nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025

    ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ

    September 27, 2025
    Facebook Twitter Instagram
    ಟ್ರೆಂಡಿಂಗ್
    • ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ
    • ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ
    • ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ
    • ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ
    • ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ
    • ಸೆ.28ರಂದು ಪಾವಗಡದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ: ಯತ್ನಾಳ್ ಭಾಗಿ
    • ಇಳಿಯುವ ಮುನ್ನವೇ ಚಲಿಸಿದ ಬಸ್: ಮಗಳ ಮನೆಗೆ ಹೋಗಿ ಬರುತ್ತಿದ್ದ ಮಹಿಳೆ ಸಾವು!
    • ಬೀದರ್ | 1. 34 ಕೋಟಿ ರೂ.ಗೂ ಅಧಿಕ ಮೌಲ್ಯದ ಮಾದಕ ವಸ್ತು ನಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೊಬ್ಬರ, ಬಿತ್ತನೆ ಬೀಜಗಳಿಗೆ ಕೊರತೆ ಇಲ್ಲ, ರೈತರಿಗೆ ಅನುಕೂಲವಾಗಲಿದೆ: ಜಿಲ್ಲಾಧಿಕಾರಿ ಶುಭಕಲ್ಯಾಣ್
    ತುರುವೇಕೆರೆ June 27, 2024

    ಗೊಬ್ಬರ, ಬಿತ್ತನೆ ಬೀಜಗಳಿಗೆ ಕೊರತೆ ಇಲ್ಲ, ರೈತರಿಗೆ ಅನುಕೂಲವಾಗಲಿದೆ: ಜಿಲ್ಲಾಧಿಕಾರಿ ಶುಭಕಲ್ಯಾಣ್

    By adminJune 27, 2024No Comments3 Mins Read
    subha kalyani

    ತುರುವೇಕೆರೆ: ಜಿಲ್ಲೆಯಲ್ಲಿ ಸುಮಾರು 300 ಮಿಲಿ ಮೀಟರ್ ಮಳೆಯಾಗಿದ್ದು ರೈತರಿಗೆ ಬಿತ್ತನೆಗೆ ಯಾವುದೇ ತೊಂದರೆಯಾಗದಂತೆ ಗೊಬ್ಬರ ಬಿತ್ತನೆ ಬೀಜಗಳಿಗೆ ಕೊರತೆಯಾಗದಂತೆ 11 ಹೆಚ್ಚುವರಿ ಮಳಿಗೆಗಳನ್ನು ತೆರೆಯಲಾಗಿದ್ದು ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಅಭಿಪ್ರಾಯಪಟ್ಟರು.

    ಪಟ್ಟಣದ ವೈ ಟಿ ರಸ್ತೆಯ ಗಣಪತಿ ಪೆಂಡಾಲ್ನಲ್ಲಿ ಆಯೋಜಿಸಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿಮಾತನಾಡಿದ ಅವರು ಜಿಲ್ಲೆಯಲ್ಲಿ ಇಲ್ಲಿಯವರೆಗೆ ಏಳು ಜನ ಸ್ಪಂದನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮುಗಿಸಿದ್ದೇವೆ ಇದು ಎಂಟನೇ ಕಾರ್ಯಕ್ರಮ ಪ್ರಮುಖವಾಗಿ ಕೃಷಿ ಇಲಾಖೆಯಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಈ ಬಾರಿ ಜಿಲ್ಲೆಯಲ್ಲಿ ಸುಮಾರು 300 ಮಿಲಿ ಮೀಟರ್ ಮಳೆಯಾಗಿದ್ದು ರೈತರಿಗೆ ಬಿತ್ತನೆಗೆ ಯಾವುದೇ ತೊಂದರೆಯಾಗದಂತೆ ಗೊಬ್ಬರ ಬಿತ್ತನೆ ಬೀಜಗಳಿಗೆ ಕೊರತೆಯಾಗದಂತೆ 11 ಹೆಚ್ಚುವರಿ ಮಳಿಗೆಗಳನ್ನು ತೆರೆಯಲಾಗಿದ್ದು ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದರು.


    Provided by
    Provided by
    Provided by

    ನಮ್ಮ ಜಿಲ್ಲೆಯಲ್ಲಿ ಕಳೆದ ವರ್ಷದ ಬೆಳೆ ವಿಮೆ 70 ಕೋಟಿ ರೂಪಾಯಿಗಳನ್ನು ಈಗಾಗಲೇ ರೈತರ ಖಾತೆಗಳಿಗೆ ಜಮೆ ಮಾಡಲಾಗಿದ್ದು ಕಳೆದ ಸಾಲಿನಲ್ಲಿ ಕೇವಲ 70000 ರೈತರು ಬೆಳೆ ವಿಮೆ ಮಾಡಿಸಿದ್ದಾರೆ ಈ ವರ್ಷ ಕೃಷಿ ಇಲಾಖೆಯು ಆಂದೋಲನವನ್ನು ಕೈಗೊಂಡಿದ್ದು ಅಧಿಕಾರಿಗಳು ಪ್ರತಿ ಗ್ರಾಮ ಪಂಚಾಯಿತಿಗೆ ತೆರಳಿ, ಆ ಮಟ್ಟದಲ್ಲಿ ರೈತರಿಗೆ ಬೆಳೆ ವಿಮೆಯ ಬಗ್ಗೆ ಅರಿವು ಮೂಡಿಸುವ ಹಾಗೂ ತರಬೇತಿ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದಾರೆ ಎಂದರು.

    ರೈತರು ಅವರು ನೀಡಿರುವ ವೇಳಾಪಟ್ಟಿಯಂತೆ ಬೆಳೆ ವಿಮೆ ನೋಂದಣಿ ಮಾಡಿಸಿ ಎಲ್ಲಾ ರೈತರುಗಳು ತಮ್ಮ ಮೊಬೈಲ್ಗಳಲ್ಲಿ ಬೆಳೆಯ ಸಮೀಕ್ಷೆಯನ್ನು ತಾವೇ ಮಾಡಿಕೊಳ್ಳಬಹುದು. ಎಂದು ತಿಳಿಸಿ ಅಧಿಕಾರಿಗಳೊಂದಿಗೆ ಸ್ಪಂದಿಸಿ ಆಂದೋಲನವನ್ನು ಯಶಸ್ವಿಗೊಳಿಸಬೇಕೆಂದು ರೈತರಲ್ಲಿ ಮನವಿ ಮಾಡಿದರು.

    ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ಈ ಸಾಲಿನಲ್ಲಿ ಕಡಿಮೆ ಫಲಿತಾಂಶ ಬಂದಿದ್ದು ಇದರಲ್ಲಿ ಶೇಕಡಾವಾರು ಕಡಿಮೆಯಾಗಿದೆ ಇದರಿಂದ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಿ ಎಂದು ಡಿಡಿಪಿ ಐ. ಸಭೆ ನಡೆಸಿ ಅವರಿಗೆ ಸೂಚನೆ ನೀಡಲಾಗಿದೆ. ಈ ಸಾಲಿನಲ್ಲಿ ಒಳ್ಳೆಯ ಫಲಿತಾಂಶ ಬರುವಂತೆ ಶ್ರಮವಹಿಸಬೇಕು ಎಂದು ತಾಕೀತು ಮಾಡಿದ್ದೇವೆ ಎಂದರು.

    ತಾಲೂಕು ಕಚೇರಿಯ ಕಡತಗಳು ಶೀಘ್ರ ವಿಲೇವಾರಿಯಾಗದೆ ಮತ್ತು ಕೆಲಸಗಳು ತುಂಬಾ ನಿಧಾನವಾಗಿ ನಡೆಯುತ್ತಿರುವುದರಿಂದ ಸಿಬ್ಬಂದಿಗಳಿಗೆ ಚುರುಕು ಮುಟ್ಟಿಸಿ ಈ ರೀತಿ ಆಗದಂತೆ ಎಚ್ಚರಿಕೆ ವಹಿಸಿ ಶೀಘ್ರವಾಗಿ ಕಡೆತಗಳನ್ನು ವಿಲೇವಾರಿ ಮಾಡಿ ರೈತರು ಹಾಗೂ ಸಾರ್ವಜನಿಕರು ಕಚೇರಿಗೆ ಬಂದರೆ ಅವರನ್ನು ಅಲೆಸದಂತೆ ತಾಲೂಕು ಕಚೇರಿಯ ನೌಕರರಿಗೆ ಎಚ್ಚರಿಕೆ ಕೊಟ್ಟರು.
    ಪೌತಿ ಖಾತೆ ವಿಲೇವಾರಿಯ ಬಗ್ಗೆ ಸರಿಯಾದ ವೇಳೆಯಲ್ಲಿ ವಿಲೇವಾರಿ ಮಾಡಿ ಇಲ್ಲವಾದಲ್ಲಿ ನೀವೇ ಜವಾಬ್ದಾರಿಗಳಾಗಿರುತ್ತೀರಿ ಎಂದು ಪೌತಿ ಖಾತೆ ವಿಲೇವಾರಿ ಆಂದೋಲನ ಮಾಡಿ ಸರಿಯಾದ ನಿರ್ವಹಣೆ ಮಾಡಿ ಎಂದು ಕಂದಾಯ ಇಲಾಖೆಯ ಸಿಬ್ಬಂದಿಗಳಿಗೆ ತಾಕೀತು ಮಾಡಿ ಪ್ರತಿ ಗ್ರಾಮ ಪಂಚಾಯತ್ ಪಿಡಿಒ ಹಾಗೂ ವಾಟರ್ ಮ್ಯಾನ್ ಗಳಿಗೆ ಎಲ್ಲಾ ಟ್ಯಾಂಕ್ ಗಳನ್ನು ಸ್ವಚ್ಛವಾಗಿಡಲು ಸೂಚಿಸಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವಂತೆ ಹೇಳಿ ಕುಡಿಯುವ ನೀರಿನ ಬಗ್ಗೆ ದೂರುಗಳು ಬಂದರೆ ನೀವೇ ಜವಾಬ್ದಾರಿಗಳಾಗಿರುತ್ತೀರಿ. ಸಾರ್ವಜನಿಕರಿಗೆ ಸ್ಪಂದಿಸದಿದ್ದಲ್ಲಿ ಶಿಸ್ತುಕ್ರಮ ಜರಗಿಸಲಾಗುವುದು ಎಂದು ಹೇಳಿದರು.

    ಶಾಸಕ ಎಂ.ಟಿ.ಕೃಷ್ಣಪ್ಪನವರು ಮಾತನಾಡಿ, ನಮ್ಮ ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿಗಳು ಕೆಲಸವನ್ನು ಚೆನ್ನಾಗಿ ನಿರ್ವಹಿಸುತ್ತಿದ್ದು ತಮ್ಮ ಹಿರಿಯ ಅಧಿಕಾರಿಗಳ ತಂಡದೊಂದಿಗೆ ತಾಲೂಕಿಗೆ ಬಂದು ರೈತರ ಹಾಗೂ ಸಾರ್ವಜನಿಕರ ಕುಂದು ಕೊರತೆಗಳನ್ನು ಕೇಳಲು ಬಂದಿದ್ದಾರೆ ನಿಮ್ಮ ಯಾವುದೇ ಅಹವಾಲುಗಳಿದ್ದರೂ ಸಹ ಸ್ಥಳದಲ್ಲಿಯೇ ಬಗೆಹರಿಸಿಕೊಳ್ಳಿ ಹಾಗೆ ಕಂದಾಯ ಇಲಾಖೆಯ ನೌಕರರು ರೈತರನ್ನು ಅನವಶ್ಯವಾಗಿ ಕಚೇರಿಗೆ ಆಲಿಸುವುದನ್ನು ನಾನು ನೋಡಿದ್ದೇನೆ ಇದಕ್ಕೆ ನೀವೇ ಜವಾಬ್ದಾರಿಗಳಾಗುತ್ತೀರಿ. ಯಾವುದೇ ಕಾರಣಕ್ಕೂ ಸುಖ ಸುಮ್ಮನೆ ಅವರನ್ನು ಆಲೆಸುವುದನ್ನು ಬಿಟ್ಟು ಸರಿಯಾದ ಸಮಯದಲ್ಲಿ ಕೆಲಸವನ್ನು ನಿರ್ವಹಿಸಿ ಎಂದು ಹೇಳಿದರು.
    ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಮಳಿಗೆಗಳನ್ನು ತೆರೆಯಲಾಗಿತ್ತು ಅದರಲ್ಲಿ ಆರೋಗ್ಯ ಇಲಾಖೆಯು ಸ್ಥಳದಲ್ಲಿಯೇ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಂಡಿತ್ತು.

    ಈ ಸಂದರ್ಭದಲ್ಲಿ ತಹಶೀಲ್ದಾರ್ ವೈ ಎಂ ರೇಣು ಕುಮಾರ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಶಿವರಾಜಯ್ಯ, ಪಟ್ಟಣ ಪಂಚಾಯಿತಿ ಸದಸ್ಯರಾದ ಚಿದಾನಂದ್, ಅಂಜನ್ ಕುಮಾರ್, ಯಜಮಾನ ಮಹೇಶ್, ಎನ್.ಆರ್ ಸುರೇಶ್, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಶ್ರೀನಾಥ್ ಬಾಬು, ಬಿ ಇ ಓ ಸೋಮಶೇಖರ್, ಆಡಿಷನಲ್ ಎಸ್.ಪಿ. ಖಾದರ್ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

    ವರದಿ : ಸುರೇಶ್ ಬಾಬು ಎಂ. ತುರುವೇಕೆರೆ

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ತುರುವೇಕೆರೆ: ರಾಸುಗಳಿಗೆ ವಿಮೆ: ಬಜೆಟ್ ನಲ್ಲಿ 30 ಕೋಟಿ ಮೀಸಲು

    September 25, 2025

    ಸಾಹಿತ್ಯ ಎಲ್ಲರನ್ನು ಆಕರ್ಷಣೆ ಮಾಡುವ ಸಂವೇದನಾಶೀಲ ಕ್ಷೇತ್ರ: ಬರಗೂರು ರಾಮಚಂದ್ರಪ್ಪ

    September 23, 2025

    ಟೀಕೆ ಟಿಪ್ಪಣಿಗಳಿದ್ದರೂ ಗ್ಯಾರೆಂಟಿ ಯೋಜನೆಗಳಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    September 11, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025

    ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಶನಿವಾರ ಮಹರ್ಷಿ ವಾಲ್ಮೀಕಿ ವಿಗ್ರಹ ಅನಾವರಣ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಮಾಜಿ ಸಚಿವರು, ಜನಪ್ರತಿನಿಧಿಗಳು…

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025

    ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ

    September 27, 2025

    ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ

    September 27, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.