ಪಾವಗಡ: ನಾಡಿನ ಸಮಕಾಲಿನ ಕನ್ನಡ ಸಾಹಿತ್ಯದ ಮೇರು ಬರಹಗಾರ್ತಿ ನಾಡೋಜ ಡಾ.ಕಮಲಾ ಹಂಪನಾರವರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಕಾರ್ಯದರ್ಶಿ ಐ.ಎ.ನಾರಾಯಣಪ್ಪ ತಿಳಿಸಿದರು.
ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಸರ್ಕಾರಿ ಬಾಲಕರ ಶಾಲೆಯಲ್ಲಿ ಭಾನುವಾರದಂದು ಹೋಬಳಿ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ದಿವಂಗತರಾದ ನಾಡೋಜ ಡಾ. ಕಮಲಾ ಹಂಪನಾರವರಿಗೆ ಶ್ರದ್ದಾಂಜಲಿ ಸಭೆಯಲ್ಲಿ ಮಾತನಾಡಿದರು.
ತಾಲ್ಲೂಕಿನ ಮೂಲದ ಮಹಿಳೆಯಾದ ಕಮಲಾ ಹಂಪನಾ ರವರು ಉತ್ತಮ ಸ್ತ್ರೀ ಸಂವೇದನಾ ಬರಹಗಾರರು ಹಾಗೂ 71 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಅವರ ಸಾಹಿತ್ಯ ಸೇವೆಯಿಂದ ಕನ್ನಡ ಸಾಹಿತ್ಯ ಕ್ಷೇತ್ರ ಶ್ರೀಮಂತಗೊಂಡಿದೆ ಎಂದರು.
ಹೋಬಳಿ ಘಟಕದ ಅಧ್ಯಕ್ಷರಾದ ಹೊ.ಮ.ನಾಗರಾಜು ಮಾತನಾಡಿದರು. ಪದಾಧಿಕಾರಿಗಳಾದ ಕೃಷ್ಣಕುಮಾರ್, ಎ.ಎಸ್.ರಘುನಂದನ್, ಸತ್ಯನಾರಾಯಣಚಾರಿ, ತಿರುಮಲೇಶ ಸೇರಿದಂತೆ ನಂದೀಶ್ ನಾಯ್ಕ, ಹರೀಶ್, ತೇಜಸ್ ಇದ್ದರು.
ವರದಿ : ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA