nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026
    Facebook Twitter Instagram
    ಟ್ರೆಂಡಿಂಗ್
    • ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ
    • ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ
    • ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್
    • ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ
    • ಗ್ರಾ.ಪಂ. ಕರ ವಸೂಲಿಗಾರರ ಹುದ್ದೆ ಸ್ಥಳೀಯರಿಗೆ ನೀಡಿ
    • ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು
    • ಕಲಿತ ವಿಷಯ ಅಂತರ್ಗತ ಮಾಡಿಕೊಳ್ಳದಿದ್ದರೆ ಅದು ವ್ಯರ್ಥ: ಡಾ.ಸಿದ್ಧರಾಜು
    • ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡಿಗರಿಗೆ ಅನ್ಯಾಯವಾದರೂ ಒಂದು ದಿನ ಬಿಜೆಪಿಯ ಸಂಸದರು ಈ ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆಯೇ?: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ April 15, 2024

    ಕನ್ನಡಿಗರಿಗೆ ಅನ್ಯಾಯವಾದರೂ ಒಂದು ದಿನ ಬಿಜೆಪಿಯ ಸಂಸದರು ಈ ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆಯೇ?: ಸಿಎಂ ಸಿದ್ದರಾಮಯ್ಯ

    By adminApril 15, 2024No Comments4 Mins Read
    c.m siddaramaya

    ತುಮಕೂರು(ಕೆ.ಬಿ.ಕ್ರಾಸ್): ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಅನ್ಯಾಯವಾದರೂ ಒಂದು ದಿನ ಬಿಜೆಪಿಯ ಸಂಸದರು ಈ ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆಯೇ? ಮಾತನಾಡ ಡಿದ್ದರೆ ಇವರು ಲೋಕಸಭೆಗೆ ಯಾಕೆ ಹೋಗಬೇಕು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

    ಅವರು ತುಮಕೂರು ಲೋಕಸಭಾ ಚುನಾವಣೆಯ ತಮ್ಮ ಪಕ್ಷದ ಅಭ್ಯರ್ಥಿಯಾದ ಮುದ್ಧುಹನುಮೇಗೌಡ ಅವರ ಪರ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ನಂತರ ತಮ್ಮ ಅಭ್ಯರ್ಥಿಯ ಪರ ಮತದಾರರಲ್ಲಿ ಮತಯಾಚನೆ ಮಾಡಿ ಮಾತನಾಡಿದರು.


    Provided by
    Provided by

    ಕಳೆದ ಲೋಕಸಭಾ ಚುನಾವಣೆಯಲ್ಲಿ 25 ಸದಸ್ಯರು ಆಯ್ಕೆಯಾಗಿದ್ದರು. ಅದರಲ್ಲಿ ಬಸವರಾಜ್ ಕೂಡ ಒಬ್ಬರು ಈಗ ಸುಮಲತಾ ಅಂಬರೀಶ್ ಹಾಗು ಜೆಡಿಎಸ್ ನಿಂದ ಗೆದ್ದ ಪ್ರಜ್ವಲ್ ಗೌಡ ಸೇರಿ 27 ಜನ ಆಗಿದ್ದಾರೆ. ಕರ್ನಾಟಕಕ್ಕೆ ಅನ್ಯಾಯವಾಗಿದೆ . ಬರಗಾಲ ಬಂದರೂ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ಕರ್ನಾಟಕಕ್ಕೆ 15 ನೇ ಹಣಕಾಸು ಆಯೋಗ ಶಿಫಾರಸು ಮಾಡಿದ್ದ ಹಣವನ್ನೂ ಕೊಡಲಿಲ್ಲ. ಅವರೇ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಗೆ 5300 ಕೋಟಿ ಕೊಡುತ್ತೇವೆ ಎಂದು ಒಂದು ರೂಪಾಯಿ ಕೊಡಲಿಲ್ಲ ಎಂದರು.

    ಸೋಮಣ್ಣ ಒಂದೇ ಒಂದು ಮನೆ ಬಡವರಿಗೆ ಹಂಚಿಕೆ ಮಾಡಿದ ನಿದರ್ಶನವಿದ್ದರೆ ಹೇಳಲಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಡಪಾಯಿ ಪುಟ್ಟರಂಗಶಟ್ಟಿ ಹಾಗೂ ನನ್ನ ವಿರುದ್ಧ ಸೋತ ಸೋಮಣ್ಣ ಅವರನ್ನು ಇಲ್ಲಿಗೆ ಕರೆದುಕೊಂಡು ಬಂದು ನಿಲ್ಲಿಸಿದ್ದಾರೆ. ಸೋಮಣ್ಣ ವಸತಿ ಸಚಿವರಾಗಿದ್ದ ಸಂದರ್ಭದಲ್ಲಿ ಒಂದೇ ಒಂದು ಮನೆ ಬಡವರಿಗೆ ಹಂಚಿಕೆ ಮಾಡಿದ ನಿದರ್ಶನವಿದ್ದರೆ ಹೇಳಲಿ ನೋಡೋಣ. ಒಂದು ಮನೆ ಕೊಡಲಿಲ್ಲ. ನಮ್ಮ ಅವಧಿಯಲ್ಲಿ 14.46 ಲಕ್ಷ ಮನೆಗಳನ್ನು ಕಟ್ಟಿಸಿದ್ದೇವೆ. ಸೋಮಣ್ಣ ಒಂದೇ ಒಂದು ಮನೆ ಬಡವರಿಗೆ ಕಟ್ಟಿಸಿದ್ದ ನಿದರ್ಶನವಿದ್ದರೆ ಅದರ ದಾ ಬಡವರ ಮುಂದಿಟ್ಟು ಕೆಲಸಗಾರ ಎಂದು ಹೇಳಲಿ ಎಂದರು.

    ನರೇಂದ್ರ ಮೋದಿ ಅವರ ಮುಂದೆ ನಿಲ್ಲಲು ಧೈರ್ಯ ಇದೆಯೇ?:

    ಸೋಮಣ್ಣನವರನ್ನು ಲೋಕಸಭೆಗೆ ಕಳಿಸಿದರೆ, ನಿಮ್ಮ ಸಮಸ್ಯೆಗಳನ್ನು ಪ್ರಸ್ತಾಪ ಮಾಡುತ್ತಾರೆಯೇ, ನಿಮ್ಮ ಪರವಾಗಿ ಧ್ವನಿ ಎತ್ತುತ್ತಾರೆಯೇ , ನರೇಂದ್ರ ಮೋದಿ ಅವರ ಮುಂದೆ ನಿಲ್ಲಲು ಧೈರ್ಯ ಇದೆಯೇ? ಎಲ್ಲಾ ಸಂಸದರು ನರೇಂದ್ರ ಮೋದಿ ಯವರನ್ನು ಕಂಡರೆ ಗಡ ಗಡ ಎಂದು ನಡುಗುತ್ತಾರೆ. ಇಂಥವರನ್ನು ಲೋಕಸಭೆಗೆ ಕಳಿಸಿದರೆ ಸಮಸ್ಯಗೆ ಪರಿಹಾರ ಸಿಗುವುದೇ ಎಂದು ಪ್ರಶ್ನಿಸಿಕೊಳ್ಳಬೇಕು. 27 ಜನ ಸಂಸದರಿಂದ ಕರ್ನಾಟಕದ ಜನರ ಹಿತವನ್ನು ರಕ್ಷಿಸಲು ಸಾಧ್ಯವಿಲ್ಲ. ಅದಕ್ಕಾಗಿ ಸೋಮಣ್ಣ ಅವರನ್ನು ಯಾವ ಕಾರಣಕ್ಕೂ ಬೆಂಬಲಿಸಬಾರದು ಎಂದರು.

    ಬಾಯಿ ಬಿಡದವರನ್ನು ಕಳಿಸಬೇಕೊ ಎಂದು ತೀರ್ಮಾನ ಮಾಡಿ:

    ಮುದ್ದಹನುಮೇಗೌಡರು 2014 ರಿಂದ 2019 ರವರೆಗೆ ಲೋಕಸಭಾ ಸದಸ್ಯರಾಗಿದ್ದರು. ಜನರ ಧ್ವನಿಯಾಗಿ 50 ವರ್ಷಗಳ ಕಾಲ ನಿಮ್ಮ ಧ್ವನಿಯಾಗಿ ಸಮರ್ಥವಾಗಿ ಪ್ರತಿನಿಧಿಸಿದ್ದಾರೆ. ಕೊಬ್ಬರಿ, ರೈತರು ಹಾಗೂ ಎಲ್ಲರ ಸಮಸ್ಯೆಗಳನ್ನು ಪ್ರಸ್ತಾಪಿಸಿ ಕರ್ನಾಟಕದ ಅಭಿವೃದ್ಧಿ ಬಗ್ಗೆ ಅನೇಕ ವಿಚಾರಗಳನ್ನು ಪ್ರಸ್ತಾಪಿಸಿ ಪರಿಹಾರ ಕೊಡಿಸುವ ಕೆಲಸವನ್ನು ಮುದ್ದಹನುಮೇಗೌಡ ರು ಮಾಡಿದ್ದರು ಎನ್ನುವುದು ಇತಿಹಾಸ. ಇಂಥವರನ್ನು ಕಳಿ ಸಬೇಕೋ ಅಥವಾ ಬಾಯಿ ಬಿಡದವರನ್ನು ಕಳಿಸಬೇಕೊ ಎಂದು ತೀರ್ಮಾನ ಮಾಡಬೇಕು ಎಂದು ಕರೆ ನೀಡಿದರು.

    ಸಮಾನತೆ ಎಲ್ಲರಿಗೂ ದೊರಕಬೇಕು:

    ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನವಾದ ಇಂದು ಅವರನ್ನು ಸ್ಮರಿಸಿದ್ದೇವೆ. ಅಂಬೇಡ್ಕರ್ ಅವರು ಹೆಣ್ಣುಮಕ್ಕಳ ಪ್ರಗತಿಯಾಗದೆ ಈ ಸಮಾಜದಲ್ಲಿ ಪ್ರಗತಿ ಸಾಧ್ಯವಿಲ್ಲ. ಅವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಬೇಕು. ರೈತರಿಗೆ, ಹಿಂದುಳಿದವರಿಗೆ, ಅಸಮಾನತೆಯಿಂದ ನರಳುವ ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಿದಾಗ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ. ಸಮಾನತೆಯ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ನಮ್ಮ ದೇಶದ ಸಾಮಾಜಿಕ ಹಾಗೂ ಆರ್ಥಿಕ ವ್ಯವಸ್ಥೆಗೆ ಸರಿಹೊಂದುವ ಶ್ರೇಷ್ಠ ಸಂವಿಧಾನವನ್ನು ನೀಡಿದ್ದಾರೆ. ಸ್ವಾತಂತ್ರ್ಯ, ಸಮಾನತೆ , ಭ್ರಾತೃತ್ವದ ತತ್ವಗಳನ್ನು ಸ್ಪಷ್ಟವಾಗಿ ಪ್ರತಿಪಾದಿಸಿದ್ದಾರೆ. ಸಮಾನತೆ ಎಲ್ಲರಿಗೂ ದೊರಕಬೇಕು. ಎಲ್ಲಾರೂ ಒಂದು ತಾಯಿಯ ಮಕ್ಕಳಂತೆ ಬದುಕುವ ವಾತಾವರಣ ನಿರ್ಮಾಣವಾಗಬೇಕು. ಇದನ್ನೇ ಕುವೆಂಪು ಅವರು ಸರ್ವ ಜನಾಂಗದ ಶಾಂತಿಯ ತೋಟವಾಗಬೇಕೆಂದು ಹೇಳಿದ್ದರು ಎಂದರು.

    ಸಮಾನತೆಯಲ್ಲಿ ನಂಬಿಕೆ ಇಟ್ಟವರು ಕಾಂಗ್ರೆಸ್ ಪಕ್ಷ:

    ಸಮಾನತೆಯಲ್ಲಿ ನಂಬಿಕೆ ಇಟ್ಟವರು ಕಾಂಗ್ರೆಸ್ ಪಕ್ಷ. ಈ ದೇಶದ ಸಂಪತ್ತು, ಅಧಿಕಾರ ಸಮಾನವಾಗಿ ಹಂಚಿಕೆಯಾಗಬೇಕು. ಕೆಲವರ ಕೈಯಲ್ಲೇ ಅಧಿಕಾರವಿರಬಾರದು. ದೇಶದ ಅಧಿಕಾರ ಬಲಾಢ್ಯರ ಕೈಯಲ್ಲಿ ಸಿಲುಕಿದರೆ ಸಮಸಮಾಜ ನಿರ್ಮಾಣ ಸಾಧ್ಯವಿಲ್ಲ. ದೌರ್ಜನ್ಯ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ. ರಾಜಕೀಯ ಸ್ವಾತಂತ್ಯ ಸಿಕ್ಕರೆ ಸಾಲದು ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ಸಮಸಾಮಾಜ ನಿರ್ಮಾಣ ಸಾಧ್ಯ ಎಂದು ಅಂಬೇಡ್ಕರ್ ಹೇಳಿದ್ದಾರೆ. ಅವರ ಆದರ್ಶ, ತತ್ವ ಹಾಗೂ ಧ್ಯೇ ಯೋದ್ದೇಶಗಳನ್ನು ಈಡೇರಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದರು.

    ನುಡಿದಂತೆ ನಡೆದಿದ್ದೇವೆ:

    ನಾವು ಹಿಂದೆ ಅಧಿಕಾರದಲ್ಲಿದ್ದಾಗ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೆವು. ಜೊತೆಗೆ 30 ಕಾರ್ಯಕ್ರಮಗಳನ್ನು ಜಾರಿ ಮಾಡಿ ನುಡಿದಂತೆ ನಡೆದಿದ್ದೇವೆ.

    ಈ ಬಾರಿ ನಾನು ಮತ್ತು ಡಿ.ಕೆ. ಶಿವಕುಮಾರ್ ಅವರು 50 ಗ್ಯಾರಂಟಿ ಗಳಿಗೆ ಸಹಿ ಮಾಡಿ ಕೊಟ್ಟಿ ದ್ದೆವು. ರಾಜ್ಯ ದಿವಾಳಿಯಾಗುತ್ತದೆ ಎಂದು ಬಿಜೆಪಿ ಇದನ್ನು ಟೀಕಿಸಿತ್ತು. ಅಭಿವೃದ್ಧಿಗೆ ಹಣವಿರುವುದಿಲ್ಲ ಎಂದರು.

    ಗ್ಯಾರಂಟಿ ಪದವನ್ನು ಮೋದಿ ಕದ್ದಿದ್ದಾರೆ:

    ಕರ್ನಾಟಕದಲ್ಲಿ ಗ್ಯಾರಂಟಿಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ, ಅವುಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಮೂದಲಿಸಿದ್ದ ಪ್ರಧಾನಿ ಮೋದಿಯವರೇ ಇಂದು ಗ್ಯಾರಂಟಿ ಎಂಬ ಪದವನ್ನು ಕದ್ದಿದ್ದು, ಈಗ ಎಲ್ಲಿ ಭಾಷಣ ಮಾಡಿದರೂ ‘ಮೋದಿ ಗ್ಯಾರಂಟಿ’ ಎನ್ನುತ್ತಾರೆ ಎಂದರು.

    ಪ್ರಧಾನಿ ಮೋದಿ ಜನರ ಮೂಲಭೂತ ಸಮಸ್ಯೆಗಳನ್ನು ನಿವಾರಿಸಿಲ್ಲ:

    ಪ್ರತಿ ಜನರ ಖಾತೆಗೆ 15 ಕೋಟಿ, 2 ಕೋಟಿ ಉದ್ಯೋಗ ಸೃಷ್ಟಿ ಭರವಸೆಗಳನ್ನು ಹುಸಿಗೊಳಿಸಿದ್ದು, ಪೆಟ್ರೋಲ್ ಡೀಸೆಲ್ , ಗ್ಯಾಸ್ ಸೇರಿದಂತೆ ಎಲ್ಲ ಪದಾರ್ಥಗಳ ಬೆಲೆಗಳು ಇಳಿದೇ ಇಲ್ಲ. ತಮ್ಮ ಹತ್ತು ವರ್ಷದ ಅಧಿಕಾರವಾಧಿಯಲ್ಲಿ ಜನರ ಮೂಲಭೂತ ಸಮಸ್ಯೆಗಳನ್ನು ನಿವಾರಿಸಲು ಮೋದಿಯವರಿಗೆ ಸಾಧ್ಯವಾಗದೇ, ಯಾವ ಮುಖವಿಟ್ಟುಕೊಂಡು ಜನರ ಬಳಿ ಓಟು ಕೇಳಲು ಬರುತ್ತೀರಿ ಎಂದು ಸಿಎಂ ಪ್ರಶ್ನಿಸಿದರು.

    ಮುದ್ದೇಹನುಮಗೌಡರು ಪ್ರಾಮಾಣಿಕ ವ್ಯಕ್ತಿ:

    ಬಿಜೆಪಿಯವರ ಮನೆದೇವರೇ ಸುಳ್ಳು. 2019 ರಿಂದ 2023ರವರೆಗೆ ಬಿಜೆಪಿಯ ಸರ್ಕಾರ ಕೇವಲ ಲೂಟಿ ಮಾಡಿದ್ದಾರೆ. ಬಡವರಿಗೆ ಮನೆ ಕಟ್ಟಿಕೊಡಲು ವಿಫಲವಾದ ಬಿಜೆಪಿಯ ವಿ.ಸೋಮಣ್ಣ ಲೋಕಸಭೆಯಲ್ಲಿ ಏನು ಮಾಡುತ್ತಾರೆ. ಮುದ್ದುಹನುಮೇಗೌಡರು ಪ್ರಾಮಾಣಿಕ ವ್ಯಕ್ತಿಯಾಗಿದ್ದು, ಹಿಂದುಳಿದ, ದಲಿತರ, ರೈತರ ಹಾಗೂ ಬಡವರ ಪರ ನಾಯಕರಾಗಿದ್ದಾರೆ. ರಾಜ್ಯದ ಧ್ವನಿಯಾಗಿ ಲೋಕಸಭೆಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸುವ ಮುದ್ದೇಹನುಮಗೌಡರಿಗೆ ಜನರ ಗೆಲ್ಲಿಸಬೇಕೆಂದು ಕೋರಿದರು.

    ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ, ಮಾಜಿ ಶಾಸಕರು, ಷಡಕ್ಷರಿ, ವಾಸು, ರಾಜೇಂದ್ರ, ಮೊದಲಾದವರು ಉಪಸ್ಥಿರಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    ಕೆಂಗೇರಿ: ಉಪನಗರದಲ್ಲಿರುವ ಶೇಷಾದ್ರಿಪುರಂ ಅಕಾಡೆಮಿ ಆಫ್ ಬಿಸಿನೆಸ್ ಸ್ಟಡೀಸ್ ಕಾಲೇಜಿನಲ್ಲಿ ಮಂಗಳವಾರದಂದು “ಸಶಕ್ತ ಭಾರತಕ್ಕಾಗಿ ಸಮಾನ ಅವಕಾಶಗಳು” ಎಂಬ ವಿಷಯದಡಿ…

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026

    ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ

    May 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.