nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ

    July 23, 2026

    ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ

    July 23, 2026

    ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ

    July 23, 2026
    Facebook Twitter Instagram
    ಟ್ರೆಂಡಿಂಗ್
    • ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
    • ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
    • ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ
    • ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ
    • ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಬೇಡಿ: ಬೀದಿಬದಿ ವ್ಯಾಪಾರಿಗಳ ಸಂಘ ಮನವಿ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ
    • ರಾಹುಲ್ ಗಾಂಧಿಯವರ ಧ್ವನಿ ಅಡಗಿಸುವುದಕ್ಕೆ ಕೇಂದ್ರದ ಪ್ರಯತ್ನ: ಡಾ.ಜಿ.ಪರಮೇಶ್ವರ
    • ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮದ್ಯಮುಕ್ತ ಸಮಾಜ ನಿರ್ಮಾಣವಾಗುವಲ್ಲಿ ಪೂಜ್ಯ ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅವಿಸ್ಮರಣೀಯ: ಕೆರೆಗೋಡಿ ರಂಗಾಪುರ ಮಹಾ ಸ್ವಾಮೀಜಿಯವರು
    ರಾಜ್ಯ ಸುದ್ದಿ June 12, 2024

    ಮದ್ಯಮುಕ್ತ ಸಮಾಜ ನಿರ್ಮಾಣವಾಗುವಲ್ಲಿ ಪೂಜ್ಯ ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅವಿಸ್ಮರಣೀಯ: ಕೆರೆಗೋಡಿ ರಂಗಾಪುರ ಮಹಾ ಸ್ವಾಮೀಜಿಯವರು

    By adminJune 12, 2024No Comments2 Mins Read
    thipatooru

    ತುಮಕೂರು: ಜಿಲ್ಲೆಯ ತಿಪಟೂರು ತಾಲ್ಲೂಕಿನ ಸಿಂಗ್ರಿ ಸಂಜಪ್ಪ ಕಲ್ಯಾಣ ಮಂಟಪದಲ್ಲಿ ಇಂದು 1800ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ ನೀಡಲಾಯಿತು. ರಂಗಾಪುರ ಮಠದ ಶ್ರೀ ಗುರುಪರದೇಶಿ ಸ್ವಾಮಿಗಳ ಸಮ್ಮುಖದಲ್ಲಿ ಶಿಬಿರದ ಉದ್ಘಾಟನೆ ನಡೆಯಿತು.

    ಸ್ವಾಮೀಜಿಗಳು ಮದ್ಯವ್ಯಸನಿಗಳಿಗೆ ಮಾರ್ಗದರ್ಶನ ನೀಡುತ್ತಾ, “ಸಪ್ತ ವ್ಯಸನಗಳಲ್ಲಿ ಮದ್ಯವ್ಯಸನವೆಂಬುದು ಅತ್ಯಂತ ಅಪಾಯಕಾರಿ ಹಾಗೂ ಕೆಟ್ಟ ವ್ಯಸನವಾಗಿದ್ದು, ಈ ಸಮಾಜವನ್ನು ವ್ಯಸನಮುಕ್ತಗೊಳಿಸಲು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯು ಇಂದಿಗೆ 1800 ನೇ ಹಜ್ಜೆಯನ್ನು ಯಶಸ್ವಿಯಾಗಿಟ್ಟು, ವ್ಯಸನಮುಕ್ತ ಸಮಾಜವನ್ನು ನಿರ್ಮಿಸುವ ಕಠಿಣ ಪ್ರಯತ್ನಕ್ಕೆ ಸಾಕ್ಷಿಯಾಗಿದೆ” ಎಂದು ಶುಭ ಹಾರೈಸಿದರು.

    ಶಿಬಿರದ ಅದ್ಯಕ್ಷರಾಗಿರುವ ಟಿ.ಸಿ. ತರಕಾರಿ ಗಂಗಾಧರ್ ರವರು ಮಾತನಾಡಿ, “ಯೋಜನೆಯ ವತಿಯಿಂದ ನಡೆಯುತ್ತಿರುವ ಈ ಮಹತ್ವದ ಸೇವೆಗೆ ನನ್ನನ್ನು ಅದ್ಯಕ್ಷರನ್ನಾಗಿ ನೇಮಿಸಿ, ಮಂಜುನಾಥಸ್ವಾಮಿಯ ಹೆಸರಿನಲ್ಲಿ ಬಡಜನರಿಗೆ ಸೇವೆ ಸಲ್ಲಿಸಲು ಒಂದು ಅವಕಾಶವನ್ನು ಕೊಟ್ಟಿರುವುದು, ನನ್ನ ಪುಣ್ಯವೇ ಸರಿ. ಈ ತರಹದ ಯೋಜನೆಯ ಯಾವುದೇ ಕಾರ್ಯಕ್ರಮವಿರಲಿ ನನ್ನ ಬೆಂಬಲ ಸದಾ ಇರುತ್ತದೆ. ಜೊತೆಗೆ ಇಲ್ಲಿರುವ ಎಲ್ಲಾ ಮದ್ಯವಸನಿಗಳು ಪಾನಮುಕ್ತರಾದಾಗ ನಮ್ಮೆಲ್ಲರ ಸೇವೆಗೆ ನಿಜವಾದ ಅರ್ಥ ಸಿಗುತ್ತದೆ” ಎಂದು ಶುಭ ಹಾರೈಸಿದರು.

    ತಾಲ್ಲೂಕಿನ ನಗರಸಭಾದ್ಯಕ್ಷರಾದ ರಾಮ್ ಮೋಹನ್ ರವರು ಶಿಬಿರವನ್ನುದ್ದೇಶಿಸಿ, “ಮದ್ಯವ್ಯಸನಿಗಳ ಮನಸ್ಥಿತಿಯನ್ನು ಬದಲಿಸಿ ಪಾನಮುಕ್ತರನ್ನಾಗಿಸಿ, ಅವರ ಕುಟುಂಬಗಳ ಏಳಿಗೆಗೆ ಅವಿರತ ಶ್ರಮಿಸುತ್ತಿರುವ ಯೋಜನೆಗೆ ಹಾಗೂ ಕಾರ್ಯಕರ್ತರಿಗೆ ಶುಭವಾಗಲಿ ಹಾಗೂ ಇಲ್ಲಿರುವ ಎಲ್ಲಾ ಮದ್ಯವ್ಯಸನಿಗಳಿಗೆ ದೇವರು ಒಳ್ಳೆಯದು ಮಾಡಿ ಪಾನಮುಕ್ತರಾಗಲಿ” ಎಂದು ಶುಭ ಹಾರೈಸಿದರು.

    ಸಮಾಜ ಸಾಧನೆ. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣ ರವರು ಯೋಜನೆಯು ಬಡವರ, ನಿರ್ಗತಿಕರ, ಅಶಕ್ತರ ಪರವಾಗಿ ಕಾರ್ಯಕ್ರಮಗಳನ್ನು ಪೂಜ್ಯರ ಆಶಯದಂತೆ ನಡೆಸಿಕೊಂಡು ಬರುತ್ತಿದೆ. ಅವುಗಳಲ್ಲಿ ಈ ಮದ್ಯವರ್ಜನ ಶಿಬಿರವು ಅತ್ಯಂತ ಪ್ರಮುಖ ಕಾರ್ಯಕ್ರಮವಾಗಿದೆ. ರಾಜ್ಯಾದ್ಯಂತ ಇದುವರೆಗೂ 1799 ಮದ್ಯವವರ್ಜನ ಶಿಭಿರಗಳನ್ನು ನಡೆಸಿ ಸಾವಿರಾರು ಕುಟುಂಬಗಳಿಗೆ, ಇದು ಕೇವಲ ಎಂಟು ದಿನದ ಕಾರ್ಯಕ್ರಮವಲ್ಲ. ಬದಲಾಗಿ ಶಿಬಿರ ಪ್ರಾರಂಭದಿಂದ ಕೊನೆಯವರೆಗೂ ನಡೆಯುವ ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿ, ನಂತರದ ನವ ಜೀವನ ಸಮಿತಿಯ ರಚನೆ ಹಾಗೂ ನಿರ್ವಹಣೆ ಮತ್ತು ವಾರ ಹಾಗೂ 15 ದಿನಕ್ಕೊಮ್ಮೆ ಯೋಜನೆಯ ಮಾಹಿತಿ ನೀಡುತ್ತಾ, ಶಿಬಿರದಲ್ಲಿ ಹಾಜರಿದ್ದ 62 ಮದ್ಯ ವ್ಯಸನಿಗಳೆಲ್ಲರೂ ಮದ್ಯಮುಕ್ತರಾಗಿ ಮುಂದೆ ಸಮಾಜ ಗುರುತಿಸುವ ರೀತಿ ಬದಾಲಾವಣೆಯಾಗುವುದು ಶತಸಿದ್ದ” ಎಂದು ಶುಭ ಹಾರೈಸಿದರು.

    ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯರಾದ ಸಂಗಮೇಶ್, ತಿಪಟೂರು ಸ್ಥಾಯಿ ಸಮಿತಿ ಮಾಜಿ ಅದ್ಯಕ್ಷರಾದ ಶಶಿಕಿರಣ್, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಪ್ರತಾಪ್ ಸಿಂಗ್, ಮಲ್ಲಿಗಪ್ಪಾಚಾರ್, ಮಹದೇವಮ್ಮ, ಶ್ರೀಮತಿ ರೇಖ, ಜನಜಾಗೃತಿ ವೇದಿಕೆಯ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ತಿಮ್ಮಯ್ಯನಾಯ್ಕ್, ಶಿಬಿರಾಧಿಕಾರಿಗಳಾದ ದಿವಾಕರ್ ಪೂಜಾರಿ, ತಾಲ್ಲೂಕು ಯೋಜನಾಧಿಕಾರಿಗಳಾದ ಉದಯ್ ಕೆ. ಹಾಗೂ ಯೋಜನೆಯ ಕಾರ್ಯಕರ್ತರು ಹಾಗೂ ನವಜೀವನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ

    July 23, 2026

    ತುಮಕೂರು: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿದ ಕೇಂದ್ರ…

    ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ

    July 23, 2026

    ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ

    July 23, 2026

    ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ

    July 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.