ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಿದ್ದು, ಒಂದೇ ದಿನ 32 ಮರಗಳು ಧರೆಗುರುಳಿದ ಘಟನೆ ಜರುಗಿದೆ. ನಿತ್ಯ ವಾರದ ಬಳಿಕ ಮತ್ತೆ ಎಂಟ್ರಿಕೊಟ್ಟ ಮಳೆರಾಯ, ಸಿಟಿ ಮಂದಿಯನ್ನೇ ಥರಗುಟ್ಟುವಂತೆ ಮಾಡಿದ್ದಾನೆ. ವಾಹನ ಸವಾರರಂತೂ ಮಳೆ ನಡುವೆ ಸಿಲುಕಿ ಪರದಾಡಿದ್ದಾರೆ. ಮಳೆಯ ಆರ್ಭಟಕ್ಕೆ ನಗರದ ವಿವಿಧೆಡೆ 32 ಮರಗಳು ಧರೆಗುರುಳಿದ್ದು, ಬಿಬಿಎಂಪಿ ಕಂಟ್ರೋಲ್ ರೂಮ್ ನ ಹೆಲ್ಪ್ ಲೈನ್ ಗೆ ದೂರು ಬಂದಿವೆ.
ದೂರು ಬಂದ ಬೆನ್ನಲ್ಲೇ ಬಿಬಿಎಂಪಿ ಸಿಬ್ಬಂದಿಗಳು 18 ಕಡೆ ಮರ ತೆರವು ಮಾಡಿದ್ದಾರೆ. ಧಾರಾಕಾರ ಮಳೆಯಿಂದಾಗಿ ಗೊರಗುಂಟೆಪಾಳ್ಯ ಸಮೀಪ ಇರುವ ರಾಘವೇಂದ್ರ ಲೇಔಟ್ ನಲ್ಲಿ ರಸ್ತೆ ಕೆರೆಯಂತಾಗಿದೆ. ರಸ್ತೆ ಜಲಾವೃತವಾದ ಹಿನ್ನೆಲೆ ವಾಹನ ಸವಾರರು ಪರದಾಡಿದ್ದಾರೆ. ಸಂಜೆಯಿಂದಲೇ ಬೆಂಗಳೂರಲ್ಲಿ ಮಳೆ ಅಬ್ಬರಿಸಿದೆ. ಗಾಳಿ ಸಹಿತ ಭಾರೀ ಮಳೆಗೆ ನಗರದೆಲ್ಲೆಡೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಜೋರು ಮಳೆ ಹಿನ್ನೆಲೆ ಫ್ಲೈಓವರ್ ಕೆಳಗೆ ಆಶ್ರಯ ಪಡೆದಿದ್ದರು. ನಗರದಲ್ಲಿ ಇನ್ನೂ 4ದಿನ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಅಂತ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


