nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
    • ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
    • ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
    • ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
    • ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
    • ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
    • ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
    • ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಗವಿಕಲತೆ ಎಂಬುದು ಸಾಧನೆಗೆ ಅಡ್ಡಿಯಾಗುವುದಿಲ್ಲ: ಬಿ. ಆನಂದ್‌ಕುಮಾರ್
    ತಾಲೂಕು ಸುದ್ದಿ December 30, 2021

    ಅಂಗವಿಕಲತೆ ಎಂಬುದು ಸಾಧನೆಗೆ ಅಡ್ಡಿಯಾಗುವುದಿಲ್ಲ: ಬಿ. ಆನಂದ್‌ಕುಮಾರ್

    By adminDecember 30, 2021No Comments2 Mins Read
    saraguru

    ಸರಗೂರು: ಅಂಗವಿಕಲತೆ ಎಂಬುದು ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂದು ಅಂತಾರಾಷ್ಟ್ರೀಯ ಪ್ಯಾರಾ ಬ್ಯಾಡ್ಮಿಂಟನ್ ಚಾಂಪಿಯನ್  ಬಿ. ನಂದ್‌ಕುಮಾರ್ ಅವರು ಹೇಳಿದರು.

    ಇಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಂಭಾಗ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಹಾಗೂ ಸಮುದಾಯದ ಸಂಘ-ಸಂಸ್ಥೆಗಳ ಸಹಭಾಗಿತ್ವದೊಂದಿಗೆ ವಿಶೇಷ ಚೇತನ ವ್ಯಕ್ತಿಗಳ ನಾಯಕತ್ವ ಮತ್ತು ಭಾಗವಹಿಸುವಿಕೆ ಎಂಬ ಘೋಷ ವಾಕ್ಯದೊಂದಿಗೆ ಅಂತರರಾಷ್ಟ್ರೀಯ ವಿಶೇಷಚೇತನರ ದಿನಾಚರಣೆಯನ್ನು ಆಚರಿಸಲಾಯಿತು.

    ಬಳಿಕ ಮಾತನಾಡಿದ ಅಂತರಾಷ್ಟ್ರೀಯ ಪ್ಯಾರಾ ಬ್ಯಾಡ್ಮಿಂಟನ್ ಚಾಂಪಿಯನ್ ಬಿ.ಆನಂದ್‌ಕುಮಾರ್ ಅವರು,  ಅಂಗವಿಕಲತೆ ಎಂಬುದು ಕೇವಲ ಶಾಪವಲ್ಲ, ಅದೊಂದು ದೇವರ ವರ.  ಅಂಗವಿಕಲತೆ ಬಗ್ಗೆ ಯೋಚನೆ ಮಾಡುವುದನ್ನು ಬಿಟ್ಟು ಸಮಾಜದಲ್ಲಿ ಗುರುತಿಸಿಕೊಳ್ಳುವಂತಹ ಕೆಲಸಗಳನ್ನು ಮಾಡಬೇಕು ಎಂದರು.

    ಗ್ರಾಮೀಣ ಮಟ್ಟದಲ್ಲಿ ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವಂತಹ ಅಂಗವಿಕಲ ಯುವಕರುಗಳಿಗೆ, ಮುಂದಿನ ದಿನಗಳಲ್ಲಿ ಕ್ರೀಡಾ ತರಬೇತಿಯನ್ನು ನೀಡಲಾಗುವುದು. ಹಾಗೂ ಯಾವುದೇ ಕಾರಣಕ್ಕೂ ಗುರಿ ತಲುಪುವ ವರೆಗೂ ಯುವಕರು ಕುಗ್ಗ ಬೇಡಿ, ಎಂದು ಧೈರ್ಯ ತುಂಬಿದರು.

    ನಂತರ ವಡುವಲು ವಿರಕ್ತ ಮಠದ ಮಠಾಧ್ಯಕ್ಷರಾದ ಶ್ರೀ ಶ್ರೀ ಮಹಾದೇವಸ್ವಾಮಿಗಳು ಮಾತನಾಡಿ, ವಿಶೇಷಚೇತನರಿಗೆ ಅನುಕಂಪ ತೋರಿಸುವ ಬದಲು ಅವಕಾಶಗಳನ್ನು ನೀಡಿ, ಇವರನ್ನು ಸಮಾಜದ ಮುಖ್ಯವಾಹಿನಿಗೆ ತರುವಂತಹ ಕೆಲಸಗಳನ್ನು ಇಂದು ಮಾಡಬೇಕಿದೆ ಎಂದರು.

    ವಿಶೇಷಚೇತನರಿಗೆ ಸರ್ಕಾರದಿಂದ ಹಲವಾರು ಯೋಜನೆಗಳು ಬರುತ್ತಿವೆ. ಇವುಗಳನ್ನು ವಿಶೇಷಚೇತನರು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಹೇಳಿದರು.

    ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ವಿಶೇಷಚೇತನರಿಗೆ ವಿಶೇಷ ಕಾಳಜಿ ವಹಿಸಿ, ಸಮಾಜದಲ್ಲಿ ಗುರುತಿಸುವಂತಹ ಕೆಲಸಗಳನ್ನು ಮಾಡುತ್ತಿದೆ. ಇಂತಹ ಕೆಲಸಗಳು ಇನ್ನೂ ಹೆಚ್ಚಿನ ರೀತಿಯಲ್ಲಿ ನಡೆಯಲ್ಲಿ ಎಂದು ಆಶಿಸಿದ್ದರು.

    ಇದೇ ಸಂಧರ್ಭದಲ್ಲಿ ಮುಳ್ಳೂರು ಗ್ರಾಮದ ಮಹದೇವಪ್ಪ ಅವರು ಬಸ್ ಪಾಸ್‌ಗಾಗಿ ವಿಶೇಷಚೇತನರನ್ನು ಅಲೆದಾಡಿಸುವುದು ಬೇಡ. ವಿಶೇಷಚೇತನರಿಗೆ ಜನವರಿ ತಿಂಗಳಲ್ಲಿ ದಯವಿಟ್ಟು ಬಸ್ ಪಾಸ್ ನೀಡಬೇಕು ಎಂದು ಆಗ್ರಹಿಸಿದರು.

    ಅಂತರಾಷ್ಟ್ರೀಯ ಪ್ಯಾರಾ ಬ್ಯಾಡ್ಮಿಂಟನ್ ಚಾಂಪಿಯನ್  ಬಿ.ಆನಂದ್‌ ಕುಮಾರ್ ಅವರನ್ನು ಸನ್ಮಾನಿಸಿ. ಹೈರಿಗೆ ಗ್ರಾಮದ ವಿಕಲಚೇತನರಿಂದ ಉತ್ಪಾದಿಸಲಾದ ಸ್ಯಾನಿಟೈಸರ್ ಹಾಗೂ ಇನ್ನಿತರರ ಉತ್ಪನ್ನಗಳಿಗೆ ಚಾಲನೆ ನೀಡಿದರು.

    ಇದೇ ವೇಳೆ ತಹಶೀಲ್ದಾರ್ ಚೆಲುವರಾಜು, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಚಂದ್ರಕಾಂತ್, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸತೀಶ್, ಮೂಳೆ ಮತ್ತು ಕೀಲು ರೋಗ ಶಸ್ತ್ರ ಚಿಕಿತ್ಸಾ ತಜ್ಞರಾದ ಡಾ.ಎಂ ಆರ್.ಸೀತಾರಾಂ ಹಾಗೂ ಇನ್ನಿತರರು ಇದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ

    October 11, 2025

    ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?

    October 11, 2025

    131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!

    October 11, 2025

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಲಿಂಗದಹಳ್ಳಿಯಲ್ಲಿ ಮಾದಕ ದ್ರವ್ಯ ದುಷ್ಪರಿಣಾಮಗಳ ಜಾಗೃತಿ ಕಾರ್ಯಕ್ರಮ ಪಾವಗಡ: ಪಿಯುಸಿ ಹಂತವು ವಿದ್ಯಾರ್ಥಿಗಳ ಬದುಕಿನ ಅತ್ಯಂತ ಮಹತ್ವದ ಘಟ್ಟವಾಗಿದೆ. ಈ…

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026

    ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ

    July 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.