ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಗಳು ಮೀಸೆ, ಗಡ್ಡ ಬಿಟ್ಟಿದ್ದಾರೆ ಎಂಬ ನೆಪ ಹೇಳಿ ಎಲ್ಲರನ್ನೂ ಹೊರಗೆ ಕಳುಹಿಸಿ ಕೆಲಸದಿಂದ ವಜಾಗೊಳಿಸಿದ ಘಟನೆ ಹಿಮಾಚಲ ಪ್ರದೇಶದ ಪರ್ವಾನೂ ಇಂಡಸ್ಟ್ರಿಯಲ್ ಏರಿಯಾದ ಕಂಪನಿಯೊಂದಲ್ಲಿ ನಡೆದಿದೆ. ಕಂಪನಿಗಳಲ್ಲಿ ಉದ್ಯೋಗಿಗಳನ್ನು ವಜಾಗೊಳಿಸುವುದರ ಹಿಂದೆ ಬಲವಾದ ಕಾರಣವಿರುತ್ತದೆ.
ಆದರೆ ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಕಂಪನಿಯೊಂದು ವಿಚಿತ್ರ ಕಾರಣ ನೀಡಿ 80 ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿದೆ. ಹಿಮಾಚಲ ಪ್ರದೇಶದ ಪರ್ವಾನೂ ಇಂಡಸ್ಟ್ರಿಯಲ್ ಏರಿಯಾದ ಕಂಪನಿಯೊಂದು ಕೆಲವು ವರ್ಷಗಳ ಹಿಂದೆ 80 ಕಾರ್ಮಿಕರನ್ನು ವಜಾಗೊಳಿಸಿತ್ತು. ಇದು ಬಹಳ ತಡವಾಗಿ ಬೆಳಕಿಗೆ ಬಂದಿದೆ. ತನ್ನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಗಳು ಮೀಸೆ, ಗಡ್ಡ ಬಿಟ್ಟಿದ್ದಾರೆ ಎಂಬ ನೆಪ ಹೇಳಿ ಎಲ್ಲರನ್ನೂ ಹೊರಗೆ ಕಳುಹಿಸಿದ್ದರು. ಕಾರ್ಮಿಕರು ಆಡಳಿತ ಮಂಡಳಿಯೊಂದಿಗೆ ಮಾತನಾಡಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಇದರಿಂದ ಕಾರ್ಮಿಕರು ಕಂಪನಿ ಎದುರು ಧರಣಿ ನಡೆಸಿದರು. ಈ ಹಿನ್ನೆಲೆಯಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಕಾರ್ಮಿಕರೊಂದಿಗೆ ಮಾತುಕತೆ ನಡೆಸಿತು.
ಗಡ್ಡ, ಮೀಸೆ ತೆಗೆದರೆ ಮಾತ್ರ ಡ್ಯೂಟಿಗೆ ಸೇರಿಸಲಾಗುವುದು, ಕ್ಲೀನ್ ಶೇವ್ ಮಾಡಿಕೊಂಡು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಷರತ್ತು ವಿಧಿಸಿದೆ. ಕಾರ್ಮಿಕರು ಆರಂಭದಲ್ಲಿ ಒಪ್ಪಲಿಲ್ಲ. ಆ ನಂತರ ಗಡ್ಡ ಮೀಸೆ ತೆಗೆದು ಕೆಲಸಕ್ಕೆ ಹಾಜರಾಗಿದ್ದಾರೆ.
ಸೋಲನ್ ಜಿಲ್ಲಾಧಿಕಾರಿ ಮನಮೋಹನ್ ಶರ್ಮಾ ಕಾರ್ಮಿಕರನ್ನು ವಜಾಗೊಳಿಸಿದ ಘಟನೆಯ ಬಗ್ಗೆ ವಿಶೇಷ ಗಮನ ಹರಿಸಿದರು. ಗಡ್ಡ ಮತ್ತು ಮೀಸೆ ಬೆಳೆಸಿದ್ದಕ್ಕಾಗಿ 80 ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಿರುವುದು ಅಮಾನವೀಯ. ಘಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.
ಕಾರ್ಮಿಕರನ್ನು ವಜಾಗೊಳಿಸಿರುವುದು ನಿಜವೆಂದು ಕಂಡುಬಂದಲ್ಲಿ ನಿಯಮಾನುಸಾರ ಕಂಪನಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕಂಪನಿಯು ಕಾರ್ಮಿಕರ ವಿರುದ್ಧ ಏಕೆ ಇಂತಹ ಕ್ರಮ ಕೈಗೊಂಡಿದೆ ಎಂಬುದನ್ನು ತನಿಖೆಯಿಂದ ಬಹಿರಂಗಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA