nammatumakuru

    Subscribe to Updates

    Get the latest creative news from FooBar about art, design and business.

    What's Hot

    ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ

    November 25, 2025

    ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ

    November 25, 2025

    ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ

    November 25, 2025
    Facebook Twitter Instagram
    ಟ್ರೆಂಡಿಂಗ್
    • ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ
    • ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ
    • ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ
    • ಸ್ಕೌಟ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಶಾ ಪ್ರಸನ್ನ ಕುಮಾರ್ ಆಯ್ಕೆ
    • ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ
    • ಸಹಾಯಧನ ಸೌಲಭ್ಯಕ್ಕಾಗಿ ಮೀನುಗಾರರಿಂದ ಅರ್ಜಿ ಆಹ್ವಾನ
    • ಕೊಳೆಗೇರಿಗಳು ನವನಗರ ಆಗಬೇಕು: ಪ್ರಾಧ್ಯಾಪಕ ಪ್ರೊ.ಪ್ರಕಾಶ್ ಎಂ. ಶೇಟ್
    • ನವೆಂಬರ್ 30ರಂದು ಕನ್ನಡ ರಾಜ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಅಪಘಾತ ವಿಮಾ ಸೌಲಭ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೈಬರ್ ಅಪರಾಧ: ಜನಸಾಮಾನ್ಯರು ಮುಂಜಾಗ್ರತೆ ವಹಿಸಿದರೆ ವಂಚನೆ ತಡೆಯಬಹುದು: ಡಾ.ವಿಕ್ರಮ ಅಮಟೆ
    ರಾಜ್ಯ ಸುದ್ದಿ June 22, 2024

    ಸೈಬರ್ ಅಪರಾಧ: ಜನಸಾಮಾನ್ಯರು ಮುಂಜಾಗ್ರತೆ ವಹಿಸಿದರೆ ವಂಚನೆ ತಡೆಯಬಹುದು: ಡಾ.ವಿಕ್ರಮ ಅಮಟೆ

    By adminJune 22, 2024No Comments2 Mins Read
    presss

    ಆಧುನಿಕ ತಂತ್ರಜ್ಞಾನ ಬಳಸಿ ಆನ್ ಲೈನ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಆಮಿಷಗಳನ್ನು ಒಡ್ಡಿ ವಂಚನೆ ಮಾಡುತ್ತಿರುವ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನಸಾಮಾನ್ಯರು ಮುಂಜಾಗ್ರತೆ ವಹಿಸುವ ಮೂಲಕ ವಂಚನೆಗೊಳಗಾಗುವುದನ್ನು ತಡೆಗಟ್ಟಬಹುದಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಡಾ. ವಿಕ್ರಮ ಅಮಟೆ ತಿಳಿಸಿದರು.

    ಅವರು ಇಂದು ಚಿಕ್ಕಮಗಳೂರು ಪ್ರಸ್‌ಕ್ಲಬ್‌ನಲ್ಲಿ ಏರ್ಪಡಿಸಲಾಗಿದ್ದ ತಿಂಗಳ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿ ನೀಡಿದರು.


    Provided by
    Provided by

    ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದ್ದು, ವಿದ್ಯಾವಂತ ಸುಶಿಕ್ಷಿತರೇ ಹೆಚ್ಚು ವಂಚನೆಗೊಳಗಾಗುತ್ತಿದ್ದಾರೆ, ದೊಡ್ಡ ಜಾಲವನ್ನು ಹೊಂದಿರುವ ವಂಚಕರ ಜಾಲವು ಇಲ್ಲಸಲ್ಲದ ಆಮಿಷ ಒಡ್ಡಿ ವಿವಿಧ ರೀತಿಯಲ್ಲಿ ವಂಚನೆ ಮಾಡುತ್ತಿದ್ದು, ಯಾರೂ ಕೂಡ ಅಪರಿಚಿತರೊಂದಿಗೆ ತಮ್ಮ ವಯಕ್ತಿಕ ಮಾಹಿತಿಗಳನ್ನು ನೀಡಬಾರದು ಎಂದು ಮನವಿ ಮಾಡಿದರು.

    ಮೂರು ಪ್ರಕರಣಗಳಲ್ಲಿ ಸೈಬರ್ ಅಪರಾಧಗಳು ನಡೆಯುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳನ್ನು ವೈರಲ್ ಮಾಡಿ ಬ್ಲಾಕ್‌ಮೇಲ್ ರೂಪದಲ್ಲಿ ವಂಚನೆ ಮಾಡಲಾಗುತ್ತಿದೆ. ಬ್ಯಾಂಕ್ ಹಾಗೂ ಇತರ ವ್ಯವಹಾರಗಳಲ್ಲಿ ವಯಕ್ತಿಕ ಮಾಹಿತಿ ಪಡೆದುಕೊಂಡು ತಂತ್ರಜ್ಞಾನ ಬಳಸಿ ಹಣ ಅಪಹರಿಸುವ ಮೂಲಕ ವಂಚನೆ ಮಾಡಲಾಗುತ್ತಿದೆ, ಡಿಜಿಟಲ್ ಅರೆಸ್ಟ್ ಎಂಬ ಸುಳ್ಳು ಮಾಹಿತಿ ನೀಡಿ ಹಣ ಸುಲಿಗೆ ಮಾಡಲಾಗುತ್ತಿದೆ. ಈ ಬಗ್ಗೆ ನಾಗರಿಕರು ಎಚ್ಚರವಹಿಸಬೇಕಾಗಿದೆ ಎಂದರು.

    2೦೦3ರಲ್ಲಿ ಮಾಹಿತಿ ತಂತ್ರಜ್ಞಾನ ಜಾರಿಗೆ ಬಂದಿದ್ದು, ಅದರ ಆಧಾರದಲ್ಲಿ ರಾಜ್ಯ ಸರ್ಕಾರ ಪ್ರತೀ ಪೊಲೀಸ್ ಠಾಣೆಯಲ್ಲಿ ಇಬ್ಬರಿಗೆ ಸೈಬರ್ ಅಪರಾಧಗಳ ಬಗ್ಗೆ ತರಬೇತಿ ನೀಡಲಾಗಿದೆ. ಪ್ರತೀ ಜಿಲ್ಲೆಯಲ್ಲಿ ಸೈಬರ್ ಅಪರಾಧಕ್ಕಾಗಿಯೇ ಪ್ರತ್ಯೇಕ ಪೊಲೀಸ್ ಠಾಣೆ ತೆರೆಯಲಾಗಿದ್ದು ಡಿವೈಎಸ್‌ಪಿ ಹಂತದ ಅಧಿಕಾರಿಗೆ ತನಿಖಾಧಿಕಾರಿಯಾಗಿ ನಿಯೋಜಿಸಲಾಗಿದೆ, ಇದೀಗ ಸರ್ಕಾರ ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಮಟ್ಟದ ಅಧಿಕಾರಿಯನ್ನು ಮೇಲುಸ್ತುವಾರಿಗಾಗಿ ನೇಮಕ ಮಾಡಲಾಗಿದೆ ಎಂದು ಹೇಳಿದರು.

    ಯಾವುದೇ ವ್ಯಕ್ತಿ ಅಥವಾ ಯಾವುದೇ ಸ್ಥಳದಲ್ಲಿ ಸೈಬರ್ ಅಪರಾಧದಲ್ಲಿ ತೊಂದರೆಗೊಳಗಾದವರು ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ಇದಕ್ಕಾಗಿ ಪ್ರತ್ಯೇಕವಾಗಿ ಟ್ರೋಲ್‌ಫ್ರೀ ಮೊಬೈಲ್ ಸಂಖ್ಯೆ ೧೯೩೦ ಯನ್ನು ನಿಗಧಿಪಡಿಸಿದ್ದು, ಯಾವುದೇ ಸ್ಥಳದಿಂದ ಈ ಸಂಖ್ಯೆಗೆ ದೂರವಾಣಿ ಕರೆ ಮಾಡಿದರೆ ಎನ್‌ಸಿಸಿಆರ್‌ಪಿ( ನ್ಯಾಷನಲ್ ಸೈಬರ್ ಕ್ರೈಂ ರಿಪೋರ್ಟ್ ಪೋರ್ಟಲ್) ಇಲ್ಲಿಗೆ ಮಾಹಿತಿ ರವಾನೆಯಾಗಿ ಅಲ್ಲಿಂದ ತಕ್ಷಣ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ರವಾನೆಯಾಗಲಿದೆ ಎಂದು ವಿವರಿಸಿದರು.

    ಈ ಮಾಹಿತಿ ಆಧರಿಸಿ ಆಯಾ ಪೊಲೀಸ್ ಠಾಣೆಗಳಿಂದ ಸಂಬಂಧಪಟ್ಟ ಬ್ಯಾಂಕ್‌ಗಳಿಗೆ ಅಥವಾ ಸಂಬಂಧಪಟ್ಟ ಜಾಲತಾಣ ಸಂಸ್ಥೆಗಳಿಗೆ ಮಾಹಿತಿ ನೀಡಿ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಬಹುದು ಮತ್ತು ವಂಚನೆ ಜಾಲತಾಣಗಳ ಆಪ್‌ಗಳು ಮೊಬೈಲ್ನ ಸಂಖ್ಯೆಗಳನ್ನು ಬ್ಲಾಕ್‌ಮಾಡುವ ಮೂಲಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದೆಂದು ಹೇಳಿದರು.

    ಈ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಕೃಷ್ಣಮೂರ್ತಿ, ಸೈಬರ್ ಅಪರಾಧ ವಿಭಾಗದ ಇನ್ಸ್‌ಪೆಕ್ಟರ್ ಗವಿರಾಜ್ ಭಾಗವಹಿಸಿದ್ದರು, ಅಧ್ಯಕ್ಷತೆಯನ್ನು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ರಾಜೇಶ್ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ತಾರಾನಾಥ್ ಉಪಸ್ಥಿತರಿದ್ದರು.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ

    November 25, 2025

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    November 22, 2025

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ

    November 25, 2025

    ಸರಗೂರು:  ಪಟ್ಟಣದ ಒಂದನೇ ಮುಖ್ಯ ರಸ್ತೆಯ ಎಸ್‌ ಬಿಐ ಬ್ಯಾಂಕ್  ಪಕ್ಕದಲ್ಲಿರುವ ಅಂಚೆ ಕಚೇರಿ ಮುಂಭಾಗದಲ್ಲಿ ಖಾತೆದಾರರು ಹಾಗೂ ಪ್ರಗತಿಪರ…

    ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ

    November 25, 2025

    ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ

    November 25, 2025

    ಸ್ಕೌಟ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಶಾ ಪ್ರಸನ್ನ ಕುಮಾರ್ ಆಯ್ಕೆ

    November 25, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.