nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ

    July 24, 2026
    Facebook Twitter Instagram
    ಟ್ರೆಂಡಿಂಗ್
    • ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
    • ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
    • ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
    • ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
    • ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
    • ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
    • ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
    • ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೊಳಕೆ ಬರಿಸಿದ ರಾಗಿ ಸೇವನೆಯಿಂದ ಆರೋಗ್ಯಕ್ಕೆ ಇಷ್ಟೆಲ್ಲಾ ಪ್ರಯೋಜನಗಳಿವೆ…!
    ರಾಜ್ಯ ಸುದ್ದಿ June 2, 2024

    ಮೊಳಕೆ ಬರಿಸಿದ ರಾಗಿ ಸೇವನೆಯಿಂದ ಆರೋಗ್ಯಕ್ಕೆ ಇಷ್ಟೆಲ್ಲಾ ಪ್ರಯೋಜನಗಳಿವೆ…!

    By adminJune 2, 2024No Comments2 Mins Read
    ragi

    ರಾಗಿಯಲ್ಲಿರುವ ಆರೋಗ್ಯದ ಉಪಯೋಗಗಳು ಹಲವಾರು . ಇದರ ಬಗ್ಗೆ ತಿಳಿಯದವರಿಲ್ಲ ಎಂದೇ ಹೇಳಬಹುದು. ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಿಸುವುದು, ದೇಹದ ತೂಕ ಕಡಿಮೆ ಮಾಡಲು , ಹೃದಯದ ಆರೋಗ್ಯವನ್ನು ವೃದ್ದಿಸುವುದು ಸೇರಿದಂತೆ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ರಾಗಿಯು ನೀಡುತ್ತದೆ. ರಾಗಿಯನ್ನು ಮೊಳಕೆ ಕಟ್ಟಿ ಸೇವಿಸುವುದರಿಂದ ಅದು ಮತ್ತಷ್ಟು ಆರೋಗ್ಯಕ್ಕೆ ಪ್ರಯೋಜನವನ್ನುಂಟು ಮಾಡುತ್ತದೆ. ಮೂಳೆ ಮತ್ತು ಮೆದುಳಿನ ಬೆಳವಣಿಗೆಯಲ್ಲಿಯೂ ರಾಗಿಯು ಪಾತ್ರವಹಿಸುವುದಲ್ಲದೆ, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

    ಯಾರೇ ಆಗಲಿ ರಾಗಿಯನ್ನು ತಮ್ಮ ಡಯೆಟ್ ನಲ್ಲಿ ಸೇರಿಸಿಕೊಂಡಿದ್ದಾರೆ ಎಂದಾದಲ್ಲಿ ಅವರು ಉತ್ತಮ ಪೋಷಕಾಂಶಗಳನ್ನು ಪಡೆಯುತ್ತಿದ್ದಾರೆ ಎಂದು ಅರ್ಥ. ರಾಗಿಯು ಸಾಕಷ್ಟು ಪೌಷ್ಟಿಕಾಂ ಶತೆಯನ್ನು ಹೊಂದಿದ್ದು, ಫಿಟ್ನೆಸ್ ಪ್ರಿಯರಲ್ಲಿ ಹೆಚ್ಚಿನ ಜನಪ್ರಿಯತೆಯನ್ನು ಗಳಿಸಿದೆ. ಇದರಲ್ಲಿ ಫೈಬರ್, ಕ್ಯಾಲ್ಸಿಯಂ, ಕಾರ್ಬೋಹೈಡ್ರೇಟ್‌ಗಳು ಮತ್ತು ವಿಟಮಿನ್‌ಗಳಂತಹ ಅಗತ್ಯ ಪೋಷಕಾಂಶಗಳು ಹೇರಳವಾಗಿ ತುಂಬಿರುವುದರಿಂದ ಹಲವಾರು ಆರೋಗ್ಯಕಾರಿ ಪ್ರಯೋಜನಗಳನ್ನು ನೀಡುತ್ತದೆ. ಅದರಲ್ಲೂ ಬೇಸಿಗೆಯಲ್ಲಂತೂ ರಾಗಿ ಸೇವನೆಯು ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡಿಸುತ್ತದೆ. ಇದರ ತಂಪಾಗಿಸುವ ಗುಣವು ಬೇಸಿಗೆಯ ತಾಪದಿಂದ ದೇಹವನ್ನು ತಂಪಾಗಿಸುತ್ತದೆ.

    ಅಲ್ಲದೆ ,ಇದರ ಸೇವನೆಯು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುವುದರಿಂದ ಮಧುಮೇಹಿಗಳಿಗೂ ಇದು ಪ್ರಯೋಜನಕಾರಿ ಆಹಾರವೆನ್ನಬಹುದಾಗಿದೆ. ಬೇಸಿಗೆಯಲ್ಲಿ ಜೀರ್ಣಾಂಗ ವ್ಯವಸ್ಥೆಯು ನಿಧಾನವಾಗಬಹುದು ಇದರಿಂದಾಗಿ ಗ್ಯಾಸ್, ಅಸಿಡಿಟಿ ಮತ್ತು ಹೊಟ್ಟೆ ನೋವುಗಳಂಗಹ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಕರಿದ ಆಹಾರ ಪದಾರ್ಥಗಳನ್ನು ಅಥವಾ ಭಾರಿ ಆಹಾರಗಳನ್ನು ಸೇವಿಸುವುದರಿಂದಲೂ ಕೂಡ ಈ ಗ್ಯಾಸ್ ,ಅಸಿಡಿಟಿ ಮತ್ತು ಹೊಟ್ಟೆನೋವುಗಳು ಕಾಣಿಸಿಕೊಳ್ಳಬಹುದು. ಅದಕ್ಕಾಗಿ ನಿಮ್ಮ ಬೆಳಗಿನ ಉಪಹಾರದಲ್ಲಿ ಮೊಳಕೆಯೊಡೆದ ರಾಗಿಯನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದರ ಜೊತೆಗೆ ಅಜೀರ್ಣದಂತ ಸಮಸ್ಯೆಗಳಿಗೆ ಪರಿಹಾರವನ್ನು ನೀಡುತ್ತದೆ.

    ಮೊಳಕೆ ಬರಿಸಿದ ರಾಗಿಯಲ್ಲಿ ಹೆಚ್ಚಿನ ಫೈಬರ್ ಅಂಶವಿದ್ದು, ಜೀರ್ಣಕ್ರಿಯೆಯನ್ನು ಉತ್ತೇಜಿಸುವಲ್ಲಿ ಮತ್ತು ಸಾಮಾನ್ಯವಾದ ಜೀರ್ಣಾಂಗವ್ಯೂಹದ ಸಮಸ್ಯೆಗಳನ್ನು ತಡೆಗಟ್ಟುವಲ್ಲಿ ಸಹಾಯಮಾಡುತ್ತದೆ. ಮೊಳಕೆಯೊಡೆದ ರಾಗಿಯು ಹೆಚ್ಚಿನ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುವಲ್ಲಿ ಅತ್ಯಂತ ಪರಿಣಾಮಕಾರಿಯಾಗಿದ್ದು, ಕೊಲೆಸ್ಟ್ರಾಲ್ ಮಟ್ಟ ಹೆಚ್ಚು ಇದ್ದವರಿಗೆ ಇದೊಂದು ಉತ್ತಮವಾದ ಆಹಾರದ ಆಯ್ಕೆ ಎಂದೇ ಹೇಳಬಹುದು. , ಯಕೃತ್ತಿನ ಕೊಬ್ಬನ್ನು ಕಡಿಮೆ ಮಾಡಲು ಮತ್ತು ಹೃದಯದ ಆರೋಗ್ಯವನ್ನು ಉತ್ತೇಜಿಸಲು ಸಹಾಯ ಮಾಡುವಂತಹ ಅಮೈನೋ ಆಮ್ಲವು ಮೊಳಕೆಯೊಡೆದ ರಾಗಿಯಲ್ಲಿ ಸಮೃದ್ದವಾಗಿರುವುದರಿಂದ ಇದರ ನಿಯಮಿತ ಸೇವನೆಯು ಈ ಸಮಸ್ಯೆಳನ್ನು ತಡೆಗಟ್ಟುವಲ್ಲಿ ಸಹಾಯಕಾರಿಯಾಗಬಹುದು.

    ಮೊಳಕೆಯೊಡೆದ ರಾಗಿಯನ್ನು ಬೇಸಿಗೆಯಲ್ಲಿ ಸೇವಿಸುವುದರ ಅತ್ಯಂತ ಮಹತ್ತರವಾದ ಪ್ರಯೋಜನವೇನೇಂದರೆ, ಇದು ರಕ್ತಹೀನತೆಯನ್ನು ನಿವಾರಿಸುವಲ್ಲಿ ಅತ್ಯಂತ ಹೆಚ್ಚಿನ ಪಾತ್ರವಹಿಸುತ್ತದೆ. ರಾಗಿಯಲ್ಲಿ ಕಬ್ಬಿಣಾಂಶ ಸಮೃದ್ದವಾಗಿದ್ದು, ಇದು ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುವಲ್ಲಿ ಸಹಾಯ ಮಾಡುತ್ತದೆ. ಮೊಳಕೆಯೊಡೆದ ರಾಗಿಯನ್ನು ಆಹಾರದಲ್ಲಿ ಸೇರಿಸುವುದರಿಂದ ಇದು ರಕ್ತ ಹೆಚ್ಚಾಗುವಲ್ಲಿ ಸಹಾಯ ಮಾಡುತ್ತದೆ. ಮೊಳಕೆಯೊಡೆದ ರಾಗಿಯು ಮಧುಮೇಹವಿರುವ ರೋಗಿಗಳಿಗೆ ಒಂದು ವರದಾನವಾಗಿದೆ. ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪಾಲಿಫಿನಾಲ್ ಗಳು ಮತ್ತು ಆಹಾರಕ್ಕೆ ಉತ್ತಮವಾದ ಫೈಬರ್ ಅಂಶವನ್ನು ಹೊಂದಿದೆ . ಆದ್ದರಿಂದ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಇದು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

    ರಾಗಿಯಲ್ಲಿರುವ ಫೈಬರ್ ಅಥವಾ ನಾರಿನಾಂಶವು ರಕ್ತವು ಸಕ್ಕರೆಯನ್ನು ಹೀರಿಕೊಳ್ಳುವುದನ್ನು ನಿಧಾನಗೊಳಿಸುತ್ತದೆ ಮತ್ತು ರಕ್ತದಲ್ಲಿನ ಹೆಚ್ಚಿನ ಸಕ್ಕರೆಯ ಮಟ್ಟವನ್ನು ತಡೆಯುತ್ತದೆ. ರಕ್ತದಲ್ಲಿನ ಸಕ್ಕರೆಯ ಮಟ್ಟದಲ್ಲಿ ಸ್ಥಿರತೆಯನ್ನು ಕಾಪಾಡುವಲ್ಲಿ ಸಹಾಯಮಾಡುತ್ತದೆ. ಈ ಎಲ್ಲಾ ಕಾರಣಗಳಿಂದ ರಾಗಿಯನ್ನು ಮಧುಮೇಹಿಗಳು ತಮ್ಮ ಆಹಾರದಲ್ಲಿ ಸೇರಿಸಿಕೊಂಡಲ್ಲಿ ತಮ್ಮ ಮಧುಮೇಹದ ಸಮಸ್ಯೆಯನ್ನು ನಿಯಂತ್ರಿಸುವಲ್ಲಿ ಹೆಚ್ಚು ಫಲಕಾರಿಯಾಗಬಲ್ಲದು. ಮೊಳಕೆಯೊಡೆದ ರಾಗಿಯ ಆಹಾರದಲ್ಲಿ ಫೈಬರ್ ಅಂಶವು ಹೇರಳವಾಗಿರುತ್ತದೆ.

    ಇದು ತೂಕವನ್ನು ನಿರ್ವಹಣೆ ಮಾಡಲು ಅತ್ಯಂತ ಸಹಾಯಕವಾದ ಆಹಾರವಾಗಿದೆ. ಈ ಆಹಾರವನ್ನು ಸೇವಿಸುವುದರಿಂದ ಇದರಲ್ಲಿರುವ ಫೈಬರ್ ಅಂಶದಿಂದಾಗಿ ಹೊಟ್ಟೆ ತುಂಬಿರುವಂತೆ ಮಾಡುತ್ತದೆ. ಹಾಗೂ ಅದರಿಂದ ಅತಿಯಾಗಿ ತಿನ್ನುವ ಸಾಧ್ಯತೆಯನ್ನು ಇದು ಕಡಿಮೆ ಮಾಡುತ್ತಾ ಹೆಚ್ಚಿನ ಕ್ಯಾಲೊರಿ ಸೇವನೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಮೊಳಕೆಯೊಡೆದ ರಾಗಿಯನ್ನು ನಿಮ್ಮ ಆಹಾರದಲ್ಲಿ ಸೇರಿಸುವುದು ಸರಳವಾಗಿದೆ. ನೀವು ಇದನ್ನು ಸಲಾಡ್‌ಗಳು, ನಯವಾಗಿ ರುಬ್ಬಿ ಪಾನೀಯವನ್ನಾಗಿ ಮಾಡಬಹುದು ಅಥವಾ ವಿವಿಧ ಉಪಹಾರ ಭಕ್ಷ್ಯಗಳಿಗೆ ಆಧಾರವಾಗಿ ಬಳಸಬಹುದು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ತುಮಕೂರು: ಎಸ್‌ ಐಆರ್ ಎನ್ಯುಮರೇಷನ್ ಅರ್ಜಿ ವಿತರಣೆಯಲ್ಲಿ ಜು.23ರ ಗುರುವಾರದ ಅಂತ್ಯಕ್ಕೆ ಶೇ.100ರಷ್ಟು ಪ್ರಗತಿಯಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾದ ಡಿಸಿ…

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ

    July 24, 2026

    ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್

    July 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.