ಲೋಕಸಭಾ ಚುನಾವಣೆಯಲ್ಲಿ ನಮಗೆ ಸೋಲಾಗಲು ಪ್ರಧಾನಿ ಮೋದಿಯವರ ಮೇಲಿನ ನಮ್ಮ ಅತಿಯಾದ ಆತ್ಮ ವಿಶ್ವಾಸ ಹಾಗೂ ಕಾರ್ಯಕರ್ತರ ಕಡಗಣನೆಯೇ ಕಾರಣ ಎಂದು ಮಾಜಿ ಸಿಎಂ ಡಿ.ವಿ ಸದಾನಂದಗೌಡ ಅಭಿಪ್ರಾಯಪಟ್ಟಿದ್ದಾರೆ.
ನಾವು ವಿಧಾನಸಭಾ ಫಲಿತಾಂಶದ ಹಿನ್ನೆಡೆಯನ್ನು ಗಂಭೀರವಾಗಿ ಪರಿಗಣಿಸಬೇಕಿತ್ತು. ಕಾರ್ಯಕರ್ತರನ್ನು ಉತ್ತೇಜಿಸಿ ಚುನಾವಣೆ ಮಾಡುವ ಕೆಲಸ ಆಗಲಿಲ್ಲ. ಮೋದಿ ಹೆಸರಿನಲ್ಲಿ ಅತಿಯಾದ ಆತ್ಮವಿಶ್ವಾಸ ಬಿಜೆಪಿ 8 ಸೀಟ್ ಕಳೆದುಕೊಳ್ಳಲು ಕಾರಣವಾಯಿತು ಎಂದು ಅವರು ಹೇಳಿದ್ದಾರೆ.
ಅಲ್ಲದೆ ಕಾಂಗ್ರೆಸ್ ಪವರ್ ಫುಲ್ ಆಗಿ ಕಾರ್ಯಾಚರಣೆಗೆ ಇಳಿದಿದೆ ಎಂಬುದನ್ನು ಊಹಿಸಲು ನಮ್ಮ ರಾಜ್ಯದ ಸಂಘಟನೆ ವಿಫಲವಾಯಿತು. ಜೆಡಿಎಸ್ ಜೊತೆಗಿದ್ದ ಕಾರಣಕ್ಕೆ ಹಳೇ ಮೈಸೂರು ಕಡೆ ನಮಗೆ ಗೆಲುವಾಗಿದೆ ಎಂದು ಜನ ಮಾತಾಡಲು ಆರಂಭಿಸಿದ್ದು ಬಿಜೆಪಿಗೆ ಸವಾಲಾಗಿದೆ ಎಂಬುದನ್ನೂ ಅವರು ಎಚ್ಚರಿಸಿದ್ದಾರೆ.
ಇಷ್ಟೇ ಅಲ್ಲದೆ ರಾಜ್ಯ ನಾಯಕರ ವಿರುದ್ಧ ಸಿಡಿದೆದ್ದ ಅವರು ವಿಪಕ್ಷ ನಾಯಕ ಆರ್.ಅಶೋಕ್ಗೆ ಅಧ್ಯಯನದ ಕೊರತೆ ಇದೆ. ಸದನಕ್ಕೆ ಅಧ್ಯಯನ ಮಾಡಿ ಬರಬೇಕು. ಅಂಕಿ ಅಂಶಗಳ ಬಗ್ಗೆ ಮಾಹಿತಿ ಇರಬೇಕು. ವಿಪಕ್ಷ ನಾಯಕ ಅಂದರೆ ಬರಿ ಜಗಳ ಮಾಡುವುದಲ್ಲ. ಭಾರೀ ಅಧ್ಯಯನದ ಅಗತ್ಯ ಇದೆ. ಬರೀ ಓಡಾಟದಿಂದ ಪಕ್ಷದ ನಾಯಕನಾಗಿ ಬೆಳವಣಿಗೆ ಆಗಬಹುದು, ವಿಪಕ್ಷ ನಾಯಕನಾಗಿ ಬೆಳೆಯಲು ಸಾಧ್ಯವಿಲ್ಲ ಎಂದಿದ್ದಾರೆ.
ಅಲ್ಲದೆ ಲೋಕಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿ ಅಭ್ಯರ್ಥಿಗಳ ಸೋಲಿಗೆ ಕಾರಣವಾದವರ ವಿರುದ್ಧ ಶಿಸ್ತು ಕ್ರಮ ಆಗಬೇಕು. ನಾನು ಅಧ್ಯಕ್ಷನಾಗಿದ್ದಾಗ ರೆಡ್ಡಿ ವಿರುದ್ಧ, ಯತ್ನಾಳ್ ವಿರುದ್ಧ, ರೇಣುಕಾಚಾರ್ಯ ವಿರುದ್ಧ ಪಕ್ಷ ವಿರೋಧಿ ಆರೋಪದ ಮೇಲೆ ಕ್ರಮ ತಗೊಂಡಿದ್ದೆ. ಈಗ ಈ ರೀತಿಯ ಕ್ರಮ ಆಗ್ತಿಲ್ಲ. ಇದರ ಬಗ್ಗೆ ನಾನು ರಾಜ್ಯಾಧ್ಯಕ್ಷ ವಿಜಯೇಂದ್ರ ಬಳಿ ಮಾತಾಡಿದ್ದೇನೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


