ತುಮಕೂರು: ಬರೋಬ್ಬರಿ 19 ವಷಗಳಿಂದ ತಲೆಮರೆಸಿಕೊಂಡಿದ್ದ ಪಾವಗಡ ತಾಲೂಕಿನ ವೆಂಕಟಮ್ಮನಹಳ್ಳಿ ನಕ್ಸಲ್ ದಾಳಿಯ ರೂವಾರಿ, ನಕ್ಸಲ್ ಕೊತ್ತಗೆರೆ ಶಂಕರನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
2005ರ ಫೆಬ್ರವರಿ 10ರಂದು ರಾತ್ರಿ 10.30ರ ವೇಳೆಯಲ್ಲಿ ಪಾವಗಡ ತಾಲೂಕಿನ ವೆಂಕಟಮ್ಮನಹಳ್ಳಿಯ ಪೊಲೀಸ್ ಕ್ಯಾಂಪ್ ಮೇಲೆ ಸುಮಾರು 300 ಜನ ಮಾವೋಯಿಸ್ಟ್ ನಕ್ಸಲೀಯರು ಬಂದೂಕುಗಳು, ಬಾಂಬ್ , ಹ್ಯಾಂಡ್ ಗ್ರೇನೇಡ್ ಗಳೊಂದಿಗೆ ದಾಳಿ ನಡೆಸಿದ್ದರು. ಕತವ್ಯದಲ್ಲಿದ್ದ 7 ಮಂದಿ ಪೊಲೀಸರನ್ನು ಕೊಲೆ ಮಾಡಿ, 5ಮಂದಿ ಪೊಲೀಸ್ ಸಿಬ್ಬಂದಿಗೆ ಗಾಯಗಳನ್ನು ಮಾಡಿದ್ದರು. ಕ್ಯಾಂಪಿನ ಹೊರಗೆ ನಿಂತಿದ್ದ ಖಾಸಗಿ ಬಸ್ ನ ಕ್ಲೀನರ್ ನನ್ನು ಸಹ ಕೊಲೆ ಮಾಡಿ, ಕ್ಯಾಂಪ್ ನಲ್ಲಿದ್ದ ಬಂದೂಕುಗಳು ಮತ್ತು ಗುಂಡುಗಳನ್ನು ದೋಚಿಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ತಿರುಮಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೆ ಈ ಪ್ರಕರಣದಲ್ಲಿ 32 ಮಂದಿ ತಲೆ ಮರೆಸಿಕೊಂಡಿದ್ದು ಇವರ ಮೇಲೆ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


