nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು, ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ: ನಿಖಿಲ್ ಕುಮಾರಸ್ವಾಮಿ ಕರೆ

    February 22, 2026

    ಪ್ರತ್ಯೇಕ ಪ್ರಕರಣ: ರಸ್ತೆ ಅಪಘಾತಕ್ಕೆ ಮಹಿಳೆ ಬಲಿ, ಹಲವರಿಗೆ ಗಾಯ

    February 22, 2026

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು, ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ: ನಿಖಿಲ್ ಕುಮಾರಸ್ವಾಮಿ ಕರೆ
    • ಪ್ರತ್ಯೇಕ ಪ್ರಕರಣ: ರಸ್ತೆ ಅಪಘಾತಕ್ಕೆ ಮಹಿಳೆ ಬಲಿ, ಹಲವರಿಗೆ ಗಾಯ
    • ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ
    • ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಮೇ 16 ರಂದು ಬೃಹತ್ ಪ್ರತಿಭಟನೆ
    ಜಿಲ್ಲಾ ಸುದ್ದಿ May 14, 2024

    ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಮೇ 16 ರಂದು ಬೃಹತ್ ಪ್ರತಿಭಟನೆ

    By adminMay 14, 2024No Comments2 Mins Read
    thuruvekere copy

    ತುರುವೇಕೆರೆ: ತುರುವೇಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಸಿ.ಎಸ್.ಪುರ ಹೋಬಳಿಯ ಡಿ ರಾಂಪುರದಲ್ಲಿ ನಡೆಸುತ್ತಿರುವ ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಯನ್ನು ವಿರೋಧಿಸಿ, ಇದೇ ಮೇ 16 ರಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಹೋರಾಟಕ್ಕೆ ಸಾವಿರಾರು ಸಂಖ್ಯೆಯಲ್ಲಿ ರೈತರು, ನಾಗರೀಕರು, ವಿಚಾರವಂತರು, ಚಿಂತಕರು, ಬುದ್ಧಿಜೀವಿಗಳು ಭಾಗವಹಿಸಬೇಕು ಎಂದು, ತುರುವೇಕೆರೆ ಕ್ಷೇತ್ರದ ಶಾಸಕ ಎಂ.ಟಿ.ಕೃಷ್ಣಪ್ಪ ಮನವಿ ಮಾಡಿದರು.

    ತಮ್ಮ ಗೃಹ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಎಂ.ಟಿ. ಕೃಷ್ಣಪ್ಪ, ಟಿ ಬಿ ಸಿ ನಾಲೆಯಿಂದ ಏಳರಿಂದ ಎಂಟು ಅಡಿ ಆಳದಲ್ಲಿ ಕೊಳವೆಗಳ ಮುಖಾಂತರ ರಾಮನಗರಕ್ಕೆ ನೀರನ್ನು ಕೊಂಡೊಯ್ಯುತ್ತಿದ್ದು, ಸಹಜವಾಗಿ ಎಲ್ಲಾ ನೀರು ಗ್ರಾವಿಟಿಯ ಮೂಲಕ ಹರಿದರೆ ಮುಖ್ಯವಾಗಿ ತುರುವೇಕೆರೆ ತಾಲೂಕಿನ ಕಸಬಾ, ದಂಡಿನ ಶಿವರ, ಸಂಪಿಗೆ, ಗುಬ್ಬಿ ತಾಲೂಕಿನ ಸಿಎಸ್ ಪುರ ಹೋಬಳಿಯ ಭಾಗದ ಜನರಿಗೆ ಒಂದು ಹನಿ ನೀರು ಕೂಡ ಸಿಗುವುದಿಲ್ಲ. ಇದರಿಂದ ತಾಲೂಕಿನ ಯಾವ ಕೆರೆ ಕಟ್ಟೆಗಳಾಗಲಿ ತುರುವೇಕೆರೆ ಪಟ್ಟಣದ ವಾಸಿಗಳಿಗೆ ಕುಡಿಯುವ ನೀರನ್ನು ಪೂರೈಸುವ ಮಲ್ಲಾಘಟ್ಟ ಕೆರೆಗೂ ಸಹ ಹೇಮಾವತಿಯಿಂದ ನೀರು ಹರಿಯುವುದಿಲ್ಲ ಎಂದರು.


    Provided by
    Provided by

    ರಾಜ್ಯ ಸರ್ಕಾರ ಜಿಲ್ಲೆಯ ಜನರಿಗೆ ತೊಂದರೆಯನ್ನು ಕೊಡಲು ಈ ಯೋಜನೆಯನ್ನು ಕೈಗೆತ್ತಿಕೊಂಡಿದ್ದು, ಈ ಕಾಮಗಾರಿಗೆ ಯಾವುದೇ ಕಾರಣಕ್ಕೂ ನಾನು ಅವಕಾಶ ಕೊಡುವುದಿಲ್ಲ. 24.50 ಟಿಎಂಸಿ ನೀರಿನಲ್ಲಿ 19.40 ಕಳೆದರೆ ಉಳಿದಿರುವ 11.50 ಟಿಎಂಸಿ ನೀರು ರಾಮನಗರ ಕಡೆಗೆ ಹೋದರೆ ಬಾಕಿ 8.4 ಟಿಎಂಸಿ ನೀರು ಉಳಿಯುತ್ತದೆ. ಇದನ್ನು ಜಿಲ್ಲೆಯ ಇಡೀ ಎಲ್ಲಾ ತಾಲೂಕುಗಳಿಗೆ ಹಂಚಿಕೆ ಮಾಡಲು ಸಾಧ್ಯವಾಗುವುದಿಲ್ಲ. ಗುಬ್ಬಿ ತಾಲೂಕಿನ ಡಿ ರಾಂಪುರ 70ನೇ ಕಿಲೋಮೀಟರ್ ನಿಂದ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕೆರೆಗಳಿಗೆ 843.71 ಎಂ ಸಿ ಎಫ್ ಟಿ ನೀರು ಆದೇಶ ಹೊರಡಿಸಿ. ಅದನ್ನು 35.40 ಕಿಲೋಮೀಟರ್ ಉದ್ದದ 10 ಅಡಿ ವ್ಯಾಸದ ಪೈಪ್ ಅಳವಡಿಕೆ ಮಾಡಿಕೊಂಡು ತೆಗೆದುಕೊಂಡು ಹೋಗಲಿದ್ದಾರೆ. ಹಾಗೇನಾದರೂ ಆದರೆ ಅಭಾವ ಕೆಟ್ಟ ದಟ್ಟ ದರಿದ್ರ ರಾಜ್ಯ ಸರ್ಕಾರ ರೈತರ ಮೇಲೆ ದಬ್ಬಾಳಿಕೆಯನ್ನು ನಡೆಸಿ ಜಿಲ್ಲೆಯ ಜನರಿಗೆ ಅನ್ಯಾಯ ವ್ಯಸಗುತ್ತಿರುವುದನ್ನು ಖಂಡಿಸಿ, ದಿನಾಂಕ 16/05/ 2024 ರಂದು ಬೆಳಗ್ಗೆ 11 ಗಂಟೆಗೆ ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ತಡೆಗೆ ಬೃಹತ್ ಹೋರಾಟವನ್ನು ಗುಬ್ಬಿ ತಾಲೂಕಿನ ಡಿ ರಾಂಪುರ ಬಳಿ ಮಾಡಲಾಗುತ್ತಿದ್ದು, ಈ ಬಗ್ಗೆ ಕ್ಷೇತ್ರದ ಜನತೆಗೆ ಈಗಾಗಲೇ ಕರಪತ್ರಗಳ ಚಳುವಳಿಯನ್ನು ಮಾಡಿದ್ದು, ಕಾಮಗಾರಿಗೆ ನಾವುಗಳು ವಿರೋಧ ಮಾಡುತ್ತಿದ್ದರು. ಸರ್ಕಾರವು ಜಿಲ್ಲೆಯ ನಾಯಕರುಗಳನ್ನಾಗಲಿ, ರೈತರನ್ನಾಗಲಿ ಸಭೆ ಕರೆಯುವಂತಹ ಸೌಜನ್ಯವಂತೂ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಜಿಲ್ಲೆಯ ಸಮಸ್ತ ನಾಗರಿಕರು, ರೈತರು, ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳು ವಿವಿಧ ಪಕ್ಷಗಳ ನಾಯಕರುಗಳು ಸ್ವಸಹಾಯ ಗುಂಪುಗಳು ಪಕ್ಷಾತೀತವಾಗಿ ನಮ್ಮ ನೀರು ನಮ್ಮ ಹಕ್ಕು ಎಂಬ ಹೋರಾಟಕ್ಕೆ ಬೆಂಬಲ ನೀಡಲಿದ್ದಾರೆ ಎಂದು ಅವರು ತಿಳಿಸಿದರು.

    ಈ ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ದೊಡ್ಡ ಗೌಡ, ಜೆಡಿಎಸ್ ತಾಲೂಕು ವಕ್ತಾರ ವೆಂಕಟಾಪುರ ಯೋಗೀಶ್, ಮುಖಂಡರುಗಳಾದ ಬಿಎಸ್ ದೇವರಾಜು, ಸೊಪ್ಪನಹಳ್ಳಿ ರಂಗನಾಥ್, ಮುಂಗಿ ಕುಪ್ಪೆ ಬಸವರಾಜು, ಹರಿಕಾರನಹಳ್ಳಿ ಮಂಜಪ್ಪ, ಹೊನ್ನೇನಳ್ಳಿ ಕೃಷ್ಣಪ್ಪ ಸೇರಿದಂತೆ ಇತರರು ಇದ್ದರು.

    ವರದಿ: ಸುರೇಶ ಬಾಬು ಎಂ. ತುರುವೇಕೆರೆ.


     

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು, ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ: ನಿಖಿಲ್ ಕುಮಾರಸ್ವಾಮಿ ಕರೆ

    February 22, 2026

    ತುಮಕೂರು: ಮುಂದೆ ರಾಜ್ಯದಲ್ಲಿ ಜನತಾದಳ ಸರ್ಕಾರ ಅಧಿಕಾರಕ್ಕೆ ಬರಬೇಕು. ಅದಕ್ಕೆ ಈಗಿನಿಂದಲೇ ತಳಮಟ್ಟದಿಂದ ಪಕ್ಷ ಸಂಘಟಿಸಬೇಕು. ಜಿಲ್ಲೆಯಲ್ಲಿ ಈ ಹಿಂದೆ…

    ಪ್ರತ್ಯೇಕ ಪ್ರಕರಣ: ರಸ್ತೆ ಅಪಘಾತಕ್ಕೆ ಮಹಿಳೆ ಬಲಿ, ಹಲವರಿಗೆ ಗಾಯ

    February 22, 2026

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.