ಹಾವೇರಿ: ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ಹುಡುಗನ ಮೇಲೆ ದುಷ್ಕರ್ಮಿಗಳ ಗುಂಪೊಂದು ಏಕಾಏಕಿ ದಾಳಿ ಮಾಡಿ ಪರಾರಿಯಾಗಿರುವ ಘಟನೆ ನಡೆದಿರೋದು ಹಾವೇರಿ ಜಿಲ್ಲೆ ಸವಣೂರು ಪಟ್ಟಣದ ಗೋಕಾಕ್ ಸರ್ಕಲ್ ನಡೆದಿದೆ.
ಆಬಿದ್ ಅಲ್ಲಾಭಕ್ಷ್ ಚೌದ್ರಿ( 30) ಹಲ್ಲೆಗೊಳಗಾದ ಯುವಕನಾಗಿದ್ದಾನೆ. ಈತ ಸವಣೂರಿನಲ್ಲಿ ಗ್ಯಾರೇಜ್ ಕೆಲಸ ಮಾಡುತ್ತಿದ್ದ. ಈ ವೇಳೆ ಎರಡು ಬೈಕ್ ಗಳಲ್ಲಿ ಬಂದ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದ್ದಾರೆ..
ಮಚ್ಚಿನಿಂದ ಕೊಚ್ಚಿದ್ದರಿಂದ ಆಬಿದ್ ಅಲ್ಲಾಭಕ್ಷ್ ಚೌದ್ರಿ ಸ್ಥಿತಿ ಚಿಂತಾಜನಕವಾಗಿದೆ.. ಆತನನ್ನು ಸವಣೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA