nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ

    November 6, 2025

    ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ

    November 6, 2025

    ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ

    November 6, 2025
    Facebook Twitter Instagram
    ಟ್ರೆಂಡಿಂಗ್
    • ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
    • ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
    • ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
    • ಖ್ಯಾತ ಖಳನಟ ಹರೀಶ್ ರಾಯ್  ನಿಧನ
    • ಬೀದರ್ | 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ
    • ಕುಣಿಗಲ್ | ಬೈಕ್‌ ಗೆ ಕಾರು ಡಿಕ್ಕಿ: ದಂಪತಿಯ ದಾರುಣ ಸಾವು
    • ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ
    • ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ರಕರ್ತರು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು: ಚವ್ಹಾಣ.
    ರಾಜ್ಯ ಸುದ್ದಿ July 22, 2024

    ಪತ್ರಕರ್ತರು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು: ಚವ್ಹಾಣ.

    By adminJuly 22, 2024No Comments2 Mins Read
    awrad

    ಔರಾದ್: ಪತ್ರಕರ್ತರು ಸಾಮಾಜಿಕ ನ್ಯಾಯಕ್ಕಾಗಿ ಜನರ ಧ್ವನಿಯಾಗಬೇಕು ಎಂದು ಮಾಜಿ ಸಚಿವ ಹಾಲಿ ಶಾಸಕ ಪ್ರಭು ಚವ್ಹಾಣ ಕರೆ ನೀಡಿದರು.

    ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಮೀಡಿಯಾ ಜರ್ನಲಿಸ್ಟ್ ಯುನಿಯನ್ ಸಂಘದಿಂದ ಆಯೋಜಿಸಿದ ತಾಲೂಕು ಮಟ್ಟದ ಪತ್ರಿಕಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು. ಎಲ್ಲೆಡೆ ನಿರೀಕ್ಷೆಗಳು ಹುಸಿಯಾದಾಗ ಜನಸಾಮಾನ್ಯರು ನ್ಯಾಯದ ಭರವಸೆ ಮಾಡುವುದು ಕೇವಲ ಪತ್ರಿಕಾ ಮಾಧ್ಯಮದ ಮೇಲೆ ಎಂಬುದನ್ನು ಅರಿಯಬೇಕು. ಪತ್ರಕರ್ತರ ಸಮಸ್ಯೆಗಳಿಗೆ ಸದಾ ಸ್ಪಂದಿಸುವ ಕೆಲಸ ಈ ಹಿಂದಿನಿಂದಲೂ ಮಾಡಿದ್ದು, ಮುಂದೆಯು ಸಹ ಮಾಡುತ್ತೇನೆ. ಪತ್ರಕರ್ತರ ಅನುಕೂಲಕ್ಕೆ ಜೀವವಿಮೆಯಂತಹ ಸೌಲಭ್ಯಗಳು ನೀಡುವ ಕುರಿತು ಯೋಚಿಸುತ್ತೇನೆ ಎಂದರು.


    Provided by
    Provided by

    ತಾಲೂಕಿನಲ್ಲಿ ಪತ್ರಿಕಾ ಭವನ ಇಲ್ಲದಿರುವುದು ನನ್ನ ಗಮನಕ್ಕೂ ಇದೆ. ಹಿಂದಿನಿಂದಲೂ ಭವನ ನಿರ್ಮಾಣದ ಕುರಿತು ಪತ್ರಕರ್ತರ ಜೊತೆ ಚರ್ಚಿಸಿದ್ದೇನೆ. ಪಟ್ಟಣ ಪ್ರದೇಶದಲ್ಲಿ ನಿವೇಶನ ದೊರೆತಲ್ಲಿ ಶೀಘ್ರ ಪತ್ರಿಕಾ ಭವನ ನಿರ್ಮಿಸಲು ಸಿದ್ದನಿರುವುದಾಗಿ ಭರವಸೆ ನೀಡಿದರಲ್ಲದೇ. ಎಲ್ಲ ಪತ್ರಕರ್ತರು ಒಂದಾಗಿ ತಾಲೂಕಿನ ಅಭಿವೃದ್ಧಿಗೆ ಶ್ರಮಿಸಿದರೆ ನನ್ನ ಕೆಲಸಕ್ಕೂ ವೇಗ ದೊರೆಯುತ್ತದೆ ಎಂದರು.

    ಹಿರಿಯ ಸಂಪಾದಕ ಸದಾನಂದ ಜೋಶಿ ಉಪನ್ಯಾಸ ನೀಡಿ ಮಾತನಾಡಿ, ಪತ್ರಕರ್ತರು ಸಮಾಜ ಸೇವಕರೇ ಹೊರತು ಅಧಿಪತಿಗಳಲ್ಲ. ಜನರ ನಿರೀಕ್ಷೆ ಹುಸಿಯಾಗದಂತೆ ಆತ್ಮಾವಲೋಕನ ಮಾಡಿಕೊಂಡು ಕೆಲಸ ಮಾಡಬೇಕು. ಪ್ರಸ್ತುತ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಿಂದ ಪತ್ರಿಕೆ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ ತೀರ ಹಿನ್ನಡೆ ಉಂಟಾದರೂ ಸಹ ವಿಶ್ವಾಸಾರ್ಹತೆಗೆ ಯಾವ ಧಕ್ಕೆ ಬಂದಿಲ್ಲ. ಸಮಾಜ ಪತ್ರಕರ್ತರಿಗೆ ನೋಡುವ ದೃಷ್ಟಿಕೋನ ಬದಲಾಗಬೇಕು. ಭಯ, ಆಡಂಬರ, ಪ್ರತಿಷ್ಠೆ ಪತ್ರಕರ್ತರ ಹತ್ತಿರಕ್ಕೂ ಸುಳಿಯಬಾರದು ಎಂದು ಕಿವಿಮಾತು ಹೇಳಿದರು.

    ಆಶ್ರಯ ಯೋಜನೆಯಡಿ ಪತ್ರಕರ್ತರಿಗೆ ಮನೆಗಳು ದೊರೆಯಲಿ:

    ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆಎಂಜೆಯು ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ವಾಮಿ ನಕಿರೆಕಂಟಿ ಮಾತನಾಡಿ, ಹಗಲಿರುಳು ಸಮಾಜದ ಅಭಿವೃದ್ಧಿಗಾಗಿ ದುಡಿಯುವ ಪತ್ರಕರ್ತರಿಗೆ ಆಶ್ರಯ ಯೋಜನೆಯಲ್ಲಿ ಮನೆಗಳು ದೊರೆಯಬೇಕು. ಆರೋಗ್ಯದ ದೃಷ್ಟಿಯಿಂದ ಆರೋಗ್ಯ ವಿಮೆಗಳು ಮಾಡಿಸಬೇಕು.

    ಪಪಂ ವಾರ್ಷಿಕ ಬಜೆಟ್‌ನಲ್ಲಿ ಕನಿಷ್ಟ 20 ಲಕ್ಷ ರೂಪಾಯಿ ಮೀಸಲಿಟ್ಟು ತುರ್ತು ಸಂದರ್ಭಗಳಲ್ಲಿ ಪಟ್ಟಣದ, ತಾಲೂಕಿನ ಪತ್ರಕರ್ತರಿಗಾಗಿ ವಿನಿಯೋಗಿಸಬೇಕು ಎಂದರು. ತಾಲೂಕಿನ ಎಲ್ಲ ಪತ್ರಿಕೆ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮದವರಿಗೆ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

    ಈ ಸಂದರ್ಭದಲ್ಲಿ ಪೂಜ್ಯ ಬಸವಲಿಂಗ ದೇವರು, ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ, ತಾ.ಪಂ. ಸಹಾಯಕ ನಿರ್ದೇಶಕ ಸುದೇಶ ಕುಮಾರ್, ಶಿವಕುಮಾರ್ ಘಾಟೆ, ಎಪಿಎಂಸಿ ಅಧ್ಯಕ್ಷ ಧೋಂಡಿಬಾ ನರೋಟೆ, ಹಿರಿಯ ಪತ್ರಕರ್ತ ಅನೀಲಕುಮಾರ್ ದೇಶಮುಖ, ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಶಿವರಾಜ ಅಲಮಾಜೆ, ಶಿವಾಜಿ ಪಾಟೀಲ್, ಸಂಘದ ಜಿಲ್ಲಾಧ್ಯಕ್ಷ ಪ್ರವೀಣಕುಮಾರ್, ತಾಲೂಕಾಧ್ಯಕ್ಷ ಸಂತೋಷ ಚಾಂಡೇಶ್ವರೆ, ಬಸವರಾಜ ಶಿವಪೂಜೆ, ರವೀಂದ್ರ ಮುಕ್ತೆದಾರ್, ರಾಮದಾಸ ಪಾಟೀಲ್, ಶಿವಕುಮಾರ್ ಬಿರಾದಾರ್, ಶಿವಾನಂದ ಬೇದ್ರೆ, ಅಂಕುಶ ವಾಡಿಕರ್, ಬಾಲಾಜಿ ಫಿರಂಗೆ, ಸಂದೀಪ ಪಾಟೀಲ್, ಅಮರ ಮುಕ್ತೆದಾರ್, ಸಂತೋಷ ದಿಂಡೆ, ಪ್ರಭುಲಿಂಗ, ಲಕ್ಷ್ಮಣ, ಶಿವರಾಜ, ದಯಾನಂದ ಬಿರಾದಾರ್ ಸೇರಿದಂತೆ ಇನ್ನಿತರರಿದ್ದರು. ಕಸಾಪ ಅಧ್ಯಕ್ಷ ಶಾಲಿವಾನ ಉದಗಿರೆ ಪ್ರಾಸ್ತಾವಿಕ ಮಾತನಾಡಿದರು. ಬಿಎಂ ಅಮರವಾಡಿ ನಿರೂಪಿಸಿದರು.

    ವರದಿ: ಅರವಿಂದ ಮಲ್ಲಿಗೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಖ್ಯಾತ ಖಳನಟ ಹರೀಶ್ ರಾಯ್  ನಿಧನ

    November 6, 2025

    ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ

    November 4, 2025

    ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

    November 4, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ

    November 6, 2025

    ತುಮಕೂರು: ತಾಲ್ಲೂಕಿನ ವಿವಿಧ ಕಡೆ ನವೆಂಬರ್ 7ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಲಿದೆ. ರಾಜ್ಯಪಾಲರಿಂದ ಜ್ಞಾನಸಿರಿ…

    ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ

    November 6, 2025

    ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ

    November 6, 2025

    ಖ್ಯಾತ ಖಳನಟ ಹರೀಶ್ ರಾಯ್  ನಿಧನ

    November 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.