ಪಾವಗಡ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕೊಡುವ ಒಂದೊಂದು ಮತವೂ ಆರ್ಥಿಕ ದಿವಾಳಿತನ, ಭ್ರಷ್ಟಾಚಾರ, ದೇಶದ ಅಭದ್ರತೆಗೆ ಕೊಡುವ ಮತ ಆಗುತ್ತೆ ಎಂದು ಪಾವಗಡ ತಾಲ್ಲೂಕಿನಲ್ಲಿ ಲೋಕಸಭಾ ಚುನಾವಣಾ ಪ್ರಚಾರ ನಡೆಸಿದ ಚಿತ್ರದುರ್ಗ ಲೋಕಸಭಾ ಬಿಜೆಪಿ ಕಾರಜೋಳ ಪರವಾಗಿ ಜನಾರ್ಧನ ಸ್ವಾಮಿ ಜೆಡಿಎಸ್ ಪಕ್ಷದ ಮುಖಂಡರು ಬಿಜೆಪಿ ಪಕ್ಷದ ಮುಖಂಡರು ಸಭೆ ಸೇರಿ ಮತದಾರರಲ್ಲಿ ಮನವಿ ಮಾಡಿದರು.
ಪಾವಗಡ ತಾಲೂಕಿನ ಬಿ ಜೆ ಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಮಾಡದೆ ಹಣ ಖಾಲಿ ಮಾಡಿಕೊಂಡಿದೆ, ನಂತರ ಕೇಂದ್ರ ಸರ್ಕಾರದ ಮುಂದೆ ಭಿಕ್ಷಾ ಪಾತ್ರೆ ಹಿಡಿದುಕೊಂಡು ನಿಂತಿದೆ. ಇವರು ಬಂದಾಗೆಲ್ಲ ಬರಗಾಲ ಬರುತ್ತದೆ. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಅಧಿಕ ಮಳೆಯಾಗಿತ್ತು ಎಂದರು.
ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ರಂಗಣ್ಣ ,ಮಾಜಿ ಅಧ್ಯಕ್ಷ ಜಿ.ಟಿ. ಗಿರೀಶ್, ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ, ಬಲರಾಮರೆಡ್ಡಿ ,ಸೂರ್ಯನಾರಾಯಣ, ಗೋವಿಂದಪ್ಪ, ಆಲ್ಕುಂದರಾಜ್, ರಘು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಹಾಗೂ ಜೆಡಿಎಸ್ ಕಾರ್ಯಕರ್ತರು ಹಾಜರಿದ್ದರು.
ವರದಿ: ರಾಮಪ್ಪ ಸಿ.ಕೆ. ಪುರ, ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA