nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಬೇಡಿ: ಬೀದಿಬದಿ ವ್ಯಾಪಾರಿಗಳ ಸಂಘ ಮನವಿ

    July 23, 2026

    ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ

    July 23, 2026

    ರಾಹುಲ್ ಗಾಂಧಿಯವರ ಧ್ವನಿ ಅಡಗಿಸುವುದಕ್ಕೆ ಕೇಂದ್ರದ ಪ್ರಯತ್ನ: ಡಾ.ಜಿ.ಪರಮೇಶ್ವರ

    July 23, 2026
    Facebook Twitter Instagram
    ಟ್ರೆಂಡಿಂಗ್
    • ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಬೇಡಿ: ಬೀದಿಬದಿ ವ್ಯಾಪಾರಿಗಳ ಸಂಘ ಮನವಿ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ
    • ರಾಹುಲ್ ಗಾಂಧಿಯವರ ಧ್ವನಿ ಅಡಗಿಸುವುದಕ್ಕೆ ಕೇಂದ್ರದ ಪ್ರಯತ್ನ: ಡಾ.ಜಿ.ಪರಮೇಶ್ವರ
    • ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ
    • ನೀಟ್ ಅಕ್ರಮ ಖಂಡಿಸಿ ಜುಲೈ 25ಕ್ಕೆ ತಿಪಟೂರಿನಲ್ಲಿ ಧರಣಿ ಸತ್ಯಾಗ್ರಹ: ಸಿ.ಬಿ. ಶಶಿಧರ್
    • ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ
    • ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ
    • ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಪಕ್ಷದ ವತಿಯಿಂದ ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ವಿರೋಧಿಸಿ ಸಾಂಕೇತಿಕ ಪ್ರತಿಭಟನೆ
    ರಾಜ್ಯ ಸುದ್ದಿ April 23, 2024

    ಕಾಂಗ್ರೆಸ್ ಪಕ್ಷದ ವತಿಯಿಂದ ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ವಿರೋಧಿಸಿ ಸಾಂಕೇತಿಕ ಪ್ರತಿಭಟನೆ

    By adminApril 23, 2024No Comments4 Mins Read
    bengaluru 4

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕವನ್ನು ಹಾಗು ರೈತರನ್ನು ದ್ವೇಷಿಸುತ್ತಾರೆ. ಕರ್ನಾಟಕಕ್ಕೆ ನ್ಯಾಯ ಕೊಡಿ ಎಂದು ಕೇಳಿದ್ದರೂ, ಇಂದಿನವರೆಗೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಅದಕ್ಕಾಗಿ ಪ್ರತಿಭಟನೆ ಹಮ್ಮಿಕೊಂಡು ರಾಜ್ಯ ಹಾಗೂ ದೇಶದ ಜನರ ಗಮನವನ್ನು ಸೆಳೆಯುವ ಪ್ರಯತ್ನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಅವರು ಇಂದು ವಿಧಾನಸೌಧ ಮುಂಭಾಗ ಇರುವ ಗಾಂಧಿ ಪ್ರತಿಮೆಯ ಎದುರು, ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ಬರ ಪರಿಹಾರದಲ್ಲಿ ತಾರತಮ್ಯ ವನ್ನು ವಿರೋಧಿಸಿ, ಕೇಂದ್ರ ಸರ್ಕಾರದ ವಿರುದ್ಧ ಧರಣಿಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.

    ಸೆಪ್ಟೆಂಬರ್ 22 ರಂದು ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದ್ದು, ಕೇಂದ್ರ ತಂಡ 4 ದಿನಗಳ ಕಾಲ ಪರಿಶೀಲನೆ ಮಾಡಿ ಕೇಂದ್ರಕ್ಕೆ ವರದಿಯನ್ನು ಸಲ್ಲಿಸಿದ್ದಾರೆ. ಈ ಮಧ್ಯೆ ಸಚಿವ ಕೃಷ್ಣಭೈರೇಗೌಡ ಹಾಗೂ ಪ್ರಿಯಾಂಕ ಖರ್ಗೆ ಸಂಬಂಧ ಪಟ್ಟ ಸಚಿವರನ್ನು ಭೇಟಿ ಮಾಡಿ ಕರ್ನಾಟಕ ಎದುರಿಸುತ್ತಿರುವ ಬರಗಾಲದ ಬಗ್ಗೆ ವಿವರಿಸಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲವಿದ್ದು, 240 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಣೆ ಮಾಡಿದ್ದೇವೆ. 100 ವರ್ಷಗಳ ನಂತರ ಇಂಥ ಬರಗಾಲ ಎದುರಾಗಿದೆ. ಮನವಿ ಕೊಟ್ಟಿದ್ದರೂ ಕೂಡ ಅಮಿತ್ ಶಾ ಚನ್ನಪಟ್ಟಣಕ್ಕೆ ಬಂದಿದ್ದ ಸಂದರ್ಭದಲ್ಲಿ ಮನವಿಯನ್ನು ವಿಳಂಬವಾಗಿ ಸಲ್ಲಿಸಿದ್ದಾರೆ ಎಂದು ಹೇಳಿದ್ದರು ಎಂದರು.

    ಗ್ಯಾರಂಟಿಗಳಿಗೆ ಒಂದು ಪೈಸೆಯನ್ನೂ ಕೇಂದ್ರದಿಂದ ಕೇಳಿಲ್ಲ:

    ನಿರ್ಮಲಾ ಸೀತಾರಾಮನ್ ಅವರು ಗ್ಯಾರಂಟಿ ಯೋಜನೆಗಳಿಗೆ ಹಣ ಕೇಳುತ್ತಿದ್ದಾರೆ. ಬರಗಾಲಕ್ಕೆ ಅಲ್ಲ ಎಂದು ಇಬ್ಬರೂ ಸುಳ್ಳು ಹೇಳಿದ್ದಾರೆ. ನಾವು ಗ್ಯಾರಂಟಿಗಳಿಗೆ ಒಂದು ಪೈಸೆಯನ್ನೂ ಕೇಂದ್ರದಿಂದ ಕೇಳಿಲ್ಲ. ನಮಗೆ ಬೇಕಾಗಿಯೂ ಇಲ್ಲ ಎಂದರು.

    ಬರಗಾಲವನ್ನು ಈವರೆಗೆ ಸಮರ್ಥವಾಗಿ ಎದುರಿಸಿದ್ದೇವೆ:

    ಗ್ಯಾರಂಟಿಗಳಿಗೆ ನಮ್ಮ ಸಂಪನ್ಮೂಲದಿಂದಲೇ ಭರಿಸಿದ್ದೇವೆ. 36000 ಕೋಟಿ ರೂಪಾಯಿಗಳನ್ನು ಕಳೆದ ವರ್ಷ ಹಾಗೂ 52009 ಕೋಟಿ ರೂಪಾಯಿಗಳನ್ನು ಮುಂದಿನ ಸಾಲಿಗೆ ಮೀಸಲಿರಿಸಿದ್ದೇವೆ. ಬರಗಾಲಕ್ಕೆ 48000 ಹೆಕ್ಟೇರ್ ಪ್ರದೇಶ ಮಳೆ ಇಲ್ಲದೇ ಬೆಳೆ ನಷ್ಟವಾಗಿದೆ. ರೈತರು ಕಷ್ಟದಲ್ಲಿದ್ದಾರೆ. ನಮ್ಮ ಸರ್ಕಾರ 2000 ರೂ.ಗಳ ವರೆಗೆ 34 ಲಕ್ಷ ರೈತರಿಗೆ ನೀಡಲಾಗಿದೆ. 650 ಕೋಟಿ ರೂ.ಗಳನ್ನು ಇದಕ್ಕಾಗಿ ವೆಚ್ಚ ಮಾಡಲಾಗಿದೆ. ಬರಗಾಲವನ್ನು ಈವರೆಗೆ ಸಮರ್ಥವಾಗಿ ಎದುರಿಸಿದ್ದೇವೆ. ಕುಡಿಯುವ ನೀರು, ಮೇವು, ಜನರಿಗೆ ಕೆಲಸ, ಗುಳೇ ಹೋಗುವುದನ್ನು ತಪ್ಪಿಸುವುದು, ರೈತರಿಗೆ ಮೊದಲ ಕಂತಿನ ಪರಿಹಾರ ನೀಡುವುದನ್ನು ಮಾಡಿದ್ದೇವೆ.

    ನರೇಂದ್ರ ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ:

    18172 ಕೋಟಿ ಗಳನ್ನೂ ಕೇಂದ್ರಕ್ಕೆ ಎನ್.ಡಿ.ಆರ್.ಎಫ್ ನಿಂದ ಬಿಡುಗಡೆ ಮಾಡುವಂತೆ ಕೋರಿ ಒತ್ತಾಯ ಮಾಡಿದ್ದೇವೆ. ಇದನ್ನು ಮಂಡಿಸಿ 7 ತಿಂಗಳಾಗಿವೆ. ನಾನೇ ಸ್ವತಃ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿದ್ದೇನೆ. ಸಂಬಂಧಪಟ್ಟವರಿಗೆ ತಿಳಿಸಿ ಕೂಡಲೇ ಬಿಡುಗಡೆ ಮಾಡುವಂತೆ ಹೇಳುವುದಾಗಿ ಹೇಳಿದ್ದರು. ನಂತರ ನಾನು ಕೃಷ್ಣಭೈರೇಗೌಡ ಡಿಸೆಂಬರ್ 20 ತಂದು ಅಮಿತ್ ಶಾ ಅವರನ್ನು ಭೇಟಿ ಮಾಡಿದಾಗ ಡಿಸೆಂಬರ್ 23ಕೆ ಸಭೆ ಕರೆದು ಇತ್ಯರ್ಥ ಮಾಡುವುದಾಗಿ ಭರವಸೆ ನೀಡಿ ಈವರೆಗೆ ಏನೂ ಮಾಡಿಲ್ಲ. ನರೇಂದ್ರ ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ. ರಾಜ್ಯಕ್ಕೆ ಮೇಲಿನಿಂದ ಮೇಲೆ ಬರಲು ಯಾವುದೇ ನೈತಿಕತೆ ಇಲ್ಲ ಎಂದು ಹೇಳಿ ಪ್ರತಿಭಟಿಸಿ ಅವರ ಗಮನಕ್ಕೆ ತರುವ ಕೆಲಸ ಮಾಡಿದ್ದೇವೆ ಎಂದರು.

    ಗೋ ಬ್ಯಾಕ್ ನರೇಂದ್ರ ಮೋದಿ ಅಮಿತ್ ಶಾ:

    ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ನಲ್ಲಿಯೇ ಹೇಳಿದರು. ಬಜೆಟ್ ಸಂಸತ್ತಿನಲ್ಲಿ ಅನುಮೋದನೆಯಾಗಿದೆ. ಬೊಮ್ಮಾಯಿಯವರೂ ಕೂಡ ತಮ್ಮ ಬಜೆಟ್ ನಲ್ಲಿ ಧನ್ಯವಾದ ಹೇಳಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡುವುದಾಗಿ ಹೇಳಿ ಇಂದಿನವರೆಗೆ ಯಾವುದೂ ಆಗಿಲ್ಲ. ಅದರ ಜೊತೆಗೆ 15 ನೆ ಹಣಕಾಸು ಆಯೋಗ 5495 ಕೋಟಿ ವಿಶೇಷ ಅನುದಾನವನ್ನು ಕೊಡಲಿಲ್ಲ. ಕೊಡದೇ ಈರಲು ಕಾರಣ ನಿರ್ಮಲಾ ಸೀತಾರಾಮನ್ ಹಾಗೂ ನರೇಂದ್ರ ಮೋದಿ ಅವರು. ಪೆರಿ ಫೆರಲ್ ರಿಂಗ್ ರೋಡ್ ಗೆ 3000 ಕೋಟಿ ಹಾಗು ಬೆಂಗಳೂರಿನ ಅಭಿವೃದ್ಧಿಗೆ 3000ಕೋಟಿ ಕೊಡಿ ಎಂದು ಶಿಫಾರಸು ಮಾಡಿದ್ದರೂ ಕೊಡಲಿಲ್ಲ. ಬರಪರಿಹಾರಕ್ಕೂ ಒಂದು ರೂ.ಇಲ್ಲ.  ನರೇಂದ್ರ ಮೋದಿ ಅವರಿಗೆ ಕರ್ನಾಟಕ ನೆನಪಾಗುವುದು ಚುನಾವಣೆ ಸಂದರ್ಭದಲ್ಲಿ ಮಾತ್ರ. ಪ್ರವಾಹ, ಭೀಕರ ಬರಗಾಲದಲ್ಲಿ ಬರಲಿಲ್ಲ. ಕರ್ನಾಟಕದ ಮತದಾರರನ್ನು ಮತ ಕೇಳಲು ಬರುತ್ತಿದ್ದಾರೆ ಅದಕ್ಕಾಗಿ ಗೋ ಬ್ಯಾಕ್ ನರೇಂದ್ರ ಮೋದಿ, ಗೂ ಬ್ಯಾಕ್ ಅಮಿತ್ ಶಾ ಎಂದು ಹೇಳುತ್ತಿದ್ದೇವೆ ಎಂದರು.

    ಅಮಿತ್ ಶಾ ಬರಪರಿಹಾರ ಕೊಟ್ಟು ರಾಜ್ಯಕ್ಕೆ ಬರಲಿ:

    ಇಂದು ಬರುತ್ತಿರುವ ಅಮಿತ್ ಶಾ ಅವರು ಸಭೆ ನಡೆಸಿ 18171 ಕೋಟಿ ಕೊಟ್ಟು ಆಮೇಲೆ ರಾಜ್ಯಕ್ಕೆ ಬರಲಿ. ನಿಮಗೆ ಯಾವುದೇ ಮತ ಕೇಳುವ ಹಕ್ಕು ಇಲ್ಲ ಎಂದು ಅವರಿಗೆ ಹೇಳುತ್ತೇವೆ. ನ್ಯಾಯಯುತ ಬೇಡಿಕೆ ಇಟ್ಟಿದ್ದೇವೆ ಎಂದರು.

    ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಕದ ತಟ್ಟಬೇಕಾದ ಸ್ಥಿತಿ:

    ರಾಜ್ಯ ಸರ್ಕಾರ ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಕದ ತಟ್ಟಬೇಕಾದ ಪರಿಸ್ಥಿತಿ ಬಂತು. ಅಲ್ಲಿ ಅಟಾರ್ನಿ ಜನರಲ್ ಅವರು ನರೇಂದ್ರ ಮೋದಿ ಹಾಗೂ ನಿರ್ಮಲಾ ಸೀತಾರಾಮನ್ ಅವರು ಹೇಳಿದ ಸುಳ್ಳಿನ ಬಗ್ಗೆ ಪ್ರಸ್ತಾಪ ಮಾಡಲಿಲ್ಲ. ತೆರಿಗೆ ಅನ್ಯಾಯದ ಬಗ್ಗೆ ರಾಜ್ಯ ಸರ್ಕಾರ ಸೂಕ್ತವಾದ  ಹಾಗೂ ಸತ್ಯಾಂಶವನ್ನು ಮಂಡಿಸಿದ್ದರಿಂದ ಕರ್ನಾಟಕದ ಮೇಲೆ ಕರುಣೆ ತೋರಿತು. ಸರ್ವೋಚ್ಚ ನ್ಯಾಯಾಲಯ ನಮ್ಮ ಪರವಾಗಿ ಕರುಣೆ ತೋರಿದೆ ಎಂದರು. ಒಂದು ವೇಳೆ ನಾವು ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗದೇ ಹೋಗಿದ್ದರೆ ಒಂದು ರೂ.ಪರಿಹಾರ ನೀಡುತ್ತಿರಲಿಲ್ಲ ಎಂದರು.

    ನ್ಯಾಯವನ್ನು ಕೇಳಲು ಜನತಾ ನ್ಯಾಯಾಲಯದ ಮೊರೆ:

    ರಾಜ್ಯದ ಪರವಾಗಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಭಾರತೀಯ ಚೆಂಬು ಪಕ್ಷದ ಸುಳ್ಳುಗಳನ್ನು ಜನತೆಗೆ ತೋರಿಸುತ್ತೇವೆ ಎಂದರು.  ಈಗಾಗಲೇ ಸರ್ವೋಚ್ಚ ನ್ಯಾಯಾಲಯಕ್ಕೇ ಹೋಗಿದ್ದೇವೆ. ನ್ಯಾಯವನ್ನು ಕೇಳಲು ಜನತಾ ನ್ಯಾಯಾಲಯದ ಮೊರೆ ಹೋಗುತ್ತೇವೆ. ಮೋದಿ ಸರ್ಕಾರವನ್ನು ಕರ್ನಾಟಕದಿಂದ ಮಾತ್ರವಲ್ಲದೆ ಭಾರತದ ಇತರೆಡೆಗಳಿಂದಲೂ ಕಿತ್ತು ಹಾಕಲು ಪ್ರಯತ್ನಿಸುತ್ತೇವೆ ಎಂದು ರಂದೀಪ್ ಸುರ್ಜೀವಾಲ ಹೇಳಿದರು.

    ಅನ್ಯಾಯ ಸಹಿಸಲು ಸಾಧ್ಯವಿಲ್ಲ:

    ರಾಜಕೀಯ ಸಂಘರ್ಷ ಮುಂದುವರೆದರೆ ರಾಜ್ಯಕ್ಕೆ ಬರಬೇಕಾದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುವ ಸಾಧ್ಯತೆ ಇಲ್ಲವೇ.. ತೊಂದರೆಯಾಗುವುದಿಲ್ಲವೇ.. ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಹಾಗಾದರೆ ನ್ಯಾಯ ಕೊಡಲಿ. ಅನ್ಯಾಯ ಸಹಿಸಲು ಸಾಧ್ಯವಿಲ್ಲ ಎಂದರು.

    ಪ್ರತಿಭಟನೆಯಲ್ಲಿ  ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೆವಾಲಾ, ಸಚಿವರಾದ ಕೃಷ್ಣಭೈರೇಗೌಡ, ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ,ಬೈರತಿ ಸುರೇಶ್, ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಬೇಡಿ: ಬೀದಿಬದಿ ವ್ಯಾಪಾರಿಗಳ ಸಂಘ ಮನವಿ

    July 23, 2026

    ತುಮಕೂರು: ನಗರದ ವಿವಿಧ ಪ್ರದೇಶಗಳಲ್ಲಿ ನಗರ ಪಾಲಿಕೆ ಅಧಿಕಾರಿಗಳು ಫುಟ್ ಪಾತ್ ಅಂಗಡಿಗಳ ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ. ಫುಟ್ ಪಾತ್…

    ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ

    July 23, 2026

    ರಾಹುಲ್ ಗಾಂಧಿಯವರ ಧ್ವನಿ ಅಡಗಿಸುವುದಕ್ಕೆ ಕೇಂದ್ರದ ಪ್ರಯತ್ನ: ಡಾ.ಜಿ.ಪರಮೇಶ್ವರ

    July 23, 2026

    ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ

    July 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.