nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
    • ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
    • ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
    • ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
    • ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
    • ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
    • ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
    • ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೊಬ್ಬರ, ಬಿತ್ತನೆ ಬೀಜಗಳಿಗೆ ಕೊರತೆ ಇಲ್ಲ, ರೈತರಿಗೆ ಅನುಕೂಲವಾಗಲಿದೆ: ಜಿಲ್ಲಾಧಿಕಾರಿ ಶುಭಕಲ್ಯಾಣ್
    ತುರುವೇಕೆರೆ June 27, 2024

    ಗೊಬ್ಬರ, ಬಿತ್ತನೆ ಬೀಜಗಳಿಗೆ ಕೊರತೆ ಇಲ್ಲ, ರೈತರಿಗೆ ಅನುಕೂಲವಾಗಲಿದೆ: ಜಿಲ್ಲಾಧಿಕಾರಿ ಶುಭಕಲ್ಯಾಣ್

    By adminJune 27, 2024No Comments3 Mins Read
    subha kalyani

    ತುರುವೇಕೆರೆ: ಜಿಲ್ಲೆಯಲ್ಲಿ ಸುಮಾರು 300 ಮಿಲಿ ಮೀಟರ್ ಮಳೆಯಾಗಿದ್ದು ರೈತರಿಗೆ ಬಿತ್ತನೆಗೆ ಯಾವುದೇ ತೊಂದರೆಯಾಗದಂತೆ ಗೊಬ್ಬರ ಬಿತ್ತನೆ ಬೀಜಗಳಿಗೆ ಕೊರತೆಯಾಗದಂತೆ 11 ಹೆಚ್ಚುವರಿ ಮಳಿಗೆಗಳನ್ನು ತೆರೆಯಲಾಗಿದ್ದು ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಅಭಿಪ್ರಾಯಪಟ್ಟರು.

    ಪಟ್ಟಣದ ವೈ ಟಿ ರಸ್ತೆಯ ಗಣಪತಿ ಪೆಂಡಾಲ್ನಲ್ಲಿ ಆಯೋಜಿಸಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿಮಾತನಾಡಿದ ಅವರು ಜಿಲ್ಲೆಯಲ್ಲಿ ಇಲ್ಲಿಯವರೆಗೆ ಏಳು ಜನ ಸ್ಪಂದನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮುಗಿಸಿದ್ದೇವೆ ಇದು ಎಂಟನೇ ಕಾರ್ಯಕ್ರಮ ಪ್ರಮುಖವಾಗಿ ಕೃಷಿ ಇಲಾಖೆಯಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಈ ಬಾರಿ ಜಿಲ್ಲೆಯಲ್ಲಿ ಸುಮಾರು 300 ಮಿಲಿ ಮೀಟರ್ ಮಳೆಯಾಗಿದ್ದು ರೈತರಿಗೆ ಬಿತ್ತನೆಗೆ ಯಾವುದೇ ತೊಂದರೆಯಾಗದಂತೆ ಗೊಬ್ಬರ ಬಿತ್ತನೆ ಬೀಜಗಳಿಗೆ ಕೊರತೆಯಾಗದಂತೆ 11 ಹೆಚ್ಚುವರಿ ಮಳಿಗೆಗಳನ್ನು ತೆರೆಯಲಾಗಿದ್ದು ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದರು.

    ನಮ್ಮ ಜಿಲ್ಲೆಯಲ್ಲಿ ಕಳೆದ ವರ್ಷದ ಬೆಳೆ ವಿಮೆ 70 ಕೋಟಿ ರೂಪಾಯಿಗಳನ್ನು ಈಗಾಗಲೇ ರೈತರ ಖಾತೆಗಳಿಗೆ ಜಮೆ ಮಾಡಲಾಗಿದ್ದು ಕಳೆದ ಸಾಲಿನಲ್ಲಿ ಕೇವಲ 70000 ರೈತರು ಬೆಳೆ ವಿಮೆ ಮಾಡಿಸಿದ್ದಾರೆ ಈ ವರ್ಷ ಕೃಷಿ ಇಲಾಖೆಯು ಆಂದೋಲನವನ್ನು ಕೈಗೊಂಡಿದ್ದು ಅಧಿಕಾರಿಗಳು ಪ್ರತಿ ಗ್ರಾಮ ಪಂಚಾಯಿತಿಗೆ ತೆರಳಿ, ಆ ಮಟ್ಟದಲ್ಲಿ ರೈತರಿಗೆ ಬೆಳೆ ವಿಮೆಯ ಬಗ್ಗೆ ಅರಿವು ಮೂಡಿಸುವ ಹಾಗೂ ತರಬೇತಿ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದಾರೆ ಎಂದರು.

    ರೈತರು ಅವರು ನೀಡಿರುವ ವೇಳಾಪಟ್ಟಿಯಂತೆ ಬೆಳೆ ವಿಮೆ ನೋಂದಣಿ ಮಾಡಿಸಿ ಎಲ್ಲಾ ರೈತರುಗಳು ತಮ್ಮ ಮೊಬೈಲ್ಗಳಲ್ಲಿ ಬೆಳೆಯ ಸಮೀಕ್ಷೆಯನ್ನು ತಾವೇ ಮಾಡಿಕೊಳ್ಳಬಹುದು. ಎಂದು ತಿಳಿಸಿ ಅಧಿಕಾರಿಗಳೊಂದಿಗೆ ಸ್ಪಂದಿಸಿ ಆಂದೋಲನವನ್ನು ಯಶಸ್ವಿಗೊಳಿಸಬೇಕೆಂದು ರೈತರಲ್ಲಿ ಮನವಿ ಮಾಡಿದರು.

    ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ಈ ಸಾಲಿನಲ್ಲಿ ಕಡಿಮೆ ಫಲಿತಾಂಶ ಬಂದಿದ್ದು ಇದರಲ್ಲಿ ಶೇಕಡಾವಾರು ಕಡಿಮೆಯಾಗಿದೆ ಇದರಿಂದ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಿ ಎಂದು ಡಿಡಿಪಿ ಐ. ಸಭೆ ನಡೆಸಿ ಅವರಿಗೆ ಸೂಚನೆ ನೀಡಲಾಗಿದೆ. ಈ ಸಾಲಿನಲ್ಲಿ ಒಳ್ಳೆಯ ಫಲಿತಾಂಶ ಬರುವಂತೆ ಶ್ರಮವಹಿಸಬೇಕು ಎಂದು ತಾಕೀತು ಮಾಡಿದ್ದೇವೆ ಎಂದರು.

    ತಾಲೂಕು ಕಚೇರಿಯ ಕಡತಗಳು ಶೀಘ್ರ ವಿಲೇವಾರಿಯಾಗದೆ ಮತ್ತು ಕೆಲಸಗಳು ತುಂಬಾ ನಿಧಾನವಾಗಿ ನಡೆಯುತ್ತಿರುವುದರಿಂದ ಸಿಬ್ಬಂದಿಗಳಿಗೆ ಚುರುಕು ಮುಟ್ಟಿಸಿ ಈ ರೀತಿ ಆಗದಂತೆ ಎಚ್ಚರಿಕೆ ವಹಿಸಿ ಶೀಘ್ರವಾಗಿ ಕಡೆತಗಳನ್ನು ವಿಲೇವಾರಿ ಮಾಡಿ ರೈತರು ಹಾಗೂ ಸಾರ್ವಜನಿಕರು ಕಚೇರಿಗೆ ಬಂದರೆ ಅವರನ್ನು ಅಲೆಸದಂತೆ ತಾಲೂಕು ಕಚೇರಿಯ ನೌಕರರಿಗೆ ಎಚ್ಚರಿಕೆ ಕೊಟ್ಟರು.
    ಪೌತಿ ಖಾತೆ ವಿಲೇವಾರಿಯ ಬಗ್ಗೆ ಸರಿಯಾದ ವೇಳೆಯಲ್ಲಿ ವಿಲೇವಾರಿ ಮಾಡಿ ಇಲ್ಲವಾದಲ್ಲಿ ನೀವೇ ಜವಾಬ್ದಾರಿಗಳಾಗಿರುತ್ತೀರಿ ಎಂದು ಪೌತಿ ಖಾತೆ ವಿಲೇವಾರಿ ಆಂದೋಲನ ಮಾಡಿ ಸರಿಯಾದ ನಿರ್ವಹಣೆ ಮಾಡಿ ಎಂದು ಕಂದಾಯ ಇಲಾಖೆಯ ಸಿಬ್ಬಂದಿಗಳಿಗೆ ತಾಕೀತು ಮಾಡಿ ಪ್ರತಿ ಗ್ರಾಮ ಪಂಚಾಯತ್ ಪಿಡಿಒ ಹಾಗೂ ವಾಟರ್ ಮ್ಯಾನ್ ಗಳಿಗೆ ಎಲ್ಲಾ ಟ್ಯಾಂಕ್ ಗಳನ್ನು ಸ್ವಚ್ಛವಾಗಿಡಲು ಸೂಚಿಸಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವಂತೆ ಹೇಳಿ ಕುಡಿಯುವ ನೀರಿನ ಬಗ್ಗೆ ದೂರುಗಳು ಬಂದರೆ ನೀವೇ ಜವಾಬ್ದಾರಿಗಳಾಗಿರುತ್ತೀರಿ. ಸಾರ್ವಜನಿಕರಿಗೆ ಸ್ಪಂದಿಸದಿದ್ದಲ್ಲಿ ಶಿಸ್ತುಕ್ರಮ ಜರಗಿಸಲಾಗುವುದು ಎಂದು ಹೇಳಿದರು.

    ಶಾಸಕ ಎಂ.ಟಿ.ಕೃಷ್ಣಪ್ಪನವರು ಮಾತನಾಡಿ, ನಮ್ಮ ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿಗಳು ಕೆಲಸವನ್ನು ಚೆನ್ನಾಗಿ ನಿರ್ವಹಿಸುತ್ತಿದ್ದು ತಮ್ಮ ಹಿರಿಯ ಅಧಿಕಾರಿಗಳ ತಂಡದೊಂದಿಗೆ ತಾಲೂಕಿಗೆ ಬಂದು ರೈತರ ಹಾಗೂ ಸಾರ್ವಜನಿಕರ ಕುಂದು ಕೊರತೆಗಳನ್ನು ಕೇಳಲು ಬಂದಿದ್ದಾರೆ ನಿಮ್ಮ ಯಾವುದೇ ಅಹವಾಲುಗಳಿದ್ದರೂ ಸಹ ಸ್ಥಳದಲ್ಲಿಯೇ ಬಗೆಹರಿಸಿಕೊಳ್ಳಿ ಹಾಗೆ ಕಂದಾಯ ಇಲಾಖೆಯ ನೌಕರರು ರೈತರನ್ನು ಅನವಶ್ಯವಾಗಿ ಕಚೇರಿಗೆ ಆಲಿಸುವುದನ್ನು ನಾನು ನೋಡಿದ್ದೇನೆ ಇದಕ್ಕೆ ನೀವೇ ಜವಾಬ್ದಾರಿಗಳಾಗುತ್ತೀರಿ. ಯಾವುದೇ ಕಾರಣಕ್ಕೂ ಸುಖ ಸುಮ್ಮನೆ ಅವರನ್ನು ಆಲೆಸುವುದನ್ನು ಬಿಟ್ಟು ಸರಿಯಾದ ಸಮಯದಲ್ಲಿ ಕೆಲಸವನ್ನು ನಿರ್ವಹಿಸಿ ಎಂದು ಹೇಳಿದರು.
    ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಮಳಿಗೆಗಳನ್ನು ತೆರೆಯಲಾಗಿತ್ತು ಅದರಲ್ಲಿ ಆರೋಗ್ಯ ಇಲಾಖೆಯು ಸ್ಥಳದಲ್ಲಿಯೇ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಂಡಿತ್ತು.

    ಈ ಸಂದರ್ಭದಲ್ಲಿ ತಹಶೀಲ್ದಾರ್ ವೈ ಎಂ ರೇಣು ಕುಮಾರ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಶಿವರಾಜಯ್ಯ, ಪಟ್ಟಣ ಪಂಚಾಯಿತಿ ಸದಸ್ಯರಾದ ಚಿದಾನಂದ್, ಅಂಜನ್ ಕುಮಾರ್, ಯಜಮಾನ ಮಹೇಶ್, ಎನ್.ಆರ್ ಸುರೇಶ್, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಶ್ರೀನಾಥ್ ಬಾಬು, ಬಿ ಇ ಓ ಸೋಮಶೇಖರ್, ಆಡಿಷನಲ್ ಎಸ್.ಪಿ. ಖಾದರ್ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

    ವರದಿ : ಸುರೇಶ್ ಬಾಬು ಎಂ. ತುರುವೇಕೆರೆ

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್

    July 7, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಲಿಂಗದಹಳ್ಳಿಯಲ್ಲಿ ಮಾದಕ ದ್ರವ್ಯ ದುಷ್ಪರಿಣಾಮಗಳ ಜಾಗೃತಿ ಕಾರ್ಯಕ್ರಮ ಪಾವಗಡ: ಪಿಯುಸಿ ಹಂತವು ವಿದ್ಯಾರ್ಥಿಗಳ ಬದುಕಿನ ಅತ್ಯಂತ ಮಹತ್ವದ ಘಟ್ಟವಾಗಿದೆ. ಈ…

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026

    ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ

    July 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.