nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ
    • ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
    • ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
    • ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
    • ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
    • ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ
    • ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ:  ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
    • ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ  ಅಧಿಕಾರಿಗಳಿಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮವಸ್ತ್ರವೂ ಧರಿಸದೇ ರೋಗಿಗಳೊಂದಿಗೆ ವೈದ್ಯನ ರೌಡಿಸಂ:  ವೈದ್ಯ ಡಾ.ನವೀನ್ ಅಮಾನತಿಗೆ ಸ್ಥಳೀಯರಿಂದ ಆಗ್ರಹ
    ಕೊರಟಗೆರೆ June 26, 2024

    ಸಮವಸ್ತ್ರವೂ ಧರಿಸದೇ ರೋಗಿಗಳೊಂದಿಗೆ ವೈದ್ಯನ ರೌಡಿಸಂ:  ವೈದ್ಯ ಡಾ.ನವೀನ್ ಅಮಾನತಿಗೆ ಸ್ಥಳೀಯರಿಂದ ಆಗ್ರಹ

    By adminJune 26, 2024No Comments2 Mins Read
    dr naveen

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ

    ಕೊರಟಗೆರೆ : ನೀನೇನು ಎಸಿನಾ ಅಥವಾ ಡಿಸಿನಾ ನಿನ್ನಿಂದ ನಾನು ಹೆದರೋಕೆ.. ನಿನ್ನ ಹೆಸರೇನು ಹೇಳಿ ನೋಡು ನಾನೇನು ಮಾಡ್ತೀನಿ ಅಂತಾ ಗೊತ್ತಾಗುತ್ತೆ.. ನಾನು ಯಾರಿಗೂ ಹೆದರೋದಿಲ್ಲ ಹೆದರಿಸೋಕೆ ಬರಬೇಡಿ ನೀವು. ನಾನು ಪ್ರಕರಣ ದಾಖಲು ಮಾಡ್ತಿದ್ರೇ ನೀವು ಜೈಲಿಗೆ ಹೋಗ್ತಿರಾ ಹುಷಾರ್ ಎಂದು ಕೊರಟಗೆರೆಯ ಸಾರ್ವಜನಿಕ ಆಸ್ಪತ್ರೆಯ ಕಿವಿ ಮೂಗು ಗಂಟಲು ತಜ್ಞ ಡಾ.ನವೀನ್ ಚಿಕಿತ್ಸೆಗೆಂದು ನಾನು ಹೋದ ಸಂದರ್ಭದಲ್ಲಿ ನನಗೆ ಬೆದರಿಕೆ ಹಾಕಿದ್ದಾನೆ ಎಂದು ದಲಿತ ಹೋರಾಟಗಾರ ಚಿಕ್ಕರಂಗಯ್ಯ ಆರೋಪಿಸಿದ್ದಾರೆ.


    Provided by
    Provided by

    ಕೊರಟಗೆರೆ ಪಟ್ಟಣದ ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಜೂನ್ 25ರ ಮಂಗಳವಾರ ಬೆಳಿಗ್ಗೆ 11ಗಂಟೆಯ ಸಮಯದಲ್ಲಿ ಘಟನೆ ನಡೆದಿದೆ. ಡಾ.ನವೀನ್ ಜೂನ್ 24ರ ಸೋಮವಾರ ಬೆಳಿಗ್ಗೆ 9ರಿಂದ ಜೂನ್ 25ರ ಮಂಗಳವಾರ ಬೆಳಿಗ್ಗೆ 9ರವರೆಗೆ ಕರ್ತವ್ಯನಿರತ ವೈದ್ಯರು.  ಆದರೆ ಅವರು ಕರ್ತವ್ಯದಲ್ಲಿರಲಿಲ್ಲ. ಅವರನ್ನು ಪ್ರಶ್ನೆ ಮಾಡಿದರೆ ಸಮವಸ್ತ್ರವೂ ಧರಿಸದೇ ರೋಗಿಗಳ ಜೊತೆಗೆ ಉದ್ಧಟತನದಿಂದ ವರ್ತಿಸಿದ್ದಾರೆ.

     ಘಟನೆಗೂ ನವೀನ್ ಗೂ  ಸಂಬಂಧ ಏನು.?

    ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯ ಬಗ್ಗೆ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಹಾಗೂ ದಲಿತ ಹೋರಾಟಗಾರ ಚಿಕ್ಕರಂಗಯ್ಯ ಆಸ್ಪತ್ರೆಯ ವೈದ್ಯ ಡಾ.ಪುರುಷೋತ್ತಮ್‍ ಗೆ  ಪ್ರಶ್ನೆ ಮಾಡ್ತಾರೇ. ಅಷ್ಟರಲ್ಲಿ ಸ್ಥಳಕ್ಕೆ ಆಗಮಿಸಿದ ವೈದ್ಯ ಡಾ.ನವೀನ್ ಏಕಾಏಕಿ ಕಿರುಚಬೇಡಿ ಇಲ್ಲಿ ಯಾರು ಹೆದರೋರು ಯಾರು ಇಲ್ಲ. ನನಗೆ ಲೌಡಕ್ಕೆಬಾಲ್ ಅಂತಿಯಾ ನೀನು? ನಿನ್ನ ಹೆಸರೇನು ನಿನಗೇ ಏನ್ ಮಾಡ್ತೀನಿ ನೋಡ್ತಾ ಇರು ಅಂತಾರೇ. ವೈದ್ಯ ಡಾ.ಪುರುಷೋತ್ತಮ ಅವರು ಡಾ.ನವೀನ್‍ ಗೆ ಸುಮ್ಮನಿರಲು ಸೂಚಿಸಿದ್ರು  ಆದರೆ ಸುಮ್ಮನಾಗದೇ ಜಗಳಕ್ಕೆ ಇಳಿದಿದ್ದಾರೆ  ಎಂದು ಆರೋಪಿಸಲಾಗಿದೆ.

     ಪೊಲೀಸ್ ಠಾಣೆಗೆ ದೂರು:

    ಸಾರ್ವಜನಿಕ ಆಸ್ಪತ್ರೆಯ ಡಾ.ನವೀನ್ ಸಮವಸ್ತ್ರವೂ ಧರಿಸದೇ ನಿರ್ಲಕ್ಷ್ಯ ವಹಿಸಿದ್ದು, ಚಿಕಿತ್ಸೆಗೆ ಹೋದ ನನ್ನನ್ನು ಅವಾಚ್ಯ ಶಬ್ದಗಳಿಂದ ಬೈದು, ಕೈಎತ್ತಿ ಹೊಡೆಯಲು ಬಂದು ಜಾತಿಯ ಹೆಸರೇಳಿ ನಿಂದನೆ ಮಾಡಿದ್ದಾನೆ ಎಂದು ಕೊರಟಗೆರೆ ಪೊಲೀಸ್ ಠಾಣೆಗೆ ದಲಿತ ಮುಖಂಡ ಚಿಕ್ಕರಂಗಯ್ಯ ದೂರು ನೀಡಿದ್ದಾರೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಪದೇ ಪದೇ ಕರ್ತವ್ಯಲೋಪ ಮಾಡುವ ಡಾ.ನವೀನ್‍ರನ್ನು ತಕ್ಷಣ ಅಮಾನತು ಮಾಡುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್  ಗೆ ಮನವಿ ಮಾಡಿದ್ದಾರೆ.

    ಆಸ್ಪತ್ರೆಯ ವೈದ್ಯರಿಗೆ ನೊಟೀಸ್ ಜಾರಿ:

    ವೈದ್ಯರು ನಿಗದಿತ ಸಮಯಕ್ಕೆ ಆಸ್ಪತ್ರೆಗೆ ಆಗಮಿಸದೇ ರೋಗಿಗಳಿಗೆ ಸಮಸ್ಯೆ ಆಗುತ್ತಿರುವ ಬಗ್ಗೆ ದೂರು ಬಂದಿವೆ. ವೈದ್ಯರಿಗೆ ಮೌಖಿಕವಾಗಿ ಹಲವು ಬಾರಿ ತಿಳಿಸಿದ್ರು ಸಮಸ್ಯೆ ಸರಿಹೋಗಿಲ್ಲ. ಕರ್ತವ್ಯಕ್ಕೆ ನಿಗದಿತ ಸಮಯಕ್ಕೆ ಆಗಮಿಸದೇ ಇದ್ದರೇ ವೈದ್ಯರೇ ನೇರಹೊಣೆ ಆಗಬೇಕಾಗುತ್ತದೆ.  ಚಿಕ್ಕರಂಗಯ್ಯ ಮೇಲೆ ಡಾ.ನವೀನ್ ನೀಡಿರುವ ದೂರುಪತ್ರ ಕುರಿತು ವಿಚಾರಣೆ ಪ್ರಯುಕ್ತ ಜೂ.25ರ ಮ.3:30ಕ್ಕೆ ಹಾಜರಾಗುವಂತೆ ಮುಖ್ಯ ವೈದ್ಯಾಧಿಕಾರಿ ಡಾ.ಲಕ್ಷ್ಮೀಕಾಂತ ಅಧಿಕೃತ ಜ್ಞಾಪನ ಪತ್ರದಲ್ಲಿ ತಿಳಿಸಿದ್ದಾರೆ.

    ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ರೌಡಿಗಳ ರೀತಿಯಲ್ಲಿ ಡಾ.ನವೀನ್ ಬೆದರಿಕೆ ಹಾಕ್ತಾರೇ. ಆಸ್ಪತ್ರೆಯಲ್ಲಿ ರೋಗಿಗಳಿಗೆ ವೈದ್ಯರಿಂದ ಆಗುತ್ತಿರುವ ಸಮಸ್ಯೆಯ ಬಗ್ಗೆ ಪ್ರಶ್ನೆ ಮಾಡಿದ್ದೇ ತಪ್ಪಾಯ್ತು. ಸಮವಸ್ತ್ರವೇ ಇಲ್ಲದ ಕೊರಟಗೆರೆ ಆಸ್ಪತ್ರೆಯ ವೈದ್ಯ ಡಾ.ನವೀನ್ ನನ್ನ ಮೈಮೇಲಿನ ಬಟ್ಟೆ ಎಳೆದು ಜಾತಿನಿಂದನೆ ಮಾಡಿದ್ದಾರೆ. ಡಾ.ನವೀನ್ ಮೇಲೆ ಪ್ರಕರಣ ದಾಖಲಿಸಲು ಠಾಣೆಗೆ ದೂರು ನೀಡಿದ್ದೇನೆ.

    ಚಿಕ್ಕರಂಗಯ್ಯ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ದಲಿತ ಹೋರಾಟಗಾರ


    ಸರಕಾರಿ ಆಸ್ಪತ್ರೆಗೆ ಚಿಕ್ಕರಂಗಯ್ಯ ಚಿಕಿತ್ಸೆಗೆ ಬಂದಾಗ ಡಾ.ನವೀನ್ ನಡುವೆ ವಾಗ್ವಾದ ನಡೆದಿದೆ. ಆಸ್ಪತ್ರೆಗೆ ಬರುವ ರೋಗಿಗಳ ಬಗ್ಗೆ ಸೌಮ್ಯತೆಯಿಂದ ವರ್ತಿಸಲು ಈಗಾಗಲೇ ನವೀನ್‍ ಗೆ ಸೂಚಿಸಲಾಗಿದೆ. ದೂರಿನ ಬಗ್ಗೆ ನನಗೇನು ಮಾಹಿತಿ ಇಲ್ಲ. ಆಸ್ಪತ್ರೆಯಲ್ಲಿ ಮತ್ತೆ ಇಂತಹ ಘಟನೆ ಆಗದಂತೆ ಕರೆದು ಮಾತನಾಡ್ತೇನೆ. ಆರೋಗ್ಯ ಇಲಾಖೆಗೆ ಘಟನೆಯ ಬಗ್ಗೆ ವರದಿ ನೀಡಲಾಗಿದೆ.

    -ಡಾ.ಲಕ್ಷ್ಮೀಕಾಂತ ಟಿ.ಎಸ್, ಮುಖ್ಯ ಆಡಳಿತ ವೈದ್ಯಾಧಿಕಾರಿ. ಕೊರಟಗೆರೆ.


     

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ

    May 27, 2026

    ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ

    May 27, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ(5 ರಿಂದ 10ನೇ ತರಗತಿ) ಹಾಗೂ…

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು

    May 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.