nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ

    November 4, 2025

    ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

    November 4, 2025

    ಪರಿಶಿಷ್ಟ ಪಂಗಡಗಳನ್ನು ಕಾಂಗ್ರೆಸ್ ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ:  ಬಿ.ವೈ. ವಿಜಯೇಂದ್ರ ಆರೋಪ

    November 4, 2025
    Facebook Twitter Instagram
    ಟ್ರೆಂಡಿಂಗ್
    • ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ
    • ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ
    • ಪರಿಶಿಷ್ಟ ಪಂಗಡಗಳನ್ನು ಕಾಂಗ್ರೆಸ್ ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ:  ಬಿ.ವೈ. ವಿಜಯೇಂದ್ರ ಆರೋಪ
    • ಮಾಜಿ ಸಚಿವ, ಶಾಸಕ ಹೆಚ್.ವೈ.ಮೇಟಿ ನಿಧನ
    • ಹುಲಿ ದಾಳಿಗೆ ಹೆದರಿ ಹೊರಬಾರದ ಜನ: ಅರಣ್ಯ ಇಲಾಖೆಯಿಂದ ಆಹಾರದ ಕಿಟ್ ವಿತರಣೆ
    • ಸರಗೂರು | ಮುಳ್ಳೂರು ಗ್ರಾಮವನ್ನು ಹೋಬಳಿ ಕೇಂದ್ರ ಮಾಡಲು ಪ್ರಯತ್ನಿಸಲಾಗುವುದು: ಶಾಸಕ ಅನಿಲ್ ಕುಮಾರ್
    • ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ
    • ಕೊರಟಗೆರೆ ಬಸ್ ಗಾಗಿ ಪರದಾಟ:   ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಹೆಚ್ಚಾದ ಜನಾಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳಿಂದ ಒಕ್ಕೂಟ ಪ್ರತಿಭಟನೆ
    ರಾಜ್ಯ ಸುದ್ದಿ May 7, 2024

    ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳಿಂದ ಒಕ್ಕೂಟ ಪ್ರತಿಭಟನೆ

    By adminMay 7, 2024No Comments2 Mins Read
    protest

    ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಎಸಗಿರುವ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಶಾಸಕ ಹೆಚ್.ಡಿ. ರೇವಣ್ಣರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟ ನಗರದಲ್ಲಿಂದು ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿತು. ಅಜಾದ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

    ರಾಜಕೀಯ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಶಾಸಕ ಹೆಚ್.ಡಿ. ರೇವಣ್ಣ ಮತ್ತು ಈತನ ಮಗ ಸಂಸದ ಪ್ರಜ್ವಲ್ ರೇವಣ್ಣ ಇವರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಲ್ಲದೆ, ಮಹಿಳೆಯರ ಬೆತ್ತಲೆ ವೀಡಿಯೋ ಚಿತ್ರೀಕರಿಸಿರುವ ಪ್ರಕರಣ ಹಾಗೂ ಮಹಿಳೆಯೋರ್ವರನ್ನು ಅಪಹರಿಸಿ ಬಚ್ಚಿಟ್ಟ ಪ್ರಕರಣ ಇಡೀ ರಾಜ್ಯ ತಲೆ ತಗ್ಗಿಸುವಂತಾಗಿದೆ ಎಂದು ಆರೋಪಿಸಿದ್ದಾರೆ.


    Provided by
    Provided by

    ಹಾಸನ ಜಿಲ್ಲೆಯಲ್ಲಿ ಚುನಾವಣೆ ಪೂರ್ವದಲ್ಲಿ ಸಂಸದ ಪ್ರಜ್ವಲ್ ರೇವಣ್ಣನ ಕಾಮದ ಕರ್ಮಕಾಂಡ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಾಗ, ರಾಜ್ಯ ಗುಪ್ತಚರ ಇಲಾಖೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಸರ್ಕಾರದ ಗಮನಕ್ಕೆ ತರಬೇಕಾದ ಆದ್ಯ ಕರ್ತವ್ಯವಾಗಿತ್ತು. ಆದರೆ ಹಾಸನದ ಮಹಾಪ್ರಭುಗಳ ಮುಲಾಜಿಗೆ ಹೆದರಿ ಅಲ್ಲಿನ ಗುಪ್ತಚರ ಇಲಾಖೆಯು ತುಟಿ ಬಿಚ್ಚದಿರುವುದನ್ನು ಮನವಿಯಲ್ಲಿ ಖಂಡಿಸಿದ್ದಾರೆ.

    ಹಾಸನ ಜಿಲ್ಲೆಯ ಮತ್ತು ಇತರೆಡೆ ಮಹಿಳೆಯರು ಕೆಲಸಕ್ಕಾಗಿ ಮತ್ತು ಯಾವುದೋ ಸಹಾಯಕ್ಕಾಗಿ ಕೇಳಿಕೊಂಡು ಹೋದ ಮಹಿಳೆಯರ ಅಸಹಾಯಕತೆಯನ್ನು ದುರ್ಬಳಕೆ ಮಾಡಿಕೊಂಡು, ಅವರನ್ನು ಲೈಂಗಿಕ ದೌರ್ಜನ್ಯಕ್ಕೆ ಬಳಕೆ ಮಾಡಿಕೊಂಡಿರುವ ಬಗ್ಗೆ ಈಗಾಗಲೇ ಸುಮಾರು ೨೯೦೦ಕ್ಕೂ ಹೆಚ್ಚು ವೀಡಿಯೋಗಳು ಸದ್ದು ಮಾಡುತ್ತಿವೆ. ಇವುಗಳ ಆಧಾರದ ಮೇಲೆ ಕನಿ? ೩೦೦ ಪ್ರಕರಣವನ್ನಾದರೂ ಸರ್ಕಾರ ಸಂತ್ರಸ್ತ ಮಹಿಳೆಯರಿಗೆ ಕಾನೂನಿನ ಸಲಹೆ ನೀಡಿ ಮಾನಸಿಕ ಧೈರ್ಯ ತುಂಬಿ ಜೊತೆಗೆ ರಕ್ಷಣೆ ನೀಡಿ ಪ್ರತ್ಯೇಕವಾಗಿ ಪ್ರಕರಣ ದಾಖಲಿಸಿಕೊಂಡು ಜೈಲಿನಲ್ಲಿ ಕೊಳೆಯುವಂತೆ ಮಾಡಬೇಕು ಎಂದು ಒತ್ತಾಯಿಸಿದೆ.

    ಭೇಟಿ ಬಚಾವೋ, ಭೇಟಿ ಪಡಾವೋ ಎಂದು ಬೊಬ್ಬೆ ಹೊಡೆಯುವ ಪ್ರಧಾನಿ ನರೇಂದ್ರ ಮೋದಿಯವರು ಈಗ ಮೌನವಾಗಿರುವುದು ಏಕೆ? ಮೋದಿಯ ಅಂದ ಭಕ್ತರು ಮತ್ತು ಹಿಂದೂ ಪರ ಸಂಘಟನೆಗಳು ಈ ವಿಚಾರವಾಗಿ ಚಕಾರವೆತ್ತುತ್ತಿಲ್ಲ ಯಾಕೆ? ಇನ್ನಾದರೂ ಹಾಸನ ಜಿಲ್ಲೆಯ ಜನರು ಮತ್ತು ರಾಜ್ಯದ ಜನತೆ ಎಚ್ಚೆತ್ತುಕೊಂಡು ಬೀದಿಗಿಳಿದು ಹೋರಾಡುವ ಮೂಲಕ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸುವುದರ ಜೊತೆಗೆ ಆರೋಪಿತರಿಗೆ ಕಠಿಣ ಶಿಕ್ಷೆ ಕೊಡಿಸಲು ಮುಂದಾಗಬೇಕೆಂದು ಒಕ್ಕೂಟ ಕರೆ ನೀಡಿದೆ.

    ಪ್ರತಿಭಟನೆ ನೇತೃತ್ವವನ್ನು ಕೆಪಿಸಿಸಿ ವಕ್ತಾರ ಹೆಚ್.ಹೆಚ್. ದೇವರಾಜ್ ಹಾಗೂ ವಿವಿಧ ದಲಿತ ಸಂಘಟನೆಗಳ ಮುಖಂಡರುಗಳಾದ ವಸಂತ್‌ ಕುಮಾರ್, ಉಮೇಶ್ ಕುಮಾರ್, ಪೂರ್ಣೇಶ್, ಹುಣಸೆ ಮಕ್ಕಿ ಲಕ್ಷ್ಮಣ, ಮರ್ಲೆ ಅಣ್ಣಯ್ಯ, ಮಂಜು ಕೂದುವಳ್ಳಿ, ಜಗದೀಶ್ ಕೋಟೆ, ಚಂದ್ರು ಅಂಗಡಿ, ಹೊನ್ನೇಶ್, ಶ್ರೀನಿವಾಸ್ ದಂಟರಮಕ್ಕಿ ಮತ್ತಿತರರು ವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ

    November 4, 2025

    ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

    November 4, 2025

    ಪರಿಶಿಷ್ಟ ಪಂಗಡಗಳನ್ನು ಕಾಂಗ್ರೆಸ್ ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ:  ಬಿ.ವೈ. ವಿಜಯೇಂದ್ರ ಆರೋಪ

    November 4, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ

    November 4, 2025

    ಬೆಂಗಳೂರು: ಮಾಜಿ ಸಚಿವರು, ಹಿರಿಯ ನಾಯಕರು ಹಾಗೂ ಹಾಲಿ ಶಾಸಕರೂ ಆಗಿದ್ದ ಹೆಚ್.ವೈ.ಮೇಟಿಯವರು ಇಂದು 12.30 ಗೆ ನಿಧನರಾಗಿದ್ದಾರೆ. ನಾನು…

    ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

    November 4, 2025

    ಪರಿಶಿಷ್ಟ ಪಂಗಡಗಳನ್ನು ಕಾಂಗ್ರೆಸ್ ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ:  ಬಿ.ವೈ. ವಿಜಯೇಂದ್ರ ಆರೋಪ

    November 4, 2025

    ಮಾಜಿ ಸಚಿವ, ಶಾಸಕ ಹೆಚ್.ವೈ.ಮೇಟಿ ನಿಧನ

    November 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.