ರೈತ ಹುಡುಗನನ್ನು ಮದುವೆಯಾಗುವ ಯುವತಿಗೆ ಸರಕಾರದಿಂದ 5 ಲಕ್ಷ ರೂ. ಪ್ರೋತ್ಸಾಹಧನ ನೀಡಬೇಕು ಎಂದು ರೈತ ಸಂಘಟನೆಗಳ ಪ್ರತಿನಿಧಿಗಳು ಸಿಎಂ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
ಬಜೆಟ್ ಸಿದ್ಧತೆ ಸಂಬಂಧ ರೈತ ಸಂಘಟನೆಗಳ ಸುಮಾರು 218 ಪ್ರತಿನಿಧಿಗಳು, ಮುಖಂಡರೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಸಿದರು. ”ಕೃಷಿಕರ ಮಕ್ಕಳಿಗೆ ಹೆಣ್ಣುಸಿಗುತ್ತಿಲ್ಲ. 45 ವರ್ಷವಾದರೂ ಮದುವೆಯಾಗುತ್ತಿಲ್ಲ. ಇದರಿಂದಾಗಿ ಕೃಷಿಗೂ ಆದ್ಯತೆ ಸಿಗುತ್ತಿಲ್ಲ. ಹಾಗಾಗಿ, ರೈತನನ್ನು ವಿವಾಹವಾಗುವ ಹುಡುಗಿಗೆ ಪ್ರೋತ್ಸಾಹ ಧನ ನೀಡಬೇಕು,” ಎಂದು ಬಡಗಲಪುರ ನಾಗೇಂದ್ರ ಈ ವೇಳೆ ಒತ್ತಾಯಿಸಿದರು.
ರೈತರ ಸಾಲ ಮನ್ನಾಕ್ಕೂ ಆಗ್ರಹಿಸಲಾಗಿದೆ. ಕೃಷಿಗೆ ಹೆಚ್ಚಿನ ಉತ್ತೇಜನ ಕೊಡಬೇಕು. ರೈತಪರ ಬಜೆಟ್ ಮಂಡಿಸಬೇಕು ಎಂದು ಕೇಳಿಕೊಳ್ಳಲಾಗಿದೆ ಎಂದು ರೈತ ಪ್ರತಿನಿಧಿಗಳು ತಿಳಿಸಿದರು. ಗ್ಯಾರಂಟಿ ಯೋಜನೆ ಬಗ್ಗೆಯೂ ರೈತ ಮುಖಂಡರು ಮೆಚ್ಚುಗೆ ವ್ಯಕ್ತಪಡಿಸಿದರು. ರೈತಪರ ಸಂಘಟನೆಗಳ ಚುಕ್ಕಿ ನಂಜುಂಡಸ್ವಾಮಿ, ಎಚ್.ಆರ್. ಬಸವರಾಜಪ್ಪ ಪಾಲ್ಗೊಂಡಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


