ಮುಡಾ ಹಗರಣ ದಿನೇ ದಿನೇ ಸಿಎಂ ಸಿದ್ದರಾಮಯ್ಯಗೆ ಕಂಟಕವಾಗುತ್ತಿದೆ, ಇದೀಗ ಈ ಕುರಿತು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಕಲಿ ದಾಖಲೆ ಸೃಷ್ಟಿ ಮಾಡಿ ವಂಚಿಸಿ ಕೋಟ್ಯಂತರ ಬೆಲೆಯ ನಿವೇಶನ ಪಡೆದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂ ಮಾಲೀಕ ಎಂದು ಹೇಳುವ ದೇವರಾಜು ಹಾಗೂ ಕುಟುಂಬದವರ ವಿರುದ್ಧ ದೂರು ದಾಖಲಾಗಿದೆ.
ಇದೇ ಪ್ರಕರಣದಲ್ಲಿ ಜಿಲ್ಲಾಧಿಕಾರಿ, ತಹಸೀಲ್ದಾರ್, ಉಪ ನೊಂದಣಾಧಿಕಾರಿ ಹಾಗೂ ಮುಡಾ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆಯೂ ದೂರು ದಾಖಲಾಗಿದೆ.
ಸಾಮಾಜಿಕ ಕಾರ್ಯಕರ್ತ ‘ಸ್ನೇಹಮಯಿ ಕೃಷ್ಣ’ ಎಂಬವರು ದೂರು ದಾಖಲಿಸಿದ್ದಾರೆ. ಪೊಲೀಸರಿಗೆ ದೂರು ನೀಡಿದ್ದಷ್ಟೇ ಅಲ್ಲದೆ, ರಾಜ್ಯಪಾಲ, ರಾಜ್ಯ ಮುಖ್ಯಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೂ ಪತ್ರ ಬರೆದಿದ್ದಾರೆ. ಪತ್ರದ ಮೂಲಕ ಸ್ನೇಹಮಯಿಕೃಷ್ಣ ಪ್ರಕರಣ ಸಂಬಂಧ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


