ಚಿಕ್ಕಮಗಳೂರು: ಬಾಳೆಹಣ್ಣಿನಲ್ಲಿ ಪ್ರಜ್ಞೆ ತಪ್ಪುವ ಔಷಧಿ ಬೆರೆಸಿ 30 ಮಂಗಗಳನ್ನು ಹತ್ಯೆಗೈದ ಅಮಾನವೀಯ ಕೃತ್ಯ ಎನ್ಆರ್ ಪುರದ ದ್ಯಾವಣ ಬಳಿ ನಡೆದಿದೆ. 16 ಗಂಡು, 14 ಹೆಣ್ಣು ಹಾಗೂ 4 ಮರಿ ಮಂಗಗಳನ್ನು ಹತ್ಯೆ ಮಾಡಿದ್ದಾರೆ.
ದುಷ್ಕರ್ಮಿಗಳು ಬಾಳೆಹಣ್ಣಿನಲ್ಲಿ ಪ್ರಜ್ಞೆ ತಪ್ಪುವ ಔಷಧಿ ಬೆರೆಸಿ, ಬಳಿಕ ಅದನ್ನು ತಿಂದ ಮಂಗಗಳು ಪ್ರಜ್ಞೆ ತಪ್ಪಿದಾಗ, ಅವುಗಳ ತಲೆಗೆ ಹೊಡೆದು ಹತ್ಯೆಗೈದಿದ್ದಾರೆ. ಸಾವಿಗೀಡಾದ 30 ಮಂಗಗಳ ತಲೆಯ ಮೇಲೂ ಒಂದೇ ರೀತಿಯ ಗಾಯಗಳಾಗಿವೆ. ಹತ್ಯೆ ಮಾಡಿದ ಬಳಿಕ ದ್ಯಾವಣ ಬಳಿಯ ರಸ್ತೆಯಲ್ಲಿ ಎಸೆದಿದ್ದಾರೆ.
ಸ್ಥಳಕ್ಕೆ ಡಿಎಫ್ಓ, ಆರ್ಎಫ್ಓ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ. ಮಂಗಗಳ ಮಾರಣ ಹೋಮಕ್ಕೆ ಪ್ರಾಣಿಪ್ರಿಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


