nammatumakuru

    Subscribe to Updates

    Get the latest creative news from FooBar about art, design and business.

    What's Hot

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ

    July 25, 2026

    ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ

    July 25, 2026
    Facebook Twitter Instagram
    ಟ್ರೆಂಡಿಂಗ್
    • NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
    • ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
    • ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ
    • ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!
    • ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ
    • ಧರ್ಮಸ್ಥಳ ಸಂಸ್ಥೆಯ ಸೇವೆ ಅನುಕರಣೀಯ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ
    • ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಳ್ಳಾರಿ: ಲೋಕಸಭೆ ಸಾರ್ವತ್ರಿಕ ಚುನಾವಣಾ ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಜ್ಜು: ಡಿಸಿ ಮಿಶ್ರಾ
    ಜಿಲ್ಲಾ ಸುದ್ದಿ May 31, 2024

    ಬಳ್ಳಾರಿ: ಲೋಕಸಭೆ ಸಾರ್ವತ್ರಿಕ ಚುನಾವಣಾ ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಜ್ಜು: ಡಿಸಿ ಮಿಶ್ರಾ

    By adminMay 31, 2024No Comments2 Mins Read
    ballary

    ಬಳ್ಳಾರಿ: ಲೋಕಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ಬಳ್ಳಾರಿ (ವಿಜಯನಗರ ಜಿಲ್ಲೆ ಒಳಗೊಂಡಂತೆ) ಜಿಲ್ಲೆಯ ಲೋಕಸಭೆ ಕ್ಷೇತ್ರ ವ್ಯಾಪ್ತಿಯ 08 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಜೂನ್ 04 ರಂದು ನಗರದ ರಾವ್ ಬಹದ್ದೂರ್ ವೈ.ಮಹಾಬಲೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆಯಲಿದೆ. ಇದಕ್ಕೆ ಜಿಲ್ಲಾಡಳಿತವು ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.

    ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಕುರಿತಂತೆ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

    ಜೂ.04 ರಂದು ಬೆಳಿಗ್ಗೆ 08 ಗಂಟೆಯಿಂದ ಮತಗಳ ಎಣಿಕೆ ಕಾರ್ಯ ಪ್ರಾರಂಭವಾಗಲಿದೆ.  ಮತ ಎಣಿಕೆ ಕೇಂದ್ರದ ಕಟ್ಟಡದಲ್ಲಿ 20 ಇವಿಎಂ ಸ್ಟ್ರಾಂಗ್ ರೂಂ ಮತ್ತು 02 ಅಂಚೆ ಮತಗಳ ಸ್ಟ್ರಾಂಗ್ ರೂಂಗಳಿದ್ದು, ಮತ ಎಣಿಕೆ ಕಾರ್ಯ ಒಟ್ಟು 08 ಹಾಲ್‍ ಗಳಲ್ಲಿ ನಡೆಯಲಿದೆ ಎಂದು ತಿಳಿಸಿದರು.

    ಮತ ಎಣಿಕೆ ಕಾರ್ಯವನ್ನು ಸುಗಮವಾಗಿ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 14 ಟೇಬಲ್‍ಗಳನ್ನು ಸಜ್ಜುಗೊಳಿಸಲಾಗಿದೆ. ಪ್ರತಿ ಟೇಬಲ್‍ ಗೆ ಒಬ್ಬರು ಎಣಿಕಾ ಮೇಲ್ವಿಚಾರಕರು, ಒಬ್ಬರು ಎಣಿಕಾ ಸಹಾಯಕರು, ಒಬ್ಬರು ಮೈಕ್ರೋ ಅಬ್ಸರ್ವರ್ಸ್‍ಗಳನ್ನು ನಿಯೋಜಿಸಲಾಗಿದೆ.  ಬಳ್ಳಾರಿ ಜಿಲ್ಲೆಗೆ ಒಟ್ಟು 112 ಟೇಬಲ್‍ ಗಳಂತೆ, 150 ಎಣಿಕಾ ಮೇಲ್ವಿಚಾರಕರು, 159 ಎಣಿಕಾ ಸಹಾಯಕರು ಮತ್ತು 146 ಎಣಿಕಾ ಮೈಕ್ರೋ ಅಬ್ಸರ್ವರ್ಸ್‍ಗಳನ್ನು ನೇಮಕ ಮಾಡಲಾಗಿದೆ.  ಮತ ಎಣಿಕೆ ಅಧಿಕಾರಿಗಳು, ಸಹಾಯಕರಿಗೆ ಈಗಾಗಲೇ ಒಂದು ಹಂತದ ತರಬೇತಿ ನೀಡಲಾಗಿದ್ದು, ಎರಡನೆ ಹಂತದ ತರಬೇತಿಯನ್ನೂ ನೀಡಲಾಗುವುದು.  121 ಜನರಿಗೆ ಈಗಾಗಲೆ ಕೌಂಟಿಂಗ್ ಏಜೆಂಟ್ ಆಗಿ ವೀಕ್ಷಣೆಗೆ ಪಾಸ್ ನೀಡಲಾಗಿದೆ ಎಂದರು.

    88 ಹಡಗಲಿ ಕ್ಷೇತ್ರದಲ್ಲಿ ಒಟ್ಟು 218 ಮತಗಟ್ಟೆಗಳಿದ್ದು, ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ 16 ಸುತ್ತು ಮತ ಎಣಿಕೆ ನಡೆಯಲಿದೆ. 89 ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಒಟ್ಟು 254 ಮತಗಟ್ಟೆಗಳಿದ್ದು, 19 ಸುತ್ತು ಮತ ಎಣಿಕೆ ನಡೆಯಲಿದೆ. 90 ವಿಜಯನಗರ ಕ್ಷೇತ್ರದಲ್ಲಿ ಒಟ್ಟು 259 ಮತಗಟ್ಟೆಗಳಿದ್ದು, ಕ್ಷೇತ್ರಕ್ಕೆ ಸಂಬಂಧಿಸಿದಂತೆ 19 ಸುತ್ತು ಮತ ಎಣಿಕೆ ನಡೆಯಲಿದೆ.

    91 ಕಂಪ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 242 ಮತಗಟ್ಟೆಗಳಿದ್ದು, ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸುಮಾರು 18 ಸುತ್ತು ಮತ ಎಣಿಕೆ ನಡೆಯಲಿದೆ. 93-ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ 235 ಮತಗಟ್ಟೆಗಳಿದ್ದು, 17 ಸುತ್ತು. 94-ಬಳ್ಳಾರಿ ನಗರ ಕ್ಷೇತ್ರದಲ್ಲಿ 261 ಮತಗಟ್ಟೆಗಳಿದ್ದು, 19 ಸುತ್ತು. 95 ಸಂಡೂರು ಕ್ಷೇತ್ರದಲ್ಲಿ ಒಟ್ಟು  253 ಮತಗಟ್ಟೆಗಳಿದ್ದು, 19 ಸುತ್ತು ಹಾಗೂ 96-ಕೂಡ್ಲಿಗಿ ಕ್ಷೇತ್ರದಲ್ಲಿ 250 ಮತಗಟ್ಟೆಗಳಿದ್ದು, ಒಟ್ಟು 18 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ.

    ನಗರದ ರಾವ್ ಬಹದ್ದೂರ್ ವೈ.ಮಹಾಬಲೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮತ ಎಣಿಕೆಗೆ ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ. ಪ್ರತಿ ಹಂತದ ಮತ ಎಣಿಕೆ ವಿವರವನ್ನು ಮಾಧ್ಯಮಗಳ ಮೂಲಕ ಪ್ರಚುರಪಡಿಸಲು ಅನುವಾಗುವಂತೆ ಮಾಧ್ಯಮದವರಿಗೆ ಮತ ಎಣಿಕೆ ಕೇಂದ್ರದಲ್ಲಿ ಮಾಧ್ಯಮ ಕೇಂದ್ರವನ್ನು ತೆರೆಯಲಾಗುವುದು ಎಂದರು.

    ಮತ ಎಣಿಕೆ ಕೇಂದ್ರ ಸುತ್ತಲೂ 100 ಮೀಟರ್ ಪ್ರದೇಶ ಆವರಣದಲ್ಲಿ ವಾಹನಗಳ ಪ್ರವೇಶವಿರುವುದಿಲ್ಲ. ಮತ ಎಣಿಕೆ ಅಂಗವಾಗಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಮದ್ಯಮಾರಾಟ ನಿಷೇಧಿಸಲಾಗಿದೆ ಎಂದು ಹೇಳಿದರು.

    ಪೊಲೀಸ್ ಅಧಿಕಾರಿ, ಸಿಬ್ಬಂದಿ ನಿಯೋಜನೆ:

    ಜಿಲ್ಲೆಯ 8 ಕ್ಷೇತ್ರಗಳ ಮತ ಎಣಿಕೆ ಕೇಂದ್ರವಾದ ರಾವ್ ಬಹದ್ದೂರ್ ವೈ.ಮಹಾಬಲೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಸುತ್ತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಅದರಲ್ಲಿ 01-ಎಸ್‍ಪಿ, 02-ಎಎಸ್ಪಿ, 05-ಡಿವೈಎಸ್ಪಿ, 15-ಸಿಪಿಐ, 25-ಪಿಎಸ್‍ಐ, 40-ಎಎಸ್‍ಐ, 250-ಪಿಸಿ, 04-ಕೆಎಸ್‍ಆರ್‍ಪಿ, 04 ಡಿ.ಆರ್ ತಂಡ ಸಹಿತ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಪಿ.ರವಿಕುಮಾರ್ ಅವರು ತಿಳಿಸಿದರು.

    ಈ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


    Provided by
    Provided by
    admin
    • Website

    Related Posts

    ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ

    July 25, 2026

    ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ

    July 25, 2026

    ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ

    July 24, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನವದೆಹಲಿ: ನೀಟ್–ಯುಜಿ 2026 (NEET-UG 2026) ಪರೀಕ್ಷಾ ವಿವಾದ ಹಾಗೂ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ, ಕೇಂದ್ರ ಶಿಕ್ಷಣ…

    ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ

    July 25, 2026

    ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ

    July 25, 2026

    ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!

    July 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.