ತುಮಕೂರು: ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಚಿನ್ನಾಭರಣ ದೋಚುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಅದರಲ್ಲಿ ಚಿನ್ನು ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಇನ್ನೊಂದೆಡೆ ರಿಜ್ವಾನ್ ಎಂಬಾತನ ಮಾಹಿತಿ ಪಡೆದ ಪೊಲೀಸರು ಹೊಸಪೇಟೆಯಲ್ಲಿ ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಇಬ್ಬರು ಸೇರಿ ಮಧುಗಿರಿ ಕೊರಟಗೆರೆ ಭಾಗದ ಗ್ರಾಮೀಣ ಭಾಗದಲ್ಲಿ ಮಹಿಳೆಯರನ್ನು ಮೇಲಿದ್ದ ಚಿನ್ನಾಭರಣವನ್ನು ದೋಚಿ ಪರಾರಿಯಾಗುತ್ತಿದ್ದರು. ತನಿಖೆ ಚುರುಕುಗೊಳಿಸಿದ್ದ ಪೊಲೀಸರು ಆರೋಪಿಗಳು ಚಿನ್ನಾಭರಣವನ್ನು ಸ್ಥಳೀಯ ಚಿನ್ನದ ಅಂಗಡಿಗೆ ಮಾರಾಟ ಮಾಡುತ್ತಿದ್ದ ವಿಷಯ ಬೆಳಕಿಗೆ ಬಂದಿತ್ತು. ಈ ನಡುವೆ ಪೋಲಿಸ್ ವಿಶೇಷ ತಂಡವು ಪ್ರಮುಖ ಆರೋಪಿ ಚಿನ್ನು ಎಂಬತನನ್ನು ಬಂಧಿಸಿ ನಂತರ ವಿಚಾರಣೆ ವೇಳೆ ಆತನ ಸಹಚರ ರಿಜ್ವಾನ್ ಎಂಬತನನ್ನು ಕೂಡ ವಶಕ್ಕೆ ತೆಗೆದುಕೊಂಡು ಮಧುಗಿರಿ ಪೊಲೀಸ್ ಠಾಣೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ರಿಜ್ವಾನ್ ಎಂಬಾತನು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದನು.
ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿಯೇ ಆತನ ಕೈಗೆ ಗುಂಡು ಹಾರಿಸಿದರು. ಅಲ್ಲದೆ ಹೆಚ್ಚಿನ ಅನಾಹುತ ಆಗದಂತೆ ತಡೆಗಟ್ಟಿದ್ದರು. ಇದೀಗ ಗುಂಡು ತಗಲಿ ಗಾಯಗೊಂಡಿರುವ ಆರೋಪಿ ರಿಜ್ವಾನನ್ನು ಪೊಲೀಸರು ತುಮಕೂರು ಜಿಲ್ಲಾ ಸತಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA