nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹುಬ್ಬಳ್ಳಿ: ಅಂತರ್ಜಾತಿ ವಿವಾಹವಾಗಿದ್ದ ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆ!

    December 22, 2025

    ಬಂಜಾರ ಭವನ ಉದ್ಘಾಟನೆ:  ಏಪ್ರಿಲ್ ನಲ್ಲಿ ಸಾಮೂಹಿಕ ವಿವಾಹ:  ಜಿಲ್ಲಾಧ್ಯಕ್ಷ ನಾರಾಯಣ ನಾಯ್ಕ ಡಿ.

    December 22, 2025

    ಬಿಗ್ ಬಾಸ್ ಕನ್ನಡ: ರಜತ್ ಮತ್ತು ಚೈತ್ರಾ ಕುಂದಾಪುರ ಎಲಿಮಿನೇಷನ್‌ ಗೆ ಅಸಲಿ ಕಾರಣ ಬಯಲು!

    December 22, 2025
    Facebook Twitter Instagram
    ಟ್ರೆಂಡಿಂಗ್
    • ಹುಬ್ಬಳ್ಳಿ: ಅಂತರ್ಜಾತಿ ವಿವಾಹವಾಗಿದ್ದ ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆ!
    • ಬಂಜಾರ ಭವನ ಉದ್ಘಾಟನೆ:  ಏಪ್ರಿಲ್ ನಲ್ಲಿ ಸಾಮೂಹಿಕ ವಿವಾಹ:  ಜಿಲ್ಲಾಧ್ಯಕ್ಷ ನಾರಾಯಣ ನಾಯ್ಕ ಡಿ.
    • ಬಿಗ್ ಬಾಸ್ ಕನ್ನಡ: ರಜತ್ ಮತ್ತು ಚೈತ್ರಾ ಕುಂದಾಪುರ ಎಲಿಮಿನೇಷನ್‌ ಗೆ ಅಸಲಿ ಕಾರಣ ಬಯಲು!
    • ಒದ್ದೆ ಕೂದಲಿನಲ್ಲಿ ಮಲಗುವ ಅಭ್ಯಾಸ ನಿಮಗಿದೆಯೇ? ಎಚ್ಚರ, ಎದುರಾಗಬಹುದು ಈ ಗಂಭೀರ ಸಮಸ್ಯೆಗಳು!
    • ಚಿಕ್ಕಬಳ್ಳಾಪುರ: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ; ನವವಿವಾಹಿತೆ ದುರ್ಮರಣ, ಪತಿಗೆ ಗಂಭೀರ ಗಾಯ
    • ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ
    • ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ವಾರ 24ನೇ ಕಂತಿನ ಹಣ ಬಿಡುಗಡೆ!
    • ಕೊರಟಗೆರೆ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕ ಕಲ್ಯಾಣಕ್ಕಾಗಿ ಶ್ರೀನಿವಾಸ ಕಲ್ಯಾಣೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇಗುಲದ ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ, ಟಿವಿ ನಿರೂಪಕಿ ಮೇಲೆ ಅತ್ಯಾಚಾರ ಮಾಡಿದ ಅರ್ಚಕ
    ರಾಜ್ಯ ಸುದ್ದಿ May 18, 2024

    ದೇಗುಲದ ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ, ಟಿವಿ ನಿರೂಪಕಿ ಮೇಲೆ ಅತ್ಯಾಚಾರ ಮಾಡಿದ ಅರ್ಚಕ

    By adminMay 18, 2024No Comments2 Mins Read
    rape

    ದೇವಸ್ಥಾನದ ಅರ್ಚಕ ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ ನಡೆಸಿದ್ದಾಗಿ ಜನಪ್ರಿಯ ಟಿವಿ ನಿರೂಪಕಿಯೊಬ್ಬರು ಆರೋಪಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಚೆನ್ನೈಯ ಪ್ರಮುಖ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಬಲ್‌ ದೇಗುಲದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ ವಿರುದ್ಧ ಇದೀಗ ನಿರೂಪಕಿ ವಿರುಗಂಬಾಕ್ಕಂ ಮಹಿಳಾ ಠಾಣೆಗೆ ದೂರು ದಾಖಲಿಸಿದ್ದಾರೆ. ಸಾಲಿಗ್ರಾಮ ಮೂಲದ, ಖಾಸಗಿ ವಾಹಿನಿ ನಿರೂಪಕಿ ಕಾರ್ತಿಕ್‌ ಮುನಿಸ್ವಾಮಿ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 30 ವರ್ಷದ ನಿರೂಪಕಿ ಆಧ್ಯಾತ್ಮಿಕತೆ ಕಡೆಗೆ ಒಲವು ಹೊಂದಿರುವ ವ್ಯಕ್ತಿಯಾಗಿದ್ದು, ಆಗಾಗ ದೇವಸ್ಥಾನಗಳಿಗೆ ಭೇಟಿ ನೀಡುತ್ತಿರುತ್ತಾರೆ. ಅದರಂತೆ ಚೆನ್ನೈಯ ಪರ್ಯಾಸ್‌ ನಲ್ಲಿರುವ ಈ ದೇವಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ಈ ವೇಳೆ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ ಜತೆಗೆ ಪರಿಚಯವಾಗಿತ್ತು. ಕ್ರಮೇಣ ಇಬ್ಬರೂ ಸ್ನೇಹಿತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರ ನಡುವೆ ಗೆಳೆತನ ಗಟ್ಟಿಯಾಗುತ್ತಿದ್ದಂತೆ ಕಾರ್ತಿಕ್‌ ಮುನಿಸ್ವಾಮಿ ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮ, ವಿಶೇಷ ಪೂಜೆಗಳ ಬಗ್ಗೆ ನಿರೂಪಕಿಗೆ ಮಾಹಿತಿ ನೀಡುತ್ತಿದ್ದ. ವಾಟ್ಸಾಪ್‌ ಮೂಲಕ ಸಂದೇಶ ಕಳುಹಿಸುತ್ತಿದ್ದ. ಸಂತ್ರಸ್ತೆ ದೇವಸ್ಥಾನಕ್ಕೆ ಭೇಟಿ ನೀಡಿದಾಗಲೆಲ್ಲ ವಿಶೇಷ ದರ್ಶನದ ವ್ಯವಸ್ಥೆ ಮಾಡಿಸುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹೀಗೆ ಇವರಿಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು.


    Provided by
    Provided by

    ಒಂದು ದಿನ ಸಂತ್ರಸ್ತೆ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಕಾರ್ತಿಕ್‌ ಮುನಿಸ್ವಾಮಿ ಆಕೆಯನ್ನು ತನ್ನ ಬೆನ್ಝ್‌ ಕಾರಿನಲ್ಲಿ ಕರೆದುಕೊಂಡು ಮನೆಗೆ ಡ್ರಾಪ್‌ ಮಾಡಿದ್ದ. ಈ ವೇಳೆ ಆತ ತೀರ್ಥದಲ್ಲಿ ನಿದ್ದೆ ಬರುವ ಮಾತ್ರ ಬೆರೆಸಿ ನೀಡಿದ್ದ. ಬಳಿಕ ಅತ್ಯಾಚಾರ ಎಸಗಿದ್ದ. ನಂತರ ನಿರೂಪಕಿಗೆ ತನ್ನ ಮೇಲೆ ದೌರ್ಜನ್ಯ ನಡೆದಿರುವ ಬಗ್ಗೆ ತಿಳಿದು ಬಂದಿತ್ತು. ಅಲ್ಲದೆ ಆಕೆ ಗರ್ಭಿಣಿಯೂ ಆಗಿದ್ದರು. ಇದನ್ನು ತಿಳಿದ ಕಾರ್ತಿಕ್‌ ಆಕೆಯನ್ನು ಮದುವೆಯಾಗುವುದಾಗಿಯೂ ಭರವಸೆ ನೀಡಿದ್ದ. ನಂತರ ವಡಾಪಳನಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಗರ್ಭಪಾತ ಮಾಡಿಸಿದ್ದ. ಬಳಿಕ ಅನೇಕ ಬಾರಿ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸಿದ್ದ ಎಂದು ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಬಿಗ್ ಬಾಸ್ ಕನ್ನಡ: ರಜತ್ ಮತ್ತು ಚೈತ್ರಾ ಕುಂದಾಪುರ ಎಲಿಮಿನೇಷನ್‌ ಗೆ ಅಸಲಿ ಕಾರಣ ಬಯಲು!

    December 22, 2025

    ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

    December 21, 2025

    ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ವಾರ 24ನೇ ಕಂತಿನ ಹಣ ಬಿಡುಗಡೆ!

    December 21, 2025

    Comments are closed.

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹುಬ್ಬಳ್ಳಿ: ಅಂತರ್ಜಾತಿ ವಿವಾಹವಾಗಿದ್ದ ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆ!

    December 22, 2025

    ಹುಬ್ಬಳ್ಳಿ: ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಭೀಕರ ಮರ್ಯಾದಾ ಹತ್ಯೆ ನಡೆದಿದೆ. ದಲಿತ ಸಮುದಾಯದ ಯುವಕ ವಿವೇಕಾನಂದ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದ…

    ಬಂಜಾರ ಭವನ ಉದ್ಘಾಟನೆ:  ಏಪ್ರಿಲ್ ನಲ್ಲಿ ಸಾಮೂಹಿಕ ವಿವಾಹ:  ಜಿಲ್ಲಾಧ್ಯಕ್ಷ ನಾರಾಯಣ ನಾಯ್ಕ ಡಿ.

    December 22, 2025

    ಬಿಗ್ ಬಾಸ್ ಕನ್ನಡ: ರಜತ್ ಮತ್ತು ಚೈತ್ರಾ ಕುಂದಾಪುರ ಎಲಿಮಿನೇಷನ್‌ ಗೆ ಅಸಲಿ ಕಾರಣ ಬಯಲು!

    December 22, 2025

    ಒದ್ದೆ ಕೂದಲಿನಲ್ಲಿ ಮಲಗುವ ಅಭ್ಯಾಸ ನಿಮಗಿದೆಯೇ? ಎಚ್ಚರ, ಎದುರಾಗಬಹುದು ಈ ಗಂಭೀರ ಸಮಸ್ಯೆಗಳು!

    December 22, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.