nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಣಪತಿ ಮಹೋತ್ಸವ, ಕಲ್ಪೋತ್ಸವ: ಸ್ವಚ್ಛತಾ ಸೈನಿಕರಾದ ಪೌರ ಕಾರ್ಮಿಕರ ಕಾರ್ಯಕ್ಕೆ ಮೆಚ್ಚುಗೆ

    November 26, 2025

    ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ

    November 25, 2025

    ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ

    November 25, 2025
    Facebook Twitter Instagram
    ಟ್ರೆಂಡಿಂಗ್
    • ಗಣಪತಿ ಮಹೋತ್ಸವ, ಕಲ್ಪೋತ್ಸವ: ಸ್ವಚ್ಛತಾ ಸೈನಿಕರಾದ ಪೌರ ಕಾರ್ಮಿಕರ ಕಾರ್ಯಕ್ಕೆ ಮೆಚ್ಚುಗೆ
    • ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ
    • ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ
    • ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ
    • ಸ್ಕೌಟ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಶಾ ಪ್ರಸನ್ನ ಕುಮಾರ್ ಆಯ್ಕೆ
    • ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ
    • ಸಹಾಯಧನ ಸೌಲಭ್ಯಕ್ಕಾಗಿ ಮೀನುಗಾರರಿಂದ ಅರ್ಜಿ ಆಹ್ವಾನ
    • ಕೊಳೆಗೇರಿಗಳು ನವನಗರ ಆಗಬೇಕು: ಪ್ರಾಧ್ಯಾಪಕ ಪ್ರೊ.ಪ್ರಕಾಶ್ ಎಂ. ಶೇಟ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನನ್ನ ಅಭಿಪ್ರಾಯವನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಕಿಲ್ಲ: ಗೃಹ ಸಚಿವ ಪರಮೇಶ್ವರ
    ರಾಜ್ಯ ಸುದ್ದಿ May 29, 2024

    ನನ್ನ ಅಭಿಪ್ರಾಯವನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಕಿಲ್ಲ: ಗೃಹ ಸಚಿವ ಪರಮೇಶ್ವರ

    By adminMay 29, 2024No Comments2 Mins Read
    g parameshwar

    ಬೆಂಗಳೂರು:  ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ಬಂಧನಕ್ಕೆ ಪಕ್ಷ ಎಂಬುದು ಬರುವುದಿಲ್ಲ.‌ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡು ಬಂದರೆ ಅಂತವರನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

    ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಜನತಾದಳ, ಬಿಜೆಪಿ ಎಂಬುದಕ್ಕಿಂತ ಹೆಚ್ಚಾಗಿ, ಈ ಪ್ರಕರಣದಲ್ಲಿ ಯಾರು ಭಾಗಿಯಾಗಿರುವುದು ಕಂಡು ಬರುತ್ತದೆಯೋ ಅಂತವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತದೆ. ಈಗಾಗಲೇ‌ ಪ್ರಕರಣದಲ್ಲಿ 11-12 ಜನರನ್ನು ಬಂಧಿಸಲಾಗಿದೆ ಎಂದರು.


    Provided by
    Provided by

    ಪ್ರಜ್ವಲ್ ರೇವಣ್ಣ ವಾಪಸ್ ಆಗುತ್ತಿರುವ ವಿಚಾರದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಪ್ರಜ್ವಲ್ ವಿರುದ್ಧ ವಾರಂಟ್ ಜಾರಿಯಾಗಿರುವುದರಿಂದ ಬಂಧಿಸಬೇಕಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಎಸ್ಐಟಿಯವರು ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ತಿಳಿಸಿದರು.

    ಎಮ್‌ಎಲ್‌ಸಿ ಅಭ್ಯರ್ಥಿಗಳ ಆಯ್ಕೆ ವಿಚಾರದ ಕುರಿತು ಮಾತನಾಡಿ, ನನ್ನ ಹೇಳಿಕೆಯನ್ನು ಯಾರು ತಪ್ಪಾಗಿ ಅರ್ಥೈಸಿಕೊಳ್ಳಬೇಕಾದ ಅಗತ್ಯ ಇಲ್ಲ. ಪ್ರಮುಖರೊಂದಿಗೆ ಸಮಾಲೋಚನೆ ಅಭ್ಯರ್ಥಿಗಳ ಆಯ್ಕೆ ಮಾಡಬೇಕಾದುದು ಪ್ರಕ್ರಿಯೆ. ಯಾರು ಸಹ ಇದನ್ನು ತಪ್ಪು ಅಂತ ಹೇಳಲಾಗುವುದಿಲ್ಲ. ನಾನು ಸಹ ಕೆಪಿಸಿಸಿ‌ ಅಧ್ಯಕ್ಷನಾಗಿ‌ ಕೆಲಸ ಮಾಡಿದ ಅನುಭವದಿಂದ ಆ‌ ಮಾತನ್ನು ಹೇಳಿದ್ದೇನೆ. ನಾವು ಹೇಳಿದವರಿಗೆ ಅವಕಾಶ ನೀಡಬೇಕು ಅಂತ ಹೇಳಲು ಬರುವುದಿಲ್ಲ ಎಂದು ಅಭಿಪ್ರಾಯಪಟ್ಟರು.

    ಯಾರು ಪಕ್ಷಕ್ಕಾಗಿ ದುಡಿದಿದ್ದಾರೋ, ಯಾವ ಸಮುದಾಯ ಪಕ್ಷದ ಜೊತೆ ನಿಂತಿದೆಯೋ ಅಂತವರಿಗೆ ಅವಕಾಶ‌ ಕಲ್ಪಿಸಬೇಕು. ಪಕ್ಷಕ್ಕಾಗಿ‌ ಕೆಲಸ‌ ಮಾಡಿದ ಅನೇಕರಿಗೆ ಅನುಭವ ಇರುತ್ತದೆ. ಅಂತವರೊಂದಿಗೆ ಸಮಾಲೋಚಿಸಿ ಅಭಿಪ್ರಾಯ ಪಡೆಯಬೇಕು ಎಂಬುದನ್ನು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು‌.

    ನನ್ನ ಅಭಿಪ್ರಾಯವನ್ನು ನಾನು ಹೇಳಿಬಿಟ್ಟಿದ್ದೇನೆ.‌ ಏಳು ಸ್ಥಾನಗಳು ನಮ್ಮ ಪಕ್ಷಕ್ಕೆ ಬರುತ್ತವೆ. 300 ಅರ್ಜಿ ಬಂದಿವೆ ಎಂಬುದನ್ನು ಪತ್ರಿಕೆಗಳಲ್ಲಿ ಗಮನಿಸಿದ್ದೇನೆ. ಆಯ್ಕೆ ಮಾಡುವುದು ಕಷ್ಟದ ಕೆಲಸ. ಹೈಪವರ್ ಕಮಿಟಿ ರಚಿಸಿ, ಸಮಿತಿ ಜೊತೆ ಚರ್ಚಿಸಿದರೆ ಸಲಹೆಗಳು ಬರುತ್ತವೆ. ಹೈಪವರ್ ಕಮಿಟಿ ರಚಿಸುವ ಸಮಯ ಮೀರಿದೆ ಎಂದು ಹೇಳಿದರು.

    ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಮುಖ್ಯಮಂತ್ರಿಯವರನ್ನು ಭೇಟಿ‌ ಮಾಡಿಲ್ಲ. ಇಲಾಖೆಗೆ ಸಂಬಂಧಿಸಿದಂತೆ ಸಾಕಷ್ಟು ಕೆಲಸಗಳಿವೆ. ಯಾವುದಾದರು ತೀರ್ಮಾನ ತೆಗೆದುಕೊಳ್ಳುವಾಗ ಮುಖ್ಯಮಂತ್ರಿಯವರ ಗಮನಕ್ಕೆ ತರಬೇಕಾಗುತ್ತದೆ. ಅವರ ಸಲಹೆ ಪಡೆದು ತೀರ್ಮಾನ ಕೈಗೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.‌

    ಬೆಳ್ಳೂರು ಕ್ರಾಸ್ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ವಹಿಸಿದ ನಿಗದಿತವಾದ ಜವಾಬ್ದಾರಿಯನ್ನು ಅಧಿಕಾರಿಗಳು ಮಾಡದೇ ಇದ್ದಾಗ, ಅದರಿಂದ ಬೇರೆಬೇರೆ ರೀತಿಯ ತೊಂದರೆಗಳಾದ ಅಮಾನತುಗೊಳಿಸಲಾಗುತ್ತದೆ. ಇಲಾಖಾ ವಿಚಾರಣೆ ನಡೆಯುತ್ತದೆ. ದೊಡ್ಡ ಪ್ರಕರಣಗಳಲ್ಲಿ ಸಿಐಡಿಯವರು ತನಿಖೆ ಮಾಡುತ್ತಾರೆ. ತನಿಖೆಯ ವರದಿಯಲ್ಲಿ ತಪ್ಪು ಕಂಡು ಬಂದಿಲ್ಲ ಎಂದಾದರೆ ಅಮಾನತು ಆದೇಶ ಪಡೆಯಲಾಗುತ್ತದೆ. ಇದು ಇಲಾಖೆಯಲ್ಲಿ ನಡೆಯುವ ಪ್ರಕ್ರಿಯೆ ಎಂದರು.

    ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ‌ ಪ್ರಕರಣದ ಕುರಿತು ಮಾತನಾಡಿ, ಸಿಐಡಿಯವರು ಪ್ರಕರಣವನ್ನು ತೆಗದುಕೊಂಡು ತನಿಖೆ ನಡೆಸುತ್ತಿದೆ. ಬೇರೆಬೇರೆ ಐಟಿ ಕಂಪನಿಗಳಿಗೆ ವರ್ಗಾವಣೆಯಾಗಿರುವ ಆರೋಪ ತನಿಖೆಯಿಂದ ಹೊರಬರುತ್ತದೆ ಎಂದರು

    ಒಂದೊಂದು ಘಟನೆಯಾದಗೂ ವಿಪಕ್ಷದವರು ರಾಜೀನಾಮೆ‌ ಕೇಳುತ್ತಾರೆ. ಹಣ ವರ್ಗಾವಣೆಗೆ ಮೌಖಿಕವಾಗಿ ಆದೇಶ ಕೊಟ್ಟಿದ್ದಾರೆ ಎಂಬ ಆರೋಪ ತನಿಖೆಯಲ್ಲಿ ಸಾಬೀತಾದರೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಈಶ್ವರಪ್ಪ ಅವರ ವಿರುದ್ಧದ ಪ್ರಕರಣದಲ್ಲಿ ಅವರ ಹೆಸರನ್ನು ನೇರವಾಗಿ ಆರೋಪಿಸಲಾಗಿತ್ತು. ಈ ಪ್ರಕರಣದಲ್ಲಿ ಸಚಿವರ ಹೆಸರನ್ನು ಎಲ್ಲಿಯೂ ನೇರವಾಗಿ ಹೇಳಿಲ್ಲ. ತನಿಖೆ ಆಗುವವರೆಗೂ ಕಾಯಬೇಕು ಎಂದು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ

    November 25, 2025

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    November 22, 2025

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಗಣಪತಿ ಮಹೋತ್ಸವ, ಕಲ್ಪೋತ್ಸವ: ಸ್ವಚ್ಛತಾ ಸೈನಿಕರಾದ ಪೌರ ಕಾರ್ಮಿಕರ ಕಾರ್ಯಕ್ಕೆ ಮೆಚ್ಚುಗೆ

    November 26, 2025

    ತಿಪಟೂರು: ನಗರದಲ್ಲಿ ನಡೆದ 96ನೇ ವರ್ಷದ ಸತ್ಯ ಗಣಪತಿ ಮಹೋತ್ಸವ ಹಾಗೂ ಕಲ್ಪೋತ್ಸವ ಕಾರ್ಯಕ್ರವಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾಗಿದ್ದರು. ಕಳೆದ…

    ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ

    November 25, 2025

    ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ

    November 25, 2025

    ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ

    November 25, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.