ಸರಗೂರು: ತಾಲ್ಲೂಕಿನ ಸಾಗರೆ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಅಂಬೇಡ್ಕರ್ ಜಯಂತಿ ಆಚರಣೆ ಹಿನ್ನೆಲೆ ಸಾಗರೆ ಗ್ರಾಮದಲ್ಲಿ ಸಡಗರ ಸಂಭ್ರಮ ನೆಲೆಸಿದ್ದು, ಎಲ್ಲೆಲ್ಲೂ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಅಂಬೇಡ್ಕರ್ ಅವರ ಭಾವ ಚಿತ್ರವನ್ನು ಬೆಳ್ಳಿ ರಥದಲ್ಲಿ ಕೂರಿಸಿ ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು.
ಮನೆ ಮುಂಭಾಗದಲ್ಲಿ ರಂಗೋಲಿ ಹಾಗೂ ಮನೆಯ ಮುಂಭಾಗದಲ್ಲಿ ನೀಲಿ ಬಾವುಟವನ್ನು ಕಟ್ಟಿ, ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.
ಭಾನುವಾರ ಬೆಳಿಗ್ಗೆಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ನಂತರ ಕಬಿನಿ ಬಲದಂಡೆ ನಾಲೆಯಿಂದ ಪೂಜೆ ಸಲ್ಲಿಸಿ, ನಂತರ ವಿವಿಧ ಕಲಾ ತಂಡಗಳಿಂದ ಹಾಗೂ ವಾದ್ಯಗೋಷ್ಠಿ ಮೂಲಕ ಮೆರವಣಿಗೆಯಲ್ಲಿ ಸಾಗಿ ಭವನ ಹತ್ತಿರದಲ್ಲಿರುವ ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಮೆರವಣಿಗೆಯಲ್ಲಿ ಶಾಲೆಯ ಮಕ್ಕಳು ಗ್ರಾಮದ ಯಜಮಾನರು ಹಾಗೂ ಮಹಿಳೆಯರು ಭಾಗಿಯಾಗಿದರು.
ಮೆರವಣಿಗೆ ಮುನ್ನ ಗ್ರಾಮದಲ್ಲಿ ಅನ್ನದಾನ ನಡೆಸಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಯಜಮಾನರು ಹಾಗೂ ಸಂಘದ ಅಧ್ಯಕ್ಷ ಮತ್ತು ಸದಸ್ಯರು ಹಾಗೂ ಅಕ್ಕಪಕ್ಕದ ಗ್ರಾಮಸ್ಥರು ಕೂಡಾ ಭಾಗವಹಿಸಿದ್ದರು.
ವರದಿ: ಹಾದನೂರು, ಚಂದ್ರ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA