nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಫಿಟ್ವೀಲ್  ಟೂಲ್ಸ್ ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

    September 16, 2025

    ಬೀದರ್ | ಬಾಲಕಿಯರ ಕುಸ್ತಿ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶೋಭಾ

    September 16, 2025

    ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು

    September 16, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಫಿಟ್ವೀಲ್  ಟೂಲ್ಸ್ ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ
    • ಬೀದರ್ | ಬಾಲಕಿಯರ ಕುಸ್ತಿ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶೋಭಾ
    • ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು
    • ರಾಜ್ಯದಲ್ಲೂ ಜಾರಿಯಾಗುತ್ತಾ, 15 ವರ್ಷ ಹಳೆಯ ವಾಹನ ಗುಜರಿಗೆ ಹಾಕುವ ರೂಲ್ಸ್!
    • ಕುಡಿತ ಬಿಟ್ಟರು, ಹತ್ತಾರು ಶಾಲೆಗಳಿಗೆ ಬೆಳಕಾದರು: ಕುಶಲಕರ್ಮಿ ಸಮಾಜ ಸೇವಕ ಮಂಟೇಲಿಂಗಾಚಾರ್
    • ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ
    • ಸಂತಪೂರ ಮರಿಯ ಕೃಪಾ ದವಾಖಾನೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ
    • ಸತ್ವಯುತ ಆಹಾರ ಸೇವನೆ, ನಿಯಮಿತ ವ್ಯಾಯಾಮದಿಂದ ಉತ್ತಮ ಆರೋಗ್ಯ: ಹಾದನೂರು ಪ್ರಕಾಶ್ 
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿ ಸರ್ಕಾರ ಇರುವ ಕಾರಣ ಅನುದಾನದ ಕೊರತೆಯಾಗಿದೆ | ಶಾಸಕ ಅನಿಲ್ ಚಿಕ್ಕಮಾದು ಆರೋಪ
    ಸ್ಪೆಷಲ್ ನ್ಯೂಸ್ December 29, 2021

    ಬಿಜೆಪಿ ಸರ್ಕಾರ ಇರುವ ಕಾರಣ ಅನುದಾನದ ಕೊರತೆಯಾಗಿದೆ | ಶಾಸಕ ಅನಿಲ್ ಚಿಕ್ಕಮಾದು ಆರೋಪ

    By adminDecember 29, 2021No Comments2 Mins Read
    anil chikkamadu

    ಸರಗೂರು: ನಾನು ಶಾಸಕನಾಗಿ ಆಯ್ಕೆಯಾದಗಿನಿಂದಲೂ ಕಾಡಂಚಿನ ಭಾಗದ ಗ್ರಾಮಗಳಿಗೆ ಹೆಚ್ಚಿನ ಅನುದಾನಗಳನ್ನು ತಂದು ಈ ಭಾಗದಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡಲು ಶಕ್ತಿಮೀರಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಶಾಸಕ ಅನಿಲ್ ಚಿಕ್ಕಮಾದು ಅಭಿಪ್ರಾಯ ವ್ಯಕ್ತಪಡಿಸಿದರು.

    ತಾಲ್ಲೂಕಿನ ಎಂ.ಸಿ.ತೊಳಲು ಗ್ರಾಮದ ಸಮೀಪ ನುಗು ಏತನೀರಾವರಿ ಯೋಜನೆ ಮೂಲಕ ಗುಡಕಟ್ಟೆ, ಬಾಲನಕಟ್ಟೆ, ಹತ್ತಿಕೆರೆಗಳಿಗೆ ನೀರು ತುಂಬಿಸುವ ಮತ್ತು ಗಿರಿಜನ ಹಾಗೂ ಸ್ಥಳೀಯರ ಜಮೀನುಗಳಿಗೆ ನೀರು ಒದಗಿಸುವ ಸುಮಾರು 9 ಕೋಟಿ ರೂ ಅನುಧಾನದ ಏತನೀರಾವರಿ ಯೋಜನೆ ಮತ್ತು ಮೊಳೆಯೂರು ಗ್ರಾಮದ ಸುಮಾರು 65 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.


    Provided by
    Provided by
    Provided by

    ನನ್ನ ಅವಧಿಯಲ್ಲಿ ಮೂರು ವರ್ಷ ಮುಗಿದ ಬಳಿಕ ಮೊದಲ ಬಾರಿ ಶಾಶ್ವತವಾಗಿ ಉಳಿಯುವ ಒಂದು ಏತ ನೀರಾವರಿ ಯೋಜನೆಗೆ ಚಾಲನೆ ನೀಡಿರುವುದು ಸಂತಸದ ವಿಚಾರವಾಗಿದೆ.  ಸಮಿಶ್ರ ಸರ್ಕಾರವಿದ್ದಾಗ ಸತತ ಪ್ರಯತ್ನ ಮಾಡಿ ಅನುದಾನಗಳನ್ನು ಹೆಚ್ಚಾಗಿ ತರುತ್ತಿದ್ದೆ ಆದರೆ ಈಗ ಬಿಜೆಪಿ ಸರ್ಕಾರ ಇರುವ ಕಾರಣ ಅನುದಾನದ ಕೊರತೆ ಹೆಚ್ಚಾಗಿದೆ. 200 ಕೋಟಿ ಅನುದಾನವನ್ನು ತಂದು ಹೆಚ್ಚಿನ ಅಭಿವೃದ್ಧಿ ಮಾಡಬೇಕಾಗಿತ್ತು ಆದರೆ ಈಗಿನ ಸರ್ಕಾರದಲ್ಲಿ 1 ಕೋಟಿ ತರುವುದು ಸಹ ಕಷ್ಟವಾಗಿದೆ ಎಂದು ಅವರು ಹೇಳಿದರು.

    ಕ್ಷೇತ್ರಕ್ಕೆ ಸಾಕಷ್ಟು ಮನೆಗಳು ಬೇಕು ಎಂದು ಸಹ ಮನವಿ ಮಾಡಿದರು ಮನೆಗಳು ಕಡಿಮೆ ಸಂಖ್ಯೆಯಲ್ಲಿ ಬರುತ್ತಿವೆ ಇದರಿಂದ ಮನೆಗಳ ಹಂಚಿಕೆ ಕಡಿಮೆಯಾಗುತ್ತಿದೆ. ಅಲ್ಲದೇ,  ನಮ್ಮ ಭಾಗದಲ್ಲಿ ಪ್ರಮುಖ 3 ಜಲಾಶಯಗಳಿದ್ದು,  24-25ಟಿಎಂಸಿ ನೀರು ನಮ್ಮಲ್ಲಿದೇ ಆದರೆ ನಮ್ಮ ಕ್ಷೇತ್ರ ಬಳಕೆಗೆ ಕೇವಲ 2-3 ಟಿಎಂಸಿ ಬಳಕೆಯಾಗುತಿದೆ ಉಳಿಕೆ ನೀರು ಮೈಸೂರು ಬೆಂಗಳೂರು ಸೇರಿದಂತೆ ಬೇರೆ ಭಾಗಕ್ಕೆ ಹೋಗುತಿದೆ. ಆದ್ದರಿಂದ ಹೆಚ್ಚಿನ ಏತನೀರಾವರಿ ಯೋಜನೆಗಳು ಜಾರಿಯಾದರೆ ಹೆಚ್ಚಿನ ನೀರನ್ನು ನಮ್ಮ ಭಾಗಕ್ಕೆ ಬಳಕೆ ಮಾಡಿಕೊಳ್ಳಬಹುದು ಎಂದರು.

    ಇದೇ ಸಂದರ್ಭದಲ್ಲಿ ತಾಲ್ಲೂಕಿನ ಯಶವಂತಪುರ ಗ್ರಾಮದ ವರೆಗೆ ಆಗಿರುವ ಏತನೀರಾವರಿ ಯೋಜನೆಯನ್ನು ಮುಂದುವರೆಸಿ ಹಾದನೂರು ಗ್ರಾಮಕ್ಕೂ ನೀಡಿ ಆ ಭಾಗದ ರೈತರಿಗೆ ಅನುಕೂಲ ಮಾಡಬೇಕು ಎಂದು ಹಾದನೂರು ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು.

    ಸ್ಥಳದಲ್ಲಿ ಎಂ.ಸಿ.ತೊಳಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ, ಸರಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮನುಗನಹಳ್ಳಿ ಮಾದಪ್ಪ, ಕಾರ್ಯದರ್ಶಿ ಚಲುವರಾಜು, ಯೂತ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ನರಸೀಪುರ ರವಿ, ಟಿಪಿಎಂಸಿ ಅಧ್ಯಕ್ಷ ಅಣ್ಣಯ್ಯ ಸ್ವಾಮಿ, ತಾಲ್ಲೂಕು ಕಾರ್ಮಿಕ ಸಂಘದ ಅಧ್ಯಕ್ಷ ಕುಮಾರ್, ಕುರುಬ ಸಮಾಜದ ಅಧ್ಯಕ್ಷ ಆನಂದ್, ಮುಖಂಡರಾದ ದೇವದಾಸ್, ರೂಪಾಬಾಯಿ ಮಲ್ಲೇಶ್ ನಾಯಕ, ಗುಣಪಾಲ್, ಶಿವಪ್ಪ, ದೇವರಾಜು, ಪುಟ್ಟಸ್ವಾಮಿ, ಹೇಮಾಜಿನಾಯಕ, ಗ್ರಾಮ ಪಂಚಾಯಿತಿ ಸದಸ್ಯರಾದ ಚಿಕ್ಕಕ್ಯಾತ, ಪ್ರಕಾಶ್, ಕುಮಾರ್, ಬೆಟ್ಟಸ್ವಾಮಿ, ಅಜಿತ್ ಕುಮಾರ್, ರತ್ನಮ್ಮ ರಾಜೇಶ್, ಶಿವರಾಜ್ ಅರಸ್, ಭಾಗ್ಯ ಕೆಂಪಸಿದ್ದ, ಪಿಡಿಒಗಳಾದ  ಶಿಲ್ಪ, ಅಂಜದ್ ಪಾಷ, ಇಂಜಿನಿಯರ್ ಗಳಾದ ಸಿ.ಎಸ್.ಯೋಗೇಶ್,ಸೋಮಣ್ಣ, ಪ್ರಥಮ ದರ್ಜೆ ಗುತ್ತಿಗೆದಾರ ಬಸವರಾಜು ಮುಂತಾದವರು ಹಾಜರಿದ್ದರು.

    ವರದಿ: ಚಂದ್ರಹಾದನೂರು

    admin
    • Website

    Related Posts

    ಟ್ರಂಪ್‌ ಅವರದು ‘ಪುಂಡ’ ವ್ಯಾಪಾರ ನೀತಿ: ಭಾರತದ ಪರ ನಿಂತ ಚೀನಾ!

    August 8, 2025

    ಅವಳ ತುಟಿ ಮಷಿನ್‌ ಗನ್‌: ಶ್ವೇತಭವನದ ಪತ್ರಿಕಾ ಕಾರ್ಯದರ್ಶಿಯ ಸೌಂದರ್ಯ ಹೊಗಳಿದ ಟ್ರಂಪ್!

    August 4, 2025

    ಸ್ನೇಹಿತನ ಮೃತದೇಹಕ್ಕೆ ಮದ್ಯ ಕುಡಿಸಿ, ಸಿಗರೇಟ್ ಬಾಯಲ್ಲಿಟ್ಟ ಸ್ನೇಹಿತ!

    April 5, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಫಿಟ್ವೀಲ್  ಟೂಲ್ಸ್ ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

    September 16, 2025

    ತುಮಕೂರು: ಅಂತರಸನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ FITWEL TOOLS AND FORGINGS PRIVATE LIMITED ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ…

    ಬೀದರ್ | ಬಾಲಕಿಯರ ಕುಸ್ತಿ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶೋಭಾ

    September 16, 2025

    ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು

    September 16, 2025

    ರಾಜ್ಯದಲ್ಲೂ ಜಾರಿಯಾಗುತ್ತಾ, 15 ವರ್ಷ ಹಳೆಯ ವಾಹನ ಗುಜರಿಗೆ ಹಾಕುವ ರೂಲ್ಸ್!

    September 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.