nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ

    January 19, 2026

    ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!

    January 19, 2026

    ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ

    January 19, 2026
    Facebook Twitter Instagram
    ಟ್ರೆಂಡಿಂಗ್
    • ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ
    • ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!
    • ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ
    • ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ
    • ‘ಸೇ ನೋ ಡ್ರಗ್ಸ್ — ಯಸ್ ಟೂ ಸ್ಪೋರ್ಟ್ಸ್: ಫೆ.1 ರಂದು 2ನೇ ತುಮಕೂರು ಮ್ಯಾರಥಾನ್
    • ಶಿಕ್ಷಣದ ಜೊತೆಗೆ ಕಲೆಗೆ ಮಹತ್ವ ನೀಡಿದಾಗಲೇ ಸಂಪೂರ್ಣ ವ್ಯಕ್ತಿತ್ವ ನಿರ್ಮಾಣ
    • ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ
    • ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಪ್ಪು ಮಾಡಿದವರ ರಕ್ಷಣೆಗೆ ಸರ್ಕಾರ ನಿಂತಿಲ್ಲ: ಗೃಹ ಸಚಿವ ಪರಮೇಶ್ವರ
    ರಾಜ್ಯ ಸುದ್ದಿ July 1, 2024

    ತಪ್ಪು ಮಾಡಿದವರ ರಕ್ಷಣೆಗೆ ಸರ್ಕಾರ ನಿಂತಿಲ್ಲ: ಗೃಹ ಸಚಿವ ಪರಮೇಶ್ವರ

    By adminJuly 1, 2024No Comments2 Mins Read
    dr g paramewsher

    ಬೆಂಗಳೂರು : ದೇಶದಲ್ಲಿ ಜಾರಿಯಾಗಿರುವ ಮೂರು ಹೊಸ ಅಪರಾಧ ಕಾನೂನುಗಳ ಪರಿಣಾಮದ ಬಗ್ಗೆ ಈಗಲೇ ಹೇಳಲು ಬರುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

    ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನಿಂದ ದಾಖಲಾಗುವ ಪ್ರಕರಣಗಳಿಗೆ ಹೊಸ ಕಾನೂನುಗಳು ಅನ್ವಯವಾಗಲಿವೆ. ಹೊಸ ಕಾಯ್ದೆಗಳ ಸಕ್ಸಸ್ ಅಥವಾ ಫೇಲ್ಯೂರ್ ಈಗಲೇ ಗೊತ್ತಾಗುವುದಿಲ್ಲ. ಪ್ರಕರಣಗಳು ದಾಖಲಾದ ಬಳಿಕ ಕೋರ್ಟ್‌ನಲ್ಲಿ ಯಾವ ರೀತಿ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡಬೇಕು. ಇಡೀ ದೇಶದಲ್ಲಿ ಜಾರಿ ಮಾಡಿರುವುದರಿಂದ ಎಲ್ಲ ಕಡೆ ಈ ಬಗ್ಗೆ ಪ್ರತಿಕ್ರಿಯೆ ಬರಬೇಕು. ಸರ್ಕಾರ ಕೆಲ ಪರಿಷ್ಕರಣೆ ಮಾಡಬಹುದು ಎಂದು ಹೇಳಿದರು.


    Provided by
    Provided by

    ಹೊಸ ಕಾನೂನುಗಳ ಬಗ್ಗೆ ಇಲಾಖೆಯ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದೆ. ಪೊಲೀಸರಿಗಾಗಿ ಹೊಸದಾಗಿ ಮೊಬೈಲ್ ಅಪ್ಲಿಕೇಷನ್ ಸಿದ್ಧಪಡಿಸಲಾಗಿದೆ. ಪೊಲೀಸರಿಗೆ ಹೊಂದಿಕೆ ಆಗೋವರೆಗೂ ಈ ಆ್ಯಪ್ ನೋಡಿಕೊಂಡು ಕೆಲಸ ಮಾಡಲು ಸಹಾಯವಾಗಲಿದೆ ಎಂದರು.

    ಕಾನ್ ಸ್ಟೇಬಲ್ ಗಳ ಅಂತರ ಜಿಲ್ಲಾ ವರ್ಗಾವಣೆಗೆ ನಿಯಮಗಳನ್ನು ರೂಪಿಸಲಾಗುತ್ತಿದೆ. ಈವರೆಗೆ ನಿಯಮಗಳಿರಲಿಲ್ಲ. ಪತಿ-ಪತ್ನಿ ವರ್ಗಾವಣೆಯನ್ನು ಮಾಡಲಾಗುವುದು. ಈ ಕುರಿತು ಪೊಲೀಸ್ ಮಹಾನಿರ್ದೇಶಕರೊಂದಿಗೆ ಚರ್ಚಿಸಿದ್ದೇನೆ. ಅಂತರ ಜಿಲ್ಲಾ ವರ್ಗಾವಣೆ ಸಮಸ್ಯೆಯನ್ನು ಶೀಘ್ರವಾಗಿ ಬಗೆ ಹರಿಸಲಾಗುವುದು ಎಂದು ತಿಳಿಸಿದರು.

    ದರ್ಶನ್ ಪ್ರಕರಕ್ಕೆ ತೋರಿಸಿರುವ ಆಸಕ್ತಿ ವಾಲ್ಮಿಕಿ ನಿಗಮದ ಅಕ್ರಮದ ಪ್ರಕರಣಕ್ಕೆ ನೀಡುತ್ತಿಲ್ಲ ಎಂಬ ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯಿಸಿ, ತಪ್ಪು ಮಾಡಿದವರ ರಕ್ಷಣೆಗೆ ಸರ್ಕಾರ ನಿಂತಿಲ್ಲ. ತಪ್ಪು ಮಾಡಿದವರು ಯಾರೇ ಆಗಿದ್ದರೂ ಕಾನೂನು ಪ್ರಕಾರ ಕ್ರಮ ಜರುಗಲಿದೆ. ಅಧಿಕಾರಿಗಳು ಆಗಿರಬಹುದು ಅಥವಾ ರಾಜಕೀಯ ವ್ಯಕ್ತಿಗಳು ಇರಬಹುದು, ಯಾರೇ ಇದ್ದರೂ ಕ್ರಮ ಜರುಗಿಸುವುದು ಖಚಿತ ಎಂದರು.

    ಈ ಪ್ರಕರಣದಲ್ಲಿ ಸಿಬಿಐನವರು ಬ್ಯಾಂಕ್ ಅಧಿಕಾರಿಗಳ ವಂಚನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ. ಇಲಾಖೆಯಲ್ಲಿನ ವಂಚನೆಯ ಕುರಿತು ಎಸ್ಐಟಿ ತನಿಖೆ ನಡೆಸುತ್ತಿದೆ. ಬಿಜೆಪಿಯವರು ಪ್ರತಿಭಟನೆ ಮಾಡಲಿ. ಸಿಎಂ ಮನೆಗರ ಮುತ್ತಿಗೆ ಹಾಕಲಿ ಯಾರು ಬೇಡ ಅನ್ನುತ್ತಾರೆ. ತನಿಖೆ ವೇಳೆ ಸಚಿವರು, ಶಾಸಕರ ಮೇಲೆ ಆರೋಪಗಳನ್ನು ಮಾಡುವುದು ಸಹಜ. ತನಿಖೆಯ ವರದಿ ಆಧಾರದ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

    ಸರ್ಕಾರದ ಭವಿಷ್ಯದ ಕುರಿತು ಸಿ.ಟಿ.ರವಿ, ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಅವರು, ಅವರವರ ವ್ಯಾಖ್ಯಾನಗಳು ಅವು. ಅವರಲ್ಲೇ ಅವರ ಹೇಳಿಕೆಗಳು ವಿಭಿನ್ನವಾಗಿವೆ. ಬೊಮ್ಮಾಯಿ ಒಂದು ಹೇಳಿಕೆ ಕೊಟ್ಟರೆ, ಸಿ.ಟಿ.ರವಿ ಇನ್ನೊಂದು ಹೇಳಿಕೆ ಕೊಡುತ್ತಾರೆ. ಅವರಲ್ಲಿ ಹೊಂದಾಣಿಕೆ ಇಲ್ಲ. ಸರ್ಕಾರ ಅಭಿವೃದ್ಧಿಯನ್ನು ಮರೆತಿಲ್ಲ. ಜನರಿಗೆ ಕೊಟ್ಟ ಮಾತನ್ನು ಮರೆತಿಲ್ಲ. ಗ್ಯಾರಂಟಿ ಯೋಜನೆಗಳ ಜೊತೆ ಎಲ್ಲ ಕೆಲಸಗಳನ್ನು ಮಾಡುತ್ತಿದ್ದೇವೆ. ಯಾವ ಅಭಿವೃದ್ಧಿ ಕಾರ್ಯಗಳು ನಿಂತಿಲ್ಲ ಎಂದರು.

    ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟದ ಕುರಿತು ಪ್ರತಿಕ್ರಿಯಿಸಿ, ಹೋರಾಟದ ಉದ್ದೇಶಗಳು ಸರಿಯಿದ್ದರೆ ಸರ್ಕಾರ ಗಮನಿಸುತ್ತದೆ. ಕಾನೂನು ಸುವ್ಯವಸ್ಥೆ ಯಾರು ಸಹ ಕೈಗೆತ್ತಿಕೊಳ್ಳಬಾರದು ಎಂದು ಹೇಳಿದರು.

    ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ:

    https://chat.whatsapp.com/JItjEWZ9e5fBWDL6CkTr97

    admin
    • Website

    Related Posts

    ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!

    January 19, 2026

    ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ

    January 17, 2026

    ಮುಂದಿನ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಕಟ್ಟುನಿಟ್ಟು: ಸಿಎಂ ಸಿದ್ದರಾಮಯ್ಯ ಸುಳಿವು

    January 17, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ

    January 19, 2026

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಐತಿಹಾಸಿಕ ಇತಿಹಾಸ ಪ್ರಸಿದ್ಧ ಶ್ರೀಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ರಥೋತ್ಸವಕ್ಕೂ ಮೊದಲು ಮಕರ ಸಂಕ್ರಾತಿ…

    ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!

    January 19, 2026

    ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ

    January 19, 2026

    ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ

    January 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.