nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ

    July 22, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ
    • ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ
    • ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ
    • ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ
    • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನೆ ಪಡೆಯಲು ತೋಟಗಾರಿಕೆ ಇಲಾಖೆ ಮನವಿ
    • 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
    • ತುಮಕೂರು: ಗಾಂಜಾ ಸಾಗಣೆ: ಅಪರಾಧಿಗೆ 4 ವರ್ಷ ಕಠಿಣ ಶಿಕ್ಷೆ; ದಂಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರಪ್ಪನ ಅಗ್ರಹಾರ: ದುರುಪಯೋಗ ತಡೆಗಟ್ಟಲು ಹೈರೆಸ್ಯೂಲೆಷನ್ ಜಾಮರ್‌ ಅಳವಡಿಕೆ: ಗೃಹ ಸಚಿವ ಪರಮೇಶ್ವರ
    ರಾಜ್ಯ ಸುದ್ದಿ July 9, 2024

    ಪರಪ್ಪನ ಅಗ್ರಹಾರ: ದುರುಪಯೋಗ ತಡೆಗಟ್ಟಲು ಹೈರೆಸ್ಯೂಲೆಷನ್ ಜಾಮರ್‌ ಅಳವಡಿಕೆ: ಗೃಹ ಸಚಿವ ಪರಮೇಶ್ವರ

    By adminJuly 9, 2024No Comments2 Mins Read
    g parameshwar

    ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೈರೆಸ್ಯೂಲೇಷನ್ ಜಾಮರ್‌ಗಳನ್ನು ಅಳವಡಿಸಿದ್ದರಿಂದ ನೆರೆಹೊರೆಯ ನಿವಾಸಿಗಳಿಗೆ ತೊಂದರೆಯಾಗಿದ್ದು, ಇದನ್ನು ನಿವಾರಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.

    ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ರಾಷ್ಟ್ರಪತಿಗಳ ಸುಧರಣಾ ಸೇವೆ ಪದಕ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರಧಾನ ಮತ್ತು ಸನ್ನಡತೆಯ ಶಿಕ್ಷಾ ಬಂಧಿಗಳ ಅವಧಿಪೂರ್ವ ಬಿಡುಗಡೆ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

    ಈ ಹಿಂದೆ ಜೈಲಿನ ಒಳಗೆ ಫೋನ್ ತಂದುಕೊಡುತ್ತಾರೆ. ಕೈದಿಗಳು ಹೊರಗಿನವರ ಜೊತೆ ಸಂಪರ್ಕ ಮಾಡುತ್ತಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಜೈಲಿನಲ್ಲಿ ಬೇರೆ ರಾಜ್ಯದ ಕೈದಿಗಳು ಇದ್ದಾರೆ. ಇಂತಹ ಸಂದರ್ಭದಲ್ಲಿ ಜಾಮರ್ ಅಳವಡಿಸುವುದರಿಂದ ಅಕ್ರಮಗಳನ್ನು ತಡೆಗಟ್ಟಬಹುದು ಎಂದರು.

    ಹೈ ರೆಸ್ಯೂಲ್ಯೂಷನ್ ಜಾಮರ್ ಹಾಕಿರುವುದರಿಂದ ಸುಮಾರು 800 ಮೀಟರ್ ವ್ಯಾಪ್ತಿಯವರೆಗೂ ಕಾರ್ಯನಿರ್ವಹಿಸುತ್ತದೆ. ಸ್ವಾಭಾವಿಕವಾಗಿ ಕಾಂಪೌಂಡ್‌ನಿಂದ ಹೊರಗು ವ್ಯಾಪಿಸಿರುವುದರಿಂದ ಜನರಿಗೆ ತೊಂದರೆಯಾಗಿತ್ತು‌. ಜಾಮರ್ ಕಾರ್ಯನಿರ್ವಹಣೆಯ ವ್ಯಾಪ್ತಿಯನ್ನು 100 ಮೀಟರ್‌ಗೆ ಇಳಿಸಲಾಗಿದೆ.  ಜಾಮರ್‌ಗಳನ್ನು ತೆಗೆಯುವುದಿಲ್ಲ ಎಂದು ತಿಳಿಸಿದರು‌.

    ಇಲಾಖೆಯಲ್ಲಿ ಬದಲಾವಣೆಯನ್ನು ತರಲು ಹೆಚ್ಚು ಪ್ರೋತ್ಸಾಹ ನೀಡಲಾಗುತ್ತಿದೆ. ಸನ್ನಡತೆಯ ಬಿಡುಗಡೆ ಹೊಂದಿರುವ ಸತೀಶ್ ಎಂಬಾತ ‘ತಾನು ಕಾನೂನು ಡಿಪ್ಲೋಮಾ ಮುಗಿಸಿದ್ದೇನೆ. ಹೊರಗಡೆ ಹೋದಾಗ ಜೀವನಕ್ಕೆ ಉಪಯೋಗವಾಗುತ್ತದೆ’ ಎಂದು ಹೇಳಿದ್ದಾನೆ. ಬಹಳ ಜನ ಪರಿವರ್ತನೆ ಹೊಂದಲು ಇಂತಹ ಅವಕಾಶ ಕಲ್ಪಿಸಿಕೊಡುತ್ತೇವೆ. ಕಾರ್ಪೆಂಟರ್, ಎಲೆಕ್ಟ್ರಿಕ್ ಕೆಲಸ, ಕಂಪ್ಯೂಟರ್ ತರಬೇತಿ ಕಲಿಸಿಕೊಡುತ್ತೇವೆ. ಕೈದಿಗಳು ಬದಲಾವಣೆ ಹೊಂದಲು ಅವಕಾಶವಾಗುತ್ತದೆ ಎಂದು ಹೇಳಿದರು‌.

    ನಟ ದರ್ಶನ್‌ಗೆ ರಾಜಾತೀಥ್ಯ ಸಿಗುತ್ತಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು ಜೈಲಿನ ಒಳಗೆ ನೇರವಾಗಿ ಬರಲು ನನಗೆ ಅವಕಾಶವಿಲ್ಲ. ಊಟ ಉಪಚಾರ ವಿಚಾರದಲ್ಲಿ ಬೇರೆ ರೀತಿ ಅತೀಥ್ಯ ನೀಡಿಲ್ಲ. ಜೈಲಿನಲ್ಲಿರುವ ಎಲ್ಲರಂತೆಯೇ ದರ್ಶನ್‌ಗೆ ವ್ಯವಸ್ಥೆ ಇದೆ. ಬಿರಿಯಾನಿ ಕೊಟ್ಟರು ಎಂದು ಕೆಲವರು ಆರೋಪಿಸಿದ್ದಾರೆ. ಅಂತಹ ಯಾವುದೇ ಘಟನೆ ನಡೆದಿಲ್ಲ‌ ಎಂದು ಸ್ಪಷ್ಟಪಡಿಸಿದರು.

    ಕೆಳಹಂತದ ಅಧಿಕಾರಿಗಳು ಹಲವು ವರ್ಷಗಳಿಂದ ಠಿಕಾಣಿ ಹೂಡಿದ್ದಾರೆ. ಅಂತವರು ಅಕ್ರಮಗಳಿಗೆ ಕೈಜೋಡಿಸುತ್ತಿದ್ದಾರೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಇದೆಲ್ಲವು ನನ್ನ ಗಮನಕ್ಕೆ ಇದೆ. ಬೇರೆಡೆ ವರ್ಗಾವಣೆಯಾದವರು ಮತ್ತೇ ಅದೇ ಸ್ಥಳಕ್ಕೆ ಮರು ವರ್ಗಾವಣೆಯಾಗಿಲ್ಲ. ನಾನೇ ವರ್ಗಾವಣೆ ಮಾಡುವುದರಿಂದ, ಅಂತಹ ಒಂದು ನಿದರ್ಶನವನ್ನು ತೋರಿಸಿ. ಇದು ಸಾಧ್ಯವೇ ಇಲ್ಲ. ಇಲಾಖೆಯಲ್ಲಿ ಮತ್ತಷ್ಟು ಸುಧಾರಣೆ ತರಲು ಕೆಲವು ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026

    ತುಮಕೂರು: ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಗಂಗಹನುಮಯ್ಯ ಅವರ ಧರ್ಮಪತ್ನಿ, ಹಿರಿಯ ಪತ್ರಕರ್ತೆ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ…

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ

    July 22, 2026

    ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ

    July 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.