ಸರಗೂರು: ತಾಲ್ಲೂಕಿನ ನುಗು ಜಲಾಶಯದ ಹಿನ್ನೀರು ಭಾಗದಲ್ಲಿ ಇರುವ ಹಳೆಹೆಗ್ಗುಡಿಲು ಗ್ರಾಮದಲ್ಲಿ ಕಾಡಾನೆ ದಾಳಿಗೆ ಜೋಳ ತೋಟ ನಾಶವಾಗಿದೆ.
ಮುಳ್ಳೂರು ಗ್ರಾ.ಪಂ. ವ್ಯಾಪ್ತಿಯ ಹಳೆಹೆಗ್ಗುಡಿಲು ಗ್ರಾಮದಲ್ಲಿ ಎರಡು ಎಕರೆ ಜಮೀನಿನಲ್ಲಿ ಜೋಳ ಬೆಳೆಯಲಾಗಿದ್ದು, ಇನ್ನೂ ಒಂದೆರಡು ತಿಂಗಳಲ್ಲಿ ಕಟಾವು ಮಾಡುವ ಹಂತದಲ್ಲಿತ್ತು. ಆದರೆ ಶುಕ್ರವಾರ ರಾತ್ರಿ ವೇಳೆಯಲ್ಲಿ ಕಾಡಾನೆಗಳು ಏಕಾಏಕಿ ದಾಳಿ ನಡೆಸಿ ಬೆಳೆ ನಾಶ ಮಾಡಿವೆ.
ಹಳೆಹೆಗ್ಗುಡಿಲು ಗ್ರಾಮದ ರೈತ ಸುಂದರ ಎಂಬುವರ ಜಮೀನಲ್ಲಿ ಈ ಘಟನೆ ನಡೆದಿದೆ. ಸುಂದರ ಅವರು ಎಂದಿನಂತೆ ಹೊಲಕ್ಕೆ ಹೋದ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿದೆ. ಆನೆಗಳ ಕಾಲ್ತುಳಿತಕ್ಕೆ ಸಿಲುಕಿ ಎರಡು ತಿಂಗಳಲ್ಲಿ ಫಸಲು ನೀಡಬೇಕಾದ ಗಿಡಗಳು ಮುರಿದು ಬಿದ್ದಿವೆ. ಸಾವಿರಾರು ರೂಪಾಯಿ ವೆಚ್ಚ ಮಾಡಿ ಬೆಳೆದಿದ್ದ ಫಸಲನ್ನು ಆನೆಗಳು ತಿಂದು ನಷ್ಟ ಉಂಟು ಮಾಡಿವೆ.
ಬೆಳೆ ನಾಶದಿಂದ ರೈತರು ಆತಂಕಗೊಂಡಿದ್ದು, ಜಮೀನಿಗೆ ಹೋಗಲು ಭಯ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಅರಣ್ಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಕಾಡಾನೆಗಳನ್ನು ಸ್ಥಳಾಂತರಿಸಬೇಕು. ಬೆಳೆ ನಷ್ಟಕ್ಕೆ ಪರಿಹಾರ ನೀಡಬೇಕು’ ಎಂದು ಹಳೆಹೆಗ್ಗುಡಿಲು ಗ್ರಾಮದ ಮುಖಂಡರು ಒತ್ತಾಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA