಸುವರು. ಸಿದ್ದರಾಮ ಮಹಾಸ್ವಾಮೀಜಿ, ಅಲ್ಲಮಪ್ರಭುಲಿಂಗೇಶ್ವರ ಮಹಾಸ್ವಾಮೀಜಿ, ಅಭಿನವ ಚನ್ನಬಸವ ಮಹಾಸ್ವಾಮೀಜಿಗಳು, ಪ್ರಭುಕುಮಾರ ಶಿವಾಚಾರ್ಯರು ಭಾಗವಹಿಸಲಿದ್ದಾರೆ.

    ಡಾ. ಶಿವಲಿಂಗ ಶಿವಾಚಾರ್ಯರು ಅಧ್ಯಕ್ಷತೆ ವಹಿಸಲಿದ್ದಾರೆ. ಏ. 13ರಂದು ಶಿವದೀಕ್ಷೆಯನ್ನು ಶಿವಲಿಂಗ ಶಿವಾಚಾರ್ಯ ಸ್ವಾಮಿಗಳ ಸಾನಿಧ್ಯದಲ್ಲಿ ನಡೆಯಲಿದೆ. ಏ. 14ರಂದು ಶಿವಲಿಂಗ ಶಿವಾಚಾರ್ಯರಿಗೆ ಗುರುವಂದನಾ ಸಮಾರಂಭ ಮತ್ತು ರುದ್ರಾಕ್ಷಿ ತುಲಾಭಾರ ನಡೆಯಲಿದೆ.
    ಶ್ರೇಷ್ಠ ಸಂತ ಶಿವಲಿಂಗ ಶಿವಾಚಾರ್ಯರು ಗ್ರಂಥ ಬಿಡುಗಡೆ ಮಾಡಲಾಗುತ್ತಿದೆ. ಅಲ್ಲದೇ ಅಂದು ಸಾಯಂಕಾಲ 6 ಗಂಟೆಗೆ ಧರ್ಮಸಭೆ ನಡೆಯಲಿದೆ. ಏ. 15ರಂದು ಉಜ್ಜಯಿನಿ ಜಗದ್ಗುರುಗಳ ಸಾನಿಧ್ಯದಲ್ಲಿ ಹೇಡಗಾಪೂರ ಶಿವಲಿಂಗೇಶ್ವರ ಸಂಸ್ಥಾನ ಮಠಕ್ಕೆ ಕೇದಾರಲಿಂಗ ದೇವರ ಗುರು ಪಟ್ಟಾಧಿಕಾರ ನಡೆಯಲಿದೆ.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಅಮರ ಶಿಲ್ಪಿ ಜಕಣಾಚಾರಿ ಕಲಾಕೃತಿಗಳು ಅದ್ಭುತ: ಜಿ.ರವಿ

    January 3, 2026

    ಬೀದರ್: ಸಂತಪೂರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ; 11 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ, ಆಟೋ ವಶ

    January 3, 2026

    ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಿ: ಎಸ್.ಎನ್.ನಾಗರಾಜು ಒತ್ತಾಯ

    January 2, 2026

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅಮರ ಶಿಲ್ಪಿ ಜಕಣಾಚಾರಿ ಕಲಾಕೃತಿಗಳು ಅದ್ಭುತ: ಜಿ.ರವಿ

    January 3, 2026

    ಸರಗೂರು:  ಅಮರ ಶಿಲ್ಪಿ ಜಕಣಾಚಾರಿ ಅವರು ರೂಪಿಸಿದ ಅದ್ಭುತ ಕಲಾಕೃತಿಗಳು ಇಂದಿಗೂ ನಮ್ಮನ್ನು ಬೆರಗುಗೊಳಿಸುತ್ತವೆ. ಇಂಥ ಕಲೆ ಉಳಿಸಿ ಬೆಳೆಸುವುದು…

    ಬೀದರ್: ಸಂತಪೂರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ; 11 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ, ಆಟೋ ವಶ

    January 3, 2026

    ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ

    January 2, 2026

    ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ

    January 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.