nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ
    • ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ವಾಭಿಮಾನಿ ಸಂಸದರಾದ ವಿ. ಶ್ರೀನಿವಾಸ ಪ್ರಸಾದ್ ರವರ ನುಡಿ ನಮನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪುಷ್ಪಾರ್ಚನೆ ಸಲ್ಲಿಸಿದ ಗಣ್ಯರು
    ಜಿಲ್ಲಾ ಸುದ್ದಿ May 19, 2024

    ಸ್ವಾಭಿಮಾನಿ ಸಂಸದರಾದ ವಿ. ಶ್ರೀನಿವಾಸ ಪ್ರಸಾದ್ ರವರ ನುಡಿ ನಮನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪುಷ್ಪಾರ್ಚನೆ ಸಲ್ಲಿಸಿದ ಗಣ್ಯರು

    By adminMay 19, 2024No Comments2 Mins Read
    saragooru

    ಸರಗೂರು: ರಾಜ್ಯದ ಹಿರಿಯ ರಾಜಕಾರಣಿ ವಿ. ಶ್ರೀನಿವಾಸ್ ಪ್ರಸಾದ್ ರವರು, ಬದುಕಿನ ಹೆಚ್ಚುಕಾಲ ರಾಜಕೀಯದಲ್ಲಿಯೇ ಕಳೆದರು. ಅವರು ನಡೆಸಿದ ಹೋರಾಟಗಳು ದಲಿತರಿಗೆ ಹಾಗೂ ಶೋಷಿತ ಸಮುದಾಯಗಳಿಗೆ ಆಶಾಕಿರಣವಾಗಿತ್ತು. ಶ್ರೀನಿವಾಸ್ ಪ್ರಸಾದ್ ಅವರು ನೇರನುಡಿಗೆ ಹೆಸರಾದವರು ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.

    ತಾಲ್ಲೂಕಿನ ಪಟ್ಟಣ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭವನದಲ್ಲಿ ಭಾನುವಾರದಂದು ಕೋಟೆ ಮತ್ತು ಸರಗೂರು ಆದಿಕರ್ನಾಟಕ ಮಹಾಸಭಾ ವತಿಯಿಂದ ಹಮ್ಮಿಕೊಂಡಿದ್ದ, ಸ್ವಾಭಿಮಾನಿ ಸಂಸದರಾದ ವಿ. ಶ್ರೀನಿವಾಸಪ್ರಸಾದ್ ರವರ ನುಡಿ ನಮನ ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ ನೀಡಿ ಪುಷ್ಪಾರ್ಚನೆ ಸಲ್ಲಿಸಿ ನಂತರ ಮಾತನಾಡಿದರು.


    Provided by
    Provided by

    ಸ್ವಾಭಿಮಾನಿ ಚಕ್ರವರ್ತಿ ವಿ. ಶ್ರೀನಿವಾಸಪ್ರಸಾದ್ ರವರ ಸ್ಥಾನ ತುಂಬಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆಯಬಹುದು ಎಂದರು.

    ಬದುಕಿನ ಕೊನೆಯ ಪಯಣವೇ ಸಾವು. ಹಾಗಾಗಿ ಸಾವಿಗೂ ಅವರು ಮಾಡಿದ ಎಲ್ಲಾ ಸಮುದಾಯ ಕಾರ್ಯಕ್ರಮಗಳು ನಿಲುವು ಬದ್ಧತೆ ಅವರನ್ನು ಉನ್ನತ ಸ್ಥಾನಕ್ಕೆ ಏರುವಂತೆ ಮಾಡಿದೆ ಎಂದು ಹೇಳಿದರು.

    ನಗರ ಪಾಲಿಕೆ ಮಾಜಿ ಮಹಾಪೌರರು ಪುರುಷೋತ್ತಮ್ ಮಾತನಾಡಿ, 50 ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿದ್ದೇನೆ. 1987 ರಿಂದ ಅನೇಕ ಜನಪರ ಹಾಗೂ ದಲಿತರ ಮತ್ತು ಎಲ್ಲಾ ಸಮುದಾಯದ ಜೊತೆ ಕೆಲಸ ಮಾಡಿಕೊಂಡು ಬಂದರು. ಸಾಕಷ್ಟು ಹೋರಾಟ ಮಾಡಿಕೊಂಡು ಬಂದಿದ್ದರೂ ಪ್ರಸಾದ್ ರವರು ಗಳಿಸಿದ ಹೆಸರನ್ನು ನಾವುಗಳು ಗಳಿಸಲು ಸಾಧ್ಯವಿಲ್ಲ ಎಂದರು.

    ರಾಜ್ಯಾದ್ಯಂತ ಶೋಷಿತ ಸಮುದಾಯವನ್ನು ಒಂದುಗೂಡಿಸುವ ಕೆಲಸ ಮಾಡಿದರು. ಅವರ ನಾಯಕತ್ವಕ್ಕೆ ಮೇಲ್ಪಂಕ್ತಿ ಹಾಕಿಕೊಟ್ಟರು. ಅವರ ಶಕ್ತಿ ಪ್ರಬಲವಾದ ಅಂಬೇಡ್ಕರ್ ವಾದವೇ ಆಗಿತ್ತು. ಅವರ ಧ್ವನಿಯಾಗಲು ಎತ್ತರಕ್ಕೆ ಬೆಳೆಯಲು ಇಲ್ಲಿನ ಜನರೇ ಕಾರಣ ಎಂದು ಸ್ಮರಿಸಿದರು. ಪ್ರಸಾದ್ ಒಬ್ಬ ಜನಪರ ಹಾಗೂ ಸಮುದಾಯ ನಾಯಕರಾಗಿದ್ದರು. ಕೊನೆಯ ದಿನಗಳಲ್ಲಿ ಒಪ್ಪಂದ ಸಿದ್ಧಾಂತದ ಜತೆಗೆ ರಾಜಕೀಯ ಮಾಡಬೇಕಾದ ಅನಿವಾರ್ಯತೆ ಅವರಿಗೆ ಒದಗಿ ಬಂತು. ನಾನು ಪಕ್ಷಾಂತರಿಯಾಗಿದ್ದೇನೆ. ಆದರೆ ತತ್ವಾಂತರಿಯಲ್ಲ ಎಂದಿದ್ದರು. ಅವರೊಬ್ಬ ಸಮಾಜವಾದಿ ಸ್ವಾಭಿಮಾನಿ ಪ್ರಜಾಪ್ರಭುತ್ವವಾದಿಯಾಗಿ ಬದುಕಿದವರು ಎಂದು ಅಭಿಪ್ರಾಯಪಟ್ಟರು.

    ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಗೌತಮಿ ಬಂತೇಜಿ, ಉರಿಲಿಂಗಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ, ಮಾಜಿ ಸಚಿವ ಕೋಟೆ ಎಂ. ಶಿವಣ್ಣ, ನಿವೃತ್ತ ಪ್ರಾಧ್ಯಾಪಕ ತಳವಾರ್ ಮಾತನಾಡಿದರು

    ಆದಿಕರ್ನಾಟಕ ಮಹಾಸಭಾ ಕೋಟೆ ಮತ್ತು ಸರಗೂರು ತಾಲ್ಲೂಕಿನ ಅಧ್ಯಕ್ಷರು ಪುರಸಭೆ ಸದಸ್ಯ ಮತ್ತು ಎಚ್.ಸಿ. ನರಸಿಂಹಮೂರ್ತಿ ಸರಗೂರು ಶಿವಣ್ಣ, ಶ್ರೀನಿವಾಸಪ್ರಸಾದ್ ತಮ್ಮನ ಮಗ ಭರತ್, ಆದಿಕರ್ನಾಟಕ ಮಹಾಸಭಾ ಮಾಜಿ ಅಧ್ಯಕ್ಷರು ಮುದ್ದುಮಲ್ಲಯ್ಯ, ಮಲಾರ ಪುಟ್ಟಯ್ಯ, ಸೋಗಳಿ ಶಿವಣ್ಣ, ಜಿಪಂ ಮಾಜಿ ಸದಸ್ಯರು ಪಿ. ರವಿ, ಚಿಕ್ಕವೀರನಾಯಕ, ಭಾಗ್ಯಲಕ್ಷ್ಮಿ, ವೆಂಕಟಸ್ವಾಮಿ, ಮೈ ಮುಲ್ ನಿರ್ದೇಶಕ ಈರೇಗೌಡ, ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ಮಾಜಿ ಅಧ್ಯಕ್ಷ ಎಂ ಡಿ ಮಂಜಯ್ಯ, ನಾಯಕ ಸಮಾಜ ಅಧ್ಯಕ್ಷ ದೊಡ್ಡನಾಯಕ, ಶಂಭುಲಿಂಗನಾಯಕ, ಹಿರಿಯ ಮುಖಂಡರು ಚಾ ನಂಜುಂಡ ಮೂರ್ತಿ, ಬಸಪ್ಪ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಕೆಂಡಗಣ್ಣಸ್ವಾಮಿ, ವರ್ತಕರ ಸಂಘದ ಮಂಡಳಿ ಅಧ್ಯಕ್ಷ ಶ್ರೀನಿವಾಸ, ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ಹೂವಿನಕೊಳ ಸಿದ್ಧರಾಜು, ಯೂತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು, ಸರಗೂರು ಹೋರಾಟ ಸಮಿತಿ ಸಂಚಾಲಕ ಸರಗೂರು ಕೃಷ್ಣ, ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಗೋಪಾಲಸ್ವಾಮಿ, ದಸಂಸ ಸಂಘಟನೆ ಸಂಚಾಲಕರು ಸಣ್ಣಕುಮಾರ್, ಇಟ್ನ ರಾಜಣ್ಣ, ಕೂಡಗಿ ಗೊವಿಂದರಾಜು, ಗ್ರಾಮೀಣ ಮಹೇಶ್, ಚನ್ನಿಪುರ ಮಲ್ಲೇಶ್, ಬೆಟ್ಟಸ್ವಾಮಿ, ನಾಗರಾಜು, ಹಾದನೂರು ಪುಟ್ಟಸ್ವಾಮಿ, ರಾಜೇಶ್, ಹೈರಿಗೆ ಶಿವರಾಜು, ಜಿಪಂ ತಾಲ್ಲೂಕು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು, ಸದಸ್ಯರು ಮತ್ತು ವಿವಿಧ ಗ್ರಾಮಗಳಿಂದ ಗ್ರಾಮಸ್ಥರು ಹಾಗೂ ಮುಖಂಡರು ಮತ್ತು ಯಜಮಾನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026

    ತುಮಕೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಆಗಸ್ಟ್ 1, 2024ರ ಸರ್ವೋಚ್ಚ ನ್ಯಾಯಾಲಯದ ಐತಿಹಾಸಿಕ ತೀರ್ಪಿನ ಆಧಾರದ…

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.