ತುಮಕೂರು: ಅರ್ಹ ಫಲಾನುಭವಿಗಳು ತಾಲ್ಲೂಕು ಕಚೇರಿ ಹಾಗೂ ನಾಡ ಕಚೇರಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಪಿಂಚಣಿ ಸೌಲಭ್ಯವನ್ನು ಪಡೆಯಬೇಕೆಂದು ತಾಲೂಕು ಗ್ರೇಡ್ -2 ತಹಶೀಲ್ದಾರ್ ಕಮಲಮ್ಮ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ತುಮಕೂರು ತಾಲ್ಲೂಕು ವ್ಯಾಪ್ತಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿಂದು ಬನಶಂಕರಿ ದೇವಸ್ಥಾನದ ಬಳಿ ಹಮ್ಮಿಕೊಂಡಿದ್ದ ಪಿಂಚಣಿ ಆಂದೋಲನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರವು ಸಾಮಾಜಿಕ ಭದ್ರತೆ ಯೋಜನೆಯಡಿ ವಿವಿಧ ಮಾಸಾಶನಗಳನ್ನು ನೀಡುತ್ತಿದ್ದು, ಅರ್ಹ ಫಲಾನುಭವಿಗಳು ಸೂಕ್ತ ದಾಖಲೆಗಳನ್ನು ಕಂದಾಯ ಇಲಾಖೆ/ ನಾಡ ಕಚೇರಿಗೆ ಖುದ್ದು ಭೇಟಿ ನೀಡಿ ತಮ್ಮ ಹೆಸರು ನೋಂದಾಯಿಸಿ ಸೌಲಭ್ಯ ಪಡೆಯಬೇಕು ಎಂದು ತಿಳಿಸಿದರು.
ಆಂದೋಲನವು ಶಾಂತಿನಗರ–ವಿಶ್ವಣ್ಣ ಲೇಔಟ್ ನ ಮಸೀದಿ ಮುಂಭಾಗದ ಮೂಲಕ ಮರಳೂರು ದಿಣ್ಣೆಯ ಮೂಲಕ ಸಂಚರಿಸಿ ಪಿಂಚಣಿ ಸೌಲಭ್ಯಕ್ಕಾಗಿ ಅಗತ್ಯ ದಾಖಲೆಗಳ ಮಾಹಿತಿಯನ್ನು ಹೊಂದಿರುವ ಕರ ಪತ್ರಗಳನ್ನು ಹಂಚುವ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಶಿರಸ್ತೆದಾರ್ ನರಸಿಂಹರಾಜು, ಕಂದಾಯ ನಿರೀಕ್ಷಕರಾದ ಶಿವಾನಂದ ರೆಡ್ಡಿ, ಅಜಯ್, ಮಂಜುನಾಥ್, ಗ್ರಾಮ ಆಡಳಿತಾಧಿಕಾರಿಗಳಾದ ದೇವರಾಜು, ದಿವ್ಯ, ತಾಲೂಕು ಕಂದಾಯ ಇಲಾಖೆಯ ಅಧಿಕಾರಿ/ನೌಕರರು ಸೇರಿದಂತೆ ಮತ್ತಿತರರು ಜಾಥಾದಲ್ಲಿ ಭಾಗಿಯಾಗಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA