ಪಾವಗಡ: ತಾಲೂಕಿನ ಎಲ್ಲಾ ಗ್ರಾಮಗಳಿಗೂ ಸಾರಿಗೆ ಬಸ್ ಗಳು ಸಂಚರಿಸಬೇಕೆಂದು ಪಾವಗಡ ಶಾಸಕ ಎಚ್.ವಿ.ವೆಂಕಟೇಶ್ ಕೆಎಸ್ ಆರ್ ಟಿಸಿ ಅಧಿಕಾರಿ ಹನುಮಂತರಾಯಪ್ಪ ಅವರಿಗೆ ಸೂಚಿಸಿದ್ದಾರೆ.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಒಂದನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರು ನಗರಗಳಿಗೆ ಸಂಚರಿಸಲು ಸುಗಮ ಸಂಪರ್ಕ ಸಂಚಾರದ ವ್ಯವಸ್ಥೆಗೆ ಒತ್ತು ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು, ಈಗಾಗಲೇ ಸಾರಿಗೆ ಸಚಿವರಿಗೆ ಪಾವಗಡ ಡಿಪೋವನ್ನು ತುಮಕೂರು ವಿಭಾಗಕ್ಕೆ ವರ್ಗಾಯಿಸಲು ಪತ್ರ ನೀಡಲಾಗಿದೆ ಮತ್ತು ಅಧಿಕಾರಿಗಳು ತಿಳಿಸಿದ ಹಾಗೆ ಸಿಬ್ಬಂದಿ ಕೊರತೆ ಮತ್ತು ಹೆಚ್ಚುವರಿ ಬಸ್ಗಳು ವ್ಯವಸ್ಥೆಗೆ ಸಂಬಂಧಪಟ್ಟಂತೆ ನಿಗಮದ ಅಧ್ಯಕ್ಷರು ಹಾಗೂ ಸಚಿವರ ಜೊತೆ ಚರ್ಚಿಸಲಾಗುವುದು ಎಂದರು .
ಪೋಲಿಸ್ ಇಲಾಖೆಯವರು ಹೆಚ್ಚಿನ ಪ್ರಮಾಣದಲ್ಲಿ ಕಾನೂನು ಆಸ್ತಿ ವ್ಯವಸ್ಥೆಯನ್ನು ರಕ್ಷಿಸಬಯಬೇಕು ಪಟ್ಟಣದಲ್ಲಿ ಹಾಡ ಹಗಲೇ ಕಳ್ಳತನ ಆಗುತ್ತಿದ್ದು ಯಾವ ಕ್ರಮ ಕೈಗೊಳ್ಳುತ್ತಿದ್ದೀರಾ ಎಂದು ಪ್ರಶ್ನಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಯ ಪ್ರಗತಿಯ ಬಗ್ಗೆ ಶಾಸಕರಿಗೆ ಮಾಹಿತಿ ನೀಡಿದರು
ಈ ವೇಳೆ ಕಾರ್ಯನಿರ್ವಾಹಕ ಅಧಿಕಾರಿ ಜಾನಕಿ ರಾಮ್, ದಂಡಾಧಿಕಾರಿ ವರದರಾಜು, ಪಿ ಡಬ್ಲ್ಯೂ ಡಿ AEE ಅನಿಲ್ ,ಜಿ.ಪಂ ಕಿರು ನೀರು ಸರಬರಾಜು ಇಲಾಖೆಯ AEE ಹನುಮಂತಯ್ಯ ,ಜಿ.ಪಂ AEE ಸುರೇಶ್,ತಾಲ್ಲೂಕು ಅಬಕಾರಿ ನಿರೀಕ್ಷಕರು ಮೈಕಲ್ ಜಾರ್ಜ್, ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಾಣಮ್ಮ , ಆರೋಗ್ಯಾಧಿಕಾರಿ ಡಾ. ಕಿರಣ್,ಕೃಷಿ ಸಹಾಯಕ ನಿರ್ದೇಶಕ ಅಜಯ್, ಸಾರಿಗೆ ವ್ಯವಸ್ಥಾಪಕ ಹನುಮಂತರಾಯಪ್ಪ, ಯೋಜನಾಧಿಕಾರಿ ಮಲ್ಲಿಕಾರ್ಜುನ್, ಸಮಾಜ ಕಲ್ಯಾಣ ಅಧಿಕಾರಿ ಮಲ್ಲಿಕಾರ್ಜುನ್, ಎಸ್ ಟಿ ಅಧಿಕಾರಿ ಯಮುನಾ, ಸಿಡಿಪಿಓ ಸುನಿತಾ, ಸಬ್ ಇನ್ಸ್ಪೆಕ್ಟರ್ ಗುರುನಾಥ್, ರಾಜೇಂದ್ರ, ಲೇಬರ್ ಇನ್ಸ್ಪೆಕ್ಟರ್ ಹರೀಶ್, ಸೇರಿ ಇನ್ನೂ ಮುಂತಾದ ಇಲಾಖೆಗಳ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA