nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಣಪತಿ ಮಹೋತ್ಸವ, ಕಲ್ಪೋತ್ಸವ: ಸ್ವಚ್ಛತಾ ಸೈನಿಕರಾದ ಪೌರ ಕಾರ್ಮಿಕರ ಕಾರ್ಯಕ್ಕೆ ಮೆಚ್ಚುಗೆ

    November 26, 2025

    ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ

    November 25, 2025

    ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ

    November 25, 2025
    Facebook Twitter Instagram
    ಟ್ರೆಂಡಿಂಗ್
    • ಗಣಪತಿ ಮಹೋತ್ಸವ, ಕಲ್ಪೋತ್ಸವ: ಸ್ವಚ್ಛತಾ ಸೈನಿಕರಾದ ಪೌರ ಕಾರ್ಮಿಕರ ಕಾರ್ಯಕ್ಕೆ ಮೆಚ್ಚುಗೆ
    • ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ
    • ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ
    • ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ
    • ಸ್ಕೌಟ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಶಾ ಪ್ರಸನ್ನ ಕುಮಾರ್ ಆಯ್ಕೆ
    • ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ
    • ಸಹಾಯಧನ ಸೌಲಭ್ಯಕ್ಕಾಗಿ ಮೀನುಗಾರರಿಂದ ಅರ್ಜಿ ಆಹ್ವಾನ
    • ಕೊಳೆಗೇರಿಗಳು ನವನಗರ ಆಗಬೇಕು: ಪ್ರಾಧ್ಯಾಪಕ ಪ್ರೊ.ಪ್ರಕಾಶ್ ಎಂ. ಶೇಟ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾ ವಿಕಾಸ ಯೋಜನೆಯಡಿ ಕಳಪೆಯಿಂದ ಕೂಡಿದ ಸಮವಸ್ತ್ರ ಪೂರೈಕೆ
    ರಾಜ್ಯ ಸುದ್ದಿ May 25, 2024

    ವಿದ್ಯಾ ವಿಕಾಸ ಯೋಜನೆಯಡಿ ಕಳಪೆಯಿಂದ ಕೂಡಿದ ಸಮವಸ್ತ್ರ ಪೂರೈಕೆ

    By adminMay 25, 2024No Comments3 Mins Read
    students

    ವಿದ್ಯಾ ವಿಕಾಸ ಯೋಜನೆಯಡಿಯಲ್ಲಿ 2024-25ನೇ ಸಾಲಿಗೆ ಶಾಲಾ ಮಕ್ಕಳಿಗೆ ಪೂರೈಕೆಯಾಗಿರುವ ಸಮವಸ್ತ್ರ ಬಟ್ಟೆಗಳೇ ಕಳಪೆಯಿಂದ ಕೂಡಿವೆ. ಕಲಬುರಗಿ ವಿಭಾಗ ಸೇರಿದಂತೆ ರಾಜ್ಯದ ಇನ್ನಿತರ ವಿಭಾಗಗಳ ಜಿಲ್ಲೆಗಳಿಗೆ ಸರಬರಾಜು ಮಾಡಿರುವ ಸಮವಸ್ತ್ರ ಬಟ್ಟೆಗಳ ಮಾದರಿಗಳನ್ನು ಪರಿಶೀಲಿಸಿರುವ ಕೇಂದ್ರೀಯ ರೇಷ್ಮೆ ಮಂಡಳಿಯು ಈಗಾಗಲೇ ಹಲವು ಜಿಲ್ಲೆಗಳಿಗೆ ಪೂರೈಕೆಯಾಗಿರುವ ಸಮವಸ್ತ್ರ ಬಟ್ಟೆಗಳನ್ನು ತಿರಸ್ಕರಿಸಿದೆ.

    ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ರಿತೀಶ್ ಕುಮಾರ್ ಸಿಂಗ್ ಅವರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸರಕಾರದ ಕಾರ್ಯದರ್ಶಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಅವರಿಗೆ ಪತ್ರ (ಅ.ಸ.ಪ. ಸಂ; ಇಪಿ 170 ಯೋಸಕ 2024) ಬರೆದಿದ್ದಾರೆ. ಈ ಪತ್ರದ ಪ್ರತಿಯು the-file. in’ಗೆ ಲಭ್ಯವಾಗಿದೆ.


    Provided by
    Provided by

    ಸಮವಸ್ತ್ರ ಹೊಲಿಗೆ ವೆಚ್ಚವನ್ನೂ ಪೋಷಕರಿಂದಲೇ ಭರಿಸಿಕೊಂಡಿರುವ ಸರಕಾರವು ಇದೀಗ ಪೂರೈಕೆ ಮಾಡಿರುವ ಸಮವಸ್ತ್ರವು ಕಳಪೆಯಿಂದ ಕೂಡಿದೆ ಎಂದು ಕೇಂದ್ರೀಯ ರೇಷ್ಮೆ ಮಂಡಳಿಯು ನೀಡಿರುವ ವರದಿಯು ಮುನ್ನೆಲೆಗೆ ಬಂದಿದೆ. ಈ ವರದಿಯ ಕುರಿತು ಸಚಿವ ಮಧು ಬಂಗಾರಪ್ಪ ಅವರೂ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ ಎಂದು ಗೊತ್ತಾಗಿದೆ.

    ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಸರಬರಾಜು ಮಾಡುವ ಸಂಬಂಧ 2023ರ ಡಿಸೆಂಬರ್ 8 ಮತ್ತು 2024ರ ಮಾರ್ಚ್ 15ರಂದು ಆದೇಶ ಹೊರಡಿಸಿದ್ದರು. ಅಲ್ಲದೇ ಸಮವಸ್ತ್ರ ಸರಬರಾಜಿಗೂ ಮುನ್ನ ಅಂದರೆ 2024ರ ಮಾರ್ಚ್ 30ರಂದೇ ಸಮವಸ್ತ್ರಗಳ ಸ್ಯಾಂಪಲ್ ‌ಗಳನ್ನು ಪರಿಶೀಲನೆಗೆ ಸಲ್ಲಿಸಲಾಗಿತ್ತು. ಈ ಸ್ಯಾಂಪಲ್‌ ಗಳನ್ನು ಪರಿಶೀಲಿಸಿದ್ದ ಕೇಂದ್ರೀಯ ರೇಷ್ಮೆ ಮಂಡಳಿಯು 2024ರ ಮೇ 8ರಂದು ವರದಿಯನ್ನು ಸರಕಾರಕ್ಕೆ ಸಲ್ಲಿಸಿದೆ ಎಂಬುದು ಪತ್ರದಿಂದ ತಿಳಿದು ಬಂದಿದೆ.

    ಸಮವಸ್ತ್ರಗಳ ಗುಣಮಟ್ಟ ಪರೀಕ್ಷೆ ಸಂಬಂಧ ಕರಾರು ಒಪ್ಪಂದದ ಕ್ರಮ ಸಂಖ್ಯೆ 4ರ ಪ್ರಕಾರ ಸರಬರಾಜಿಗೂ ಮುನ್ನ ತಯಾರಾಗಿರುವ ಸಮವಸ್ತ್ರ ಬಟ್ಟೆಗಳಲ್ಲಿ ಪ್ರತಿ 25000 ಮೀಟರ್ ಗೆ ಒಂದು ಸ್ಯಾಂಪಲ್‌ ನಂತೆ 2024ರ ಮಾರ್ಚ್ 300 m 46, 14 ಹಾಗೂ ಸ್ಕರ್ಟಿಂಗ್ 20 ಸ್ಯಾಂಪಲ್‌ ಗಳನ್ನು ಪಡೆದಿತ್ತು. ಅಲ್ಲದೇ ಈ ಸ್ಯಾಂಪಲ್‌ ಗಳ ಗುಣಮಟ್ಟ ಪರಿಶೀಲಿಸಲು 2024ರ ಎಪ್ರಿಲ್ 2ರಂದು ಕೇಂದ್ರ ರೇಷ್ಮೆ ಮಂಡಳಿಗೆ ಸಲ್ಲಿಸಿತ್ತು ಎಂಬುದು ಗೊತ್ತಾಗಿದೆ. ‘ಷರ್ಟಿಂಗ್ ಬಟ್ಟೆಯ ಎಲ್ಲಾ 46 ಸ್ಯಾಂಪಲ್ ಗಳು ಕಾಂಪೋಸಿಷನ್‌ ನಲ್ಲಿ ತಿರಸ್ಕೃತವಾಗಿರುತ್ತವೆ ಹಾಗೂ ಇಲಾಖೆಯು ನಿಗದಿಪಡಿಸಿದ್ದ ಮಾನದಂಡಗಳಿಗಿಂತಲೂ ಜಿಎಸ್‌ಎಂ ಕಡಿಮೆ ಇರುತ್ತದೆ. ಸ್ಕರ್ಟಿಂಗ್‌ ನ 20 ಸ್ಯಾಂಪಲ್‌ ಗಳಲ್ಲಿ 12 ಸ್ಯಾಂಪಲ್ ‌ಗಳ ಕಾಂಪೋಸಿಷನ್, ಇಲಾಖೆ ನಿಗದಿಪಡಿಸಿರುವ ಮಾನದಂಡಗಳ ಪ್ರಕಾರ ಇರುವುದಿಲ್ಲ ಎಂದು ಕೇಂದ್ರ ರೇಷ್ಮೆ ಮಂಡಳಿಯು ತನ್ನ ವರದಿಯಲ್ಲಿ ವಿವರಿಸಿರುವುದು ತಿಳಿದು ಬಂದಿದೆ.

    ಸದ್ಯ ಸರಬರಾಜಾಗಿರುವ ಸಮವಸ್ತ್ರಗಳು ಆಯಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಗೋದಾಮಿನಲ್ಲಿವೆ. ಈ ಸಮವಸ್ತ್ರಗಳ ಎಲ್ಲಾ ಷರ್ಟಿಂಗ್ ಬಟ್ಟೆಗಳನ್ನು 30 ದಿನದೊಳಗೆ ಮರು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಆಯುಕ್ತ ರಿತೇಶ್ ಕುಮಾರ್ ಸಿಂಗ್ ಅವರು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರಕಾರದ ಕಾರ್ಯದರ್ಶಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ ಅವರಿಗೆ ಬರೆದ ಪತ್ರದಲ್ಲಿ ಕೋರಿದ್ದಾರೆ.

    ಕಳೆದ ಶೈಕ್ಷಣಿಕ ಸಾಲಿನಲ್ಲಿ ಸರಕಾರವು ಶಾಲಾ ವಿದ್ಯಾರ್ಥಿಗಳ ಎರಡನೇ ಜೊತೆ ಸಮವಸ್ತ್ರ ಬಟ್ಟೆಯನ್ನಷ್ಟೇ ನೀಡಿ ಕೈತೊಳೆದುಕೊಂಡಿತ್ತು. 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ಸಮವಸ್ತ್ರದ ಹೊಲಿಗೆ ವೆಚ್ಚವನ್ನು ಪೋಷಕರೇ ಭರಿಸಬೇಕು ಎಂದು ಇಲಾಖೆಯು ಹೊರಡಿಸಿದ್ದ ಸುತ್ತೋಲೆಯು ಹೈಕೋರ್ಟ್ ಆದೇಶವನ್ನು ನೇರಾ ನೇರ ಉಲ್ಲಂಘಿಸಿದಂತಾಗಿತ್ತು.

    ಸಮವಸ್ತ್ರದ ಬಟ್ಟೆಯನ್ನು ಮಾತ್ರ ಸರಕಾರದಿಂದ ಉಚಿತವಾಗಿ ನೀಡುತ್ತಿದ್ದು ಹೊಲಿಗೆ ವೆಚ್ಚವನ್ನು ಫಲಾನುಭವಿ ಮಕ್ಕಳ ಪೋಷಕರೇ ಭರಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಶಿಕ್ಷಣ ಇಲಾಖೆಯು ಹೊರಡಿಸಿರುವ ಈ ಸುತ್ತೋಲೆಯನ್ನು ಸುಚಿವ ಮಧು ಬಂಗಾರಪ್ಪ ಅವರು ಅನುಮೋದಿಸಿದ್ದರು.

    ಬಟ್ಟೆಯ ಬೆಲೆಗಿಂತ ಹೊಲಿಗೆ ವೆಚ್ಚ ಹೆಚ್ಚಾಗಿದೆ ಒಂದು ಸೆಟ್ ಶರ್ಟ್ ಮತ್ತು ಪ್ಯಾಂಟ್‌ಗೆ ಹೊಲಿಗೆ ವೆಚ್ಚ ಕನಿಷ್ಠ 350 ರೂ.ನಿಂದ 800 ರೂ. ವರೆಗೆ ಖರ್ಚು ಮಾಡಿದ್ದರು. ಮಾಸ್ಟರ್ ಮಂಜುನಾಥ್ ಪ್ರಕರಣದಲ್ಲಿ ಎರಡನೇ ಸೆಟ್ ಗೆ ಹೊಲಿಗೆ ಹಾಕಿದ ಸಮವಸ್ತ್ರವನ್ನು ಸರಕಾರ ನೀಡುವಂತೆ ರಾಜ್ಯ ಉಚ್ಚ ನ್ಯಾಯಾಲಯವು ಆದೇಶಿಸಿತ್ತು. ಆದರೀಗ ಹೊಲಿಗೆ ಹಾಕದ ಸಮವಸ್ತ್ರವನ್ನು ವಿದ್ಯಾರ್ಥಿಗಳಿಗೆ ವಿತರಿಸುವ ಮೂಲಕ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿತ್ತು.

    ರಾಜ್ಯದ ಹಲವು ಶಾಲೆಗಳು ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರಗಳನ್ನು ಪೂರ್ಣ ಪ್ರಮಾಣದಲ್ಲಿ ವಿತರಿಸಿರಲಿಲ್ಲ. ಸ್ವೀಕರಿಸಿದ್ದ ಉಚಿತ ಸಮವಸ್ತ್ರಗಳನ್ನು ದೀರ್ಘಕಾಲದವರೆಗೂ ಗೋದಾಮಿನಲ್ಲಿಡಲಾಗುತ್ತಿದೆಯೇ ವಿನಃ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡುತ್ತಿಲ್ಲ ಎಂಬುದು ಶಿಕ್ಷಣ ಇಲಾಖೆಯ ಮೇಲಧಿಕಾರಿಗಳ ತಪಾಸಣೆಯು ಬಹಿರಂಗಗೊಳಿಸಿತ್ತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ

    November 25, 2025

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    November 22, 2025

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಗಣಪತಿ ಮಹೋತ್ಸವ, ಕಲ್ಪೋತ್ಸವ: ಸ್ವಚ್ಛತಾ ಸೈನಿಕರಾದ ಪೌರ ಕಾರ್ಮಿಕರ ಕಾರ್ಯಕ್ಕೆ ಮೆಚ್ಚುಗೆ

    November 26, 2025

    ತಿಪಟೂರು: ನಗರದಲ್ಲಿ ನಡೆದ 96ನೇ ವರ್ಷದ ಸತ್ಯ ಗಣಪತಿ ಮಹೋತ್ಸವ ಹಾಗೂ ಕಲ್ಪೋತ್ಸವ ಕಾರ್ಯಕ್ರವಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾಗಿದ್ದರು. ಕಳೆದ…

    ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ

    November 25, 2025

    ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ

    November 25, 2025

    ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ

    November 25, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.