ಪಾವಗಡ: ತಾಲೂಕಿನ ಹಲವು ವರ್ಷಗಳ ಕನಸು ತುಂಗಾ ಭದ್ರಾ ಕುಡಿಯುವ ನೀರಿನ ಯೋಜನೆ ಕಾಮಗಾರಿಯನ್ನು ಪಂಚಾಯಿತಿ ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ಪರಿಶೀಲನೆ ನಡೆಸಿದರು.
ಬೆಳ್ಳಿಬಟ್ಟಲು ಮತ್ತು ಕಾರನಾಗನಹಟ್ಟಿ ಮಧ್ಯದಲ್ಲಿ ನಿರ್ಮಾಣವಾಗಿರುವ ಸುಮಾರು 13 ಲಕ್ಷ ಲೀಟರ್ ಸಾಮರ್ಥ್ಯದ ತುಂಗಭದ್ರಾ ಕುಡಿಯುವ ನೀರಿನ ಟ್ಯಾಂಕ್ ಬಳಿಗೆ ತೆರಳಿದ ಪ್ರಿಯಾಂಕ್ ಖರ್ಗೆ ಕಾಮಗಾರಿ ಪರಿಶೀಲನೆ ನಡೆಸಿದರು. ತುಂಗಾ ಭದ್ರೆಯಿಂದ ನೀರು ಸರಬರಾಜು ಮಾಡಲು ಪೈಪ್ ಲೈನ್ ಮಾಡಿರುವುದನ್ನು ನಕ್ಷೆಯ ಮೂಲಕ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು, ಶಾಸಕರಾದ ಹೆಚ್.ವಿ.ವೆಂಕಟೇಶ್ ಹಾಜರಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA